ಶಿಕ್ಷಕರ ವರ್ಗಾವಣೆ: ಯಥಾಸ್ಥಿತಿಗೆ ಕೆಎಟಿ ಆದೇಶ
Team Udayavani, Dec 17, 2020, 8:57 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: 2020-21ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರ ಸಾಮಾನ್ಯ ವರ್ಗಾವಣೆ ಕುರಿತು 2020ರ ನ.11ರಂದು ಹೊರಡಿಸಿರುವ ಅಧಿಸೂಚನೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ “ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ’ (ಕೆಎಟಿ) ಆದೇಶಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದಾಗಿ ತೊಂದರೆಗೆ ಸಿಲುಕಿರುವ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಮೊದಲ ಅದ್ಯತೆ ನೀಡದುದನ್ನು ಪ್ರಶ್ನಿಸಿ ಮೂಡಿಗೆರೆ ತಾಲೂಕಿನ ಹಾಲೇಹಳ್ಳಿ ಸ.ಪ್ರಾ.ಶಾಲೆಯ ಶಿಕ್ಷಕ ಬಿ.ಎನ್. ಮಹೇಶ್ವರಪ್ಪ ಹಾಗೂ ಇತರ 7 ಮಂದಿ ಅರ್ಜಿ ಸಲ್ಲಿಸಿದ್ದರು.
ಇದನ್ನು ವಿಚಾರಣೆ ನಡೆಸಿದ ಕೆಎಟಿಯ ಹಂಗಾಮಿ ಅಧ್ಯಕ್ಷ ನ್ಯಾ| ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರಿದ್ದ ಪೀಠ, ನ.11ರ ಅಧಿಸೂಚನೆಗೆ ಉಭಯ ಕಡೆಯವರು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಾಂತರ ಆದೇಶ ನೀಡಿ, ವಿಚಾರಣೆಯನ್ನು ಡಿ.23ಕ್ಕೆ ಮುಂದೂಡಿತು.
2016-17ನೇ ಸಾಲಿನ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಶಿಕ್ಷಕರು ತೊಂದರೆಗೆ ಸಿಲುಕಿದ್ದಾರೆ. ಅಲ್ಲದೆ, ಮೂರು ವರ್ಷಗಳಿಂದ ಕಾರಣಾಂತರಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಈಗ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಗೆ ಕೌನ್ಸಿಲ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು 2016-17ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿದವರಿಗೆ ಆದ್ಯತೆ ನೀಡಬೇಕಾಗಿತ್ತು. ಆದರೆ, 2019-20ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿರುವವರಿಗೆ ಆದ್ಯತೆ ನೀಡಲಾಗಿದೆ. ಆದ್ದರಿಂದ ಜಿಲ್ಲೆ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್