ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ


Team Udayavani, Dec 16, 2020, 4:17 PM IST

ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ

ಮಂಡ್ಯ: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿರೈತರಿಂದ ಭತ್ತ ಖರೀದಿಸಲು ಜಿಲ್ಲೆಯಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದ್ದಾರೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕವ್ಯವಹಾರಗಳ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆಮಹಾಮಂಡಳಖರೀದಿಏಜೆನ್ಸಿಯಾಗಿಕಾರ್ಯನಿರ್ವಹಿಸುತ್ತಿದ್ದು, ಪ್ರತಿರೈತನಿಂದ ಗರಿಷ್ಠ 75 ಕ್ವಿಂಟಾಲ್‌ ಭತ್ತ ಸ್ವೀಕರಿಸಬಹುದಾಗಿದೆ.ಭತ್ತ (ಸಾಮಾನ್ಯ)ಕ್ಕೆ ನಿಗದಿಪಡಿಸಿರುವ ಕನಿಷ್ಠ ಬೆಂಬಲಬೆಲೆ ಕ್ವಿಂಟಾಲ್‌ಗೆ 1868 ರೂ. ಇದೆ.ಈ ಸಂಬಂಧಮಾನದಂಡಗಳನ್ವಯ ಏಫ್‌ಎಕ್ಯೂ ಗುಣ ಮಟ್ಟದ ಭತ್ತವನ್ನು, ಸರ್ಕಾರದ ನಿಗದಿಪಡಿಸಿರುವ ಬೆಲೆಯಂತೆ ರೈತರಿಂದ ಸ್ವೀಕರಿಸಬಹುದಾಗಿದೆ. ರೈತರ ನೋಂದಣಿ ಅವಧಿಯು 30 ನವೆಂಬರ್‌ 2020ರಿಂದ 30 ಡಿಸೆಂಬರ್‌2020ಆಗಿದೆ. ನೋಂದಾಯಿತರೈತರಿಂದಭತ್ತವನ್ನು ಖರೀದಿಸಿ, ಮಿಲ್‌ಗ‌ಳಲ್ಲಿ ಶೇಖರಿಸುವಮತ್ತು ಪರಿವರ್ತಿಸುವ ಕಾರ್ಯಾರಂಭ ಅವಧಿಯು ಡಿ.20ರಿಂದ ಮುಂದಿನ ಜನವರಿ 7ರವರೆಗೆನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಂದಣಿ ಕೇಂದ್ರಗಳು: ಮಂಡ್ಯ ಜಿಲ್ಲೆಯಲ್ಲಿ ಒಟ್ಟು 31 ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.ಮಂಡ್ಯದ ಕೆರಗೋಡು ರೈತ ಸಂಪರ್ಕ ಕೇಂದ್ರ, ಉಮ್ಮಡಹಳ್ಳಿರಾಜ್ಯ ಉಗ್ರಾಣ ನಿಗಮ ಆವರಣ, ಯಲಿಯೂರು ರಾಜ್ಯ ಉಗ್ರಾಣ ನಿಗಮ ಆವರಣ, ದುದ್ದ ರೈತಸಂಪರ್ಕ ಕೇಂದ್ರ, ಬಸರಾಳು ನಾಡಕಚೇರಿ, ಕೊತ್ತತ್ತಿ ರೈತ ಸಂಪರ್ಕ ಕೇಂದ್ರ,ಮದ್ದೂರಿನ ಎಪಿಎಂಸಿ ಆವರಣ, ಗ್ರಾಪಂ ಕೆ.ಎಂ.ದೊಡ್ಡಿ, ಗ್ರಾಪಂಕೊಪ್ಪ, ರಾಜ್ಯ ಉಗ್ರಾಣ ನಿಗಮ ಆವರಣ ಚಾಮನಹಳ್ಳಿ, ಗ್ರಾಪಂ ಕೆಸ್ತೂರು, ಮಳವಳ್ಳಿಯ ಎಪಿಎಂಸಿ ಆವರಣ, ರಾಜ್ಯ ಉಗ್ರಾಣನಿಗಮ ಆವರಣ ಕಿರುಗಾವಲು, ಹಲಗೂರು ರೈತಸಂಪರ್ಕ ಕೇಂದ್ರ, ಬಿ.ಜಿ.ಪುರ ನಾಡ ಕಚೇರಿ, ಕೆ.ಆರ್‌ .ಪೇಟೆಯ ಎಪಿಎಂಸಿ ಆವರಣ, ಕಿಕ್ಕೇರಿ ರೈತ ಸಂಪರ್ಕ ಕೇಂದ್ರ, ಬೂಕನಕೆರೆ ರೈತ ಸಂಪರ್ಕ ಕೇಂದ್ರ,ಅಕ್ಕಿ ಹೆಬ್ಟಾಳು ರೈತ ಸಂಪರ್ಕ ಕೇಂದ್ರ, ತೆಂಡೆಕೆರೆ ಗ್ರಾಪಂ, ಸಂತೇಬಾಚಹಳ್ಳಿ ರೈತ ಸಂಪರ್ಕ ಕೇಂದ್ರ, ಪಾಂಡವಪುರದ ಎಪಿಎಂಸಿ ಆವರಣ, ಜಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರ, ಚಿನಕುರಳಿ ರೈತ ಸಂಪರ್ಕ ಕೇಂದ್ರ, ಕ್ಯಾತನಹಳ್ಳಿ ಗ್ರಾಪಂ, ಶ್ರೀರಂಗಪಟ್ಟಣದ ಎಪಿಎಂಸಿ ಕಚೇರಿಬೆಂಗಳೂರು-ಮೈಸೂರು ಹೆದ್ದಾರಿ, ಪಿಎಸಿಎಸ್‌ ಅರಕೆರೆ, ರೈತ ಸಂಪರ್ಕ ಕೇಂದ್ರ ಬೆಳಗೋಳ,ಪಿಎಸಿಎಸ್‌ಕೆ.ಶೆಟ್ಟಹಳ್ಳಿ,ನಾಗಮಂಗಲದ ಎಪಿಎಂಸಿ ಆವರಣ, ಬೆಳ್ಳೂರು ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಗುಣಮಟ್ಟದ ಭತ್ತಸ್ವೀ ಕಾರ: ನೋಂದಾಯಿಸಿಕೊಂಡ ರೈತರ ಮೊಬೈಲ್‌ ಸಂಖ್ಯೆಗೆ ಸಂದೇಶ ಕಳುಹಿಸಲಾ ಗುತ್ತದೆ. ಮೊಬೈಲ್‌ಗೆ ಸಂದೇಶ ಸ್ವೀಕೃತವಾಗಿರುವರೈತರು ರೈಸ್‌ಮಿಲ್‌ಗೆ ಭತ್ತವನ್ನು ನೀಡುವ ಸಂದರ್ಭದಲ್ಲಿ ಸರ್ಕಾರವು ನಿಗದಿಪಡಿಸಿರುವಉತ್ತಮ ಸರಾಸರಿ ಗುಣಮಟ್ಟದಿಂದ ಕೂಡಿರಬೇಕು. ಉತ್ತಮ ಸರಾಸರಿ ಗುಣಮಟ್ಟ ಹೊಂದಿರದಭತ್ತವನ್ನು ಸ್ವೀಕರಿಸಲಾಗುವುದಿಲ್ಲ. ಆದ್ದರಿಂದ ರೈತರು

ಉತ್ತಮ ಗುಣಮಟ್ಟದ ಭತ್ತವನ್ನು ನೀಡಬೇಕು. ಯಾವುದೇ ಕಾರಣಕ್ಕೂ ಭತ್ತವನ್ನು ಮಧ್ಯವರ್ತಿಗಳಿಗೆಮಾರಾಟ ಮಾಡದೇ ಸರ್ಕಾರದ ಈ ಯೋಜನೆಯಡಿ ಸರಬರಾಜು ಮಾಡಿ ಸದುಪಯೋಗಪಡಿಸಿಕೊಳ್ಳಿ ಹಾಗೂ ಕೋವಿಡ್‌-19 ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿಲ್ಲಾಡಳಿತ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.