ಭೂಸ್ವಾಧೀನ ವಿರೋಧಿಸಿ ಹೋರಾಟ: ಪ್ರತಿಭಟನೆ ಕೈಬಿಡಲು ಬೊಮ್ಮಾಯಿ ಮನವಿ
Team Udayavani, Dec 16, 2020, 9:00 PM IST
ಹಾವೇರಿ: ಧಾರವಾಡ ಹೈಕೋರ್ಟ್ ನ ಹಿರಿಯ ವಕೀಲ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ನೀರಾವರಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ನಡಿತಿರೋ ಹೋರಾಟ ಮತ್ತು ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದ್ದೇನೆ ಎಂದು ಸತ್ಯಾಗ್ರಹನಿರತ ರೈತರ ಭೇಟಿ ನಂತರ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಪ್ರತಿಭಟನಾಕಾರರು ತುಂಗಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಗೊಂಡ ರೈತರಿಗೆ ಪರಿಹಾರ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಾರೆ. ನೀರಾವರಿಯ ಪೈಪಲೈನ್ ಕಾಮಗಾರಿಗೆ ಹತ್ತು ಮೀಟರ್ ಬದಲಾಗಿ ನಾಲ್ಕು ಮೀಟರ್ ಭೂಸ್ವಾಧೀನ ಮಾಡಲಾಗುವುದು. ಈ ಕುರಿತು ಕಂದಾಯ ಇಲಾಖೆಯ ಪ್ರಿನ್ಸಿಪಲ್ ಆಯುಕ್ತರು ಈಗಾಗಲೇ ಆದೇಶ ಮಾಡಿದ್ದಾರೆ.
ರೈತರ ಭೂಮಿ ಸ್ವಾಧೀನದ ಬದಲು ವಕೀಲರಾದ ಹಿರೇಮಠ ಅವರು ಪರ್ಯಾಯ ಮಾರ್ಗದ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಕೀಲರಾದ ಹಿರೇಮಠರು ಕಾನೂನಿನ ಜ್ಞಾನ ಉಳ್ಳವರಾಗಿದ್ದಾರೆ. ಅವರ ಜೊತೆಗೆ ಕುಳಿತು ಪರಿಹಾರದ ಬಗ್ಗೆ ಚರ್ಚಿಸಲಾಗುವುದು.
ಈ ಬಗ್ಗೆ ನಮ್ಮ ಸರಕಾರಕ್ಕೆ ಸಕಾರಾತ್ಮಕ ಚಿಂತನೆ ಇದೆ. ಇಲ್ಲಿ ನಡೆದ ಮಾತುಕತೆ ವಿಚಾರವನ್ನ ಸಿಎಂ ಜೊತೆಗೆ ಚರ್ಚಿಸಿ ಬಗೆಹರಿಸುತ್ತೇನೆ. ಸಿಎಂಗೆ ಇಲ್ಲಿ ನಡೆದ ಮಾತುಕತೆಯ ವರದಿಯನ್ನ ಹೇಳಿದ ಮೇಲೆ ಮತ್ತೊಮ್ಮೆ ಇಲ್ಲಿಗೆ ಬಂದು ವಕೀಲ ಹಿರೇಮಠ ಅವರ ಜೊತೆ ಮಾತುಕತೆ ಮಾಡುತ್ತೇನೆ. ಆ ಮಾತುಕತೆ ಫಲ ನೀಡುವ ವಿಶ್ವಾಸವಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಈ ಸ್ಮಾರ್ಟ್ ಪೋನ್ ಗಳಲ್ಲಿ 2021ರಿಂದ ವಾಟ್ಸಾಪ್ ಬಂದ್ – ಕಾರಣವೇನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!