ಸಭಾಪತಿ ರಾಜೀನಾಮೆ ತೀರ್ಮಾನ ಸಾಧ್ಯತೆ ?


Team Udayavani, Dec 17, 2020, 12:26 PM IST

ಸಭಾಪತಿ ರಾಜೀನಾಮೆ ತೀರ್ಮಾನ ಸಾಧ್ಯತೆ ?

ಬೆಂಗಳೂರು: ಸಭಾಪತಿ ವಿರುದ್ಧ ಅವಿಶ್ವಾಸ ವಿಚಾರದಲ್ಲಿ ಬಿಜೆಪಿ ಜತೆ ಜೆಡಿಎಸ್‌ ಬಹಿರಂಗವಾಗಿ ನಿಂತಿರುವುದರಿಂದ ಪ್ರತಾಪಚಂದ್ರ ಶೆಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಬಹುದು.

ರಾಜ್ಯಪಾಲರಸೂಚನೆಅಥವಾಮತ್ತೂಮ್ಮೆವಿಧಾನಪರಿಷತ್‌ ಅಧಿವೇಶನ ನಿಗದಿಗೆ ಮುನ್ನವೇ ಪ್ರತಾಪಚಂದ್ರ ಶೆಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಪದಚ್ಯುತಿ ವಿದ್ಯಮಾನಗಳಿಂದ ಬೇಸರಗೊಂಡು

ರಾಜೀನಾಮೆ ನೀಡಲು ಅವರು ತೀರ್ಮಾನಿಸಿದ್ದರು. ಆದರೆ,  ಪಕ್ಷದ ನಾಯಕರು ಬೇರೆ ಬೇರೆ ಕಾರಣಕ್ಕಾಗಿ ರಾಜೀನಾಮೆ ಕೊಡುವುದು ಬೇಡ ಎಂದು ತಿಳಿಸಿದ್ದರು. ಹೀಗಾಗಿ, ಒಲ್ಲದ ಮನಸ್ಸಿನಿಂದಲೇ ನಿರ್ವಹಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಮಂಗಳವಾರ ಪರಿಷತ್‌ನಲ್ಲಿ ನಡೆದ ವಿದ್ಯಮಾನಗಳುಕಾಂಗ್ರೆಸ್‌ ಪಕ್ಷಕ್ಕೂ ಮುಜುಗರವುಂಟಾಗಿದೆ ಎಂದು ಹೇಳಲಾಗಿದೆ. ಬಿಜೆಪಿ ಜತೆ ಜೆಡಿಎಸ್‌ನ ಪರಿಷತ್‌ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿ ಬಸವರಾಜ ಹೊರಟ್ಟಿ ಅವರು ಬಹಿರಂಗವಾಗಿಯೇ ಬಿಜೆಪಿಗೆ ಬೆಂಬಲ ಸಹ ಘೋಷಿಸಿದ್ದಾರೆ.

ಹೀಗಾಗಿ, ಎರಡೂ ಪಕ್ಷಗಳ ಬಲ 45 ಆಗುವುದರಿಂದ ರಾಜೀನಾಮೆ ನೀಡದೆ ಬೇರೆ ಮಾರ್ಗವಿಲ್ಲ ಎಂದು ಪಕ್ಷದ ವಲಯದಲ್ಲೂ ಅಭಿಪ್ರಾಯ ಪಡಲಾಗಿದೆ. ಇದರ ನಡುವೆ ಸಭಾಪತಿಯವರು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದಾರೆ. ಆದರೆ, ಕೆಲವು ನಾಯಕರು ಪರಿಷತ್‌ ಅಧಿವೇಶನದಲ್ಲಿ ಸಭಾಪತಿ ವಿಚಾರ ಮತಕ್ಕೆ ಹಾಕಿ ಅಲ್ಲೂ ಜೆಡಿಎಸ್‌ನವರ ಬೆಂಬಲ ದಾಖಲಾಗಲಿ ಎಂಬ ಅನಿಸಿಕೆ ಸಹ ವ್ಯಕ್ತಪಡಿಸಿದ್ದಾರೆ. ಕಾನೂನು ಹೋರಾಟ ಮಾಡೋಣ ಎಂಬ ವಾದ ಮುಂದಿಟ್ಟಿದ್ದಾರೆ. ಆದರೆ, ಆ ಮಟ್ಟದವರೆಗೂ ಮುಂದುವರಿಯುವುದು ಬೇಡ ಎಂಬುದೇ ಬಹುತೇಕ ನಾಯಕರ ಸಲಹೆ ಎಂದು ತಿಳಿದು ಬಂದಿದೆ.¨

ಇದನ್ನೂ ಓದಿ:ಬಜರಂಗದಳ ಕಂಟೆಂಟ್ ಮೇಲೆ ನಿಷೇಧ ಹೇರುವ ಅಗತ್ಯವಿಲ್ಲ: ಆಯೋಗಕ್ಕೆ ಫೇಸ್ ಬುಕ್ ಇಂಡಿಯಾ

ರಾಜ್ಯಪಾಲರಿಗೆ ವರದಿ ನೀಡಲು ಸಿದ್ಧತೆ

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ನಡೆದ ಘಟನಾವಳಿಗಳ ವಿವರವನ್ನು ವಿಧಾನಪರಿಷತ್‌ ಸಭಾಪತಿ ಕೆ. ಪ್ರತಾಪಚಂದ್ರಶೆಟ್ಟಿ ರಾಜ್ಯಪಾಲರಿಗೆ ವರದಿ ನೀಡಲು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಘಟನೆಯ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರೆ ಸಂಪೂರ್ಣ ವರದಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಪರಿಷತ್ತಿನಲ್ಲಿ ಕಲಾಪ ಆರಂಭಕ್ಕೂ ಮುನ್ನ ಬೆಳಗ್ಗೆ 11.15ಕ್ಕೆ ಕಾರ್ಯಕಲಾಪ ಪ್ರಾರಂಭಿಸಲು ಬೆಲ್‌ ಹಾಕಲು ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ನಾನು ನನ್ನ ಕಚೇರಿಯಲ್ಲಿಕುಳಿತಿರುವಾಗ ಪರಿಷತ್‌ಕಾರ್ಯದರ್ಶಿ ಕೋರಂ ಬೆಲ್‌ ಹಾಕಿದರು. ಬೆಲ್‌ ಕೊನೆಗೊಳ್ಳುವ ಮೊದಲೇ ಉಪಸಭಾಪತಿ ಏಕಾಏಕಿ ಯಾವುದೇ ಸೂಚನೆ ನೀಡದೆ ಸಭಾಪತಿ ಪೀಠ ಅಲಂಕರಿಸಿದರು. ತಕ್ಷಣ  ಸ‌ದನದಲ್ಲಿದ್ದ ಬಹುತೇಕ ಸದಸ್ಯರು ಸಭಾಪತಿ ಪೀಠವನ್ನು ಸುತ್ತುವರೆದು, ತಳ್ಳಾಟ, ನೂಕಾಟದಿಂದ ಗೊಂದಲದವಾತಾವರಣ ನಿರ್ಮಾಣ ಮಾಡಿದರು.

ಕೆಲವರು ಸಭಾಪತಿ ಪ್ರವೇಶಿಸುವ ಕಚೇರಿಯ ಬಾಗಿಲನ್ನು ಒಳಗಡೆಯಿಂದ ಚಿಲಕಹಾಕಿಕೊಂಡು,ಸಭಾಪತಿಗಳು ಸದನದಒಳಗಡೆಬರದಂತೆ ತಡೆಯುವಪ್ರಯತ್ನಗಳು ನಡೆದವು. ಈ ಎಲ್ಲ ಅಂಶಗಳನ್ನುಕಚೇರಿಯಲ್ಲಿಕುಳಿತು ಟಿವಿಯಲ್ಲಿ ವೀಕ್ಷಣೆ ಮಾಡಿದ್ದೇನೆ. ಈ ನಡುವೆ ಸಭಾಪತಿ ಪೀಠದ ಮೇಲೆ ಕುಳಿತುಕೊಂಡಿದ್ದ ಉಪಸಭಾಪತಿಯನ್ನುಕೆಲವು ಸದಸ್ಯರು ಬಲವಂತವಾಗಿ ಆ ಸ್ಥಾನದಿಂದ ತೆರವುಗೊಳಿಸುವುದನ್ನು ಗಮನಿಸಿದ್ದು, ತದ ನಂತರವೂ ಗದ್ದಲ ಮುಂದುವರೆದಿತ್ತು.

ಈ ಹಂತದಲ್ಲಿ ವಿಧಾನ ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ ನನ್ನಕಚೇರಿಗೆ ಬಂದು ಸದನದೊಳಗೆ ಇರುವ ಪರಿಸ್ಥಿತಿಯನ್ನು ನನಗೆ ಮನವರಿಕೆ ಮಾಡಿಕೊಟ್ಟು, ಸದನದ ಅಧಿಕಾರಿಗಳಿಗೂ ಭಯದ ವಾತಾವರಣ ಇದೆ ಎಂದು ತಿಳಿಸಿದರು.

ಆ ಕೂಡಲೇ ಬೆಲ್‌ ಆಫ್ ಮಾಡುವಂತೆ ಕಾರ್ಯದರ್ಶಿಗೆ ಸೂಚಿಸಿ, ದಂಡ ನಾಯಕರ ರಕ್ಷಣೆಯೊಂದಿಗೆ ನಾನು ಪೀಠಕ್ಕೆ ತೆರಳಿದಾಗಲೂ ಸದನದಲ್ಲಿ ಸದಸ್ಯರ ಕೂಗಾಟ, ಜಗ್ಗಾಟ ಮುಂದುವರೆದಿತ್ತು. ಅನಿವಾರ್ಯವಾಗಿ ಸದನವನ್ನು ಅನಿರ್ಧಿಷ್ಠಾ ವಧಿಗೆ ಮುಂದೂಡಲು ಪೀಠದಿಂದ ತೀರ್ಮಾನಿಸಿರುತ್ತೇನೆ. ಈ ಎಲ್ಲ ಅಂಶಗಳನ್ನು ಸದನದ ದೃಶ್ಯಾವಳಿಗಳಿಂದ ಖಾತರಿಪಡಿಸಿ ಕೊಳ್ಳಬಹುದು. ಅದರಂತೆ ಸದನವನ್ನು ಅನಿರ್ದಿಷ್ಠಾವಧಿಗೆ ಮುಂದೂಡುವ ಅಧಿಸೂಚನೆಯನ್ನು ಅನುಮೊದಿಸಿ ರುವುದಾಗಿ ವರದಿಯಲ್ಲಿ ತಿಳಿಸಿಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯಕಾನೂನು ಬಾಹಿರ ತೀರ್ಮಾನ ತೆಗೆದುಕೊಂಡಿಲ್ಲ. ಆದರೂ, ನನ್ನದೇ ತಪ್ಪು ಎನ್ನುವಂತೆ ಬಿಂಬಿಸಲಾಗುತ್ತಿದೆ. ನೋಟಿಸ್‌ಕೊಟ್ಟಾಗ ಬಿಜೆಪಿಗೆ ಬಹುಮತ ಇರಲಿಲ್ಲ. ಈಗಲೂ ನಾನು ನಡೆದುಕೊಂಡಿರುವ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ ಎಲ್ಲದಕ್ಕೂ ಸ್ಪಷ್ಟ ಉತ್ತರ ನೀಡುತ್ತೇನೆ.

ಕೆ. ಪ್ರತಾಪಚಂದ್ರ ಶೆಟ್ಟಿ, ಸಭಾಪತಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.