ಟ್ರಾಫಿಕ್‌ಗೆ “ಸಿಂಧನೂರು ಬೈಪಾಸ್‌’ ಪರಿಹಾರ

ರಸ್ತೆ ನಿರ್ಮಿಸಲು ಹೆದ್ದಾರಿ ಪ್ರಾಧಿಕಾರ ಉತ್ಸುಕ,ಭೂ ಸ್ವಾಧೀನಕ್ಕೆ 70 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ

Team Udayavani, Dec 18, 2020, 6:00 PM IST

ಟ್ರಾಫಿಕ್‌ಗೆ “ಸಿಂಧನೂರು ಬೈಪಾಸ್‌’ ಪರಿಹಾರ

ಸಿಂಧನೂರು: ನಗರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಹೆಚ್ಚುತ್ತಿರುವ ಟ್ರಾಪಿಕ್‌ ತಪ್ಪಿಸಲು ಬೈಪಾಸ್‌ ರಸ್ತೆ ನಿರ್ಮಾಣವೇ ಪರಿಹಾರವೆಂಬ ನಿಲುವಿಗೆ ಬಲ ಬಂದಿದ್ದು, ಸರಕಾರದ ಮಟ್ಟದಲ್ಲಿ ಈ ಬೇಡಿಕೆಗೆ ಮನ್ನಣೆ ದೊರಕಿದೆ.

ನಗರದ ಎಲ್ಲ ಮಾರ್ಗದಲ್ಲಿ ಮುಖ್ಯರಸ್ತೆ ದಾಟಲು ಅಲ್ಲಲ್ಲಿ ತಡೆಬೀಳುತ್ತಿರುವುದಕ್ಕೆ ಬೈಪಾಸ್‌ ನಿರ್ಮಾಣವೇ ಪರಿಹಾರವೆಂಬ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ. ಗಂಗಾವತಿ-ರಾಯಚೂರು, ಸಿಂಧನೂರು-ಕುಷ್ಟಗಿ ಮಾರ್ಗದ ಪ್ರಮುಖ ಹೆದ್ದಾರಿಗಳು ನಗರದ ಹೃದಯಭಾಗದಿಂದಲೇ ಹಾದುಹೋಗಿವೆ. ರಸ್ತೆ ವಿಸ್ತರಣೆಯಾಗಿದ್ದರೂ ವಾಹನಗಳ ದಟ್ಟಣೆ ಹೆಚ್ಚಿದೆ. ಟ್ರಾಫಿಕ್‌ ಪೊಲೀಸ್‌ ಠಾಣೆ ಸ್ಥಾಪನೆಯಾಗಿದ್ದರೂ ಮಹಾತ್ಮಗಾಂಧಿ  ವೃತ್ತವನ್ನು ದಾಟುವಷ್ಟರಲ್ಲೇ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಪ್ರತಿಭಟನೆ, ಧರಣಿ ವೇಳೆ ಸಂಚಾರತಡೆಗೂ ಮುಂದಾಗುವುದರಿಂದ ಮಹಾತ್ಮಗಾಂಧಿ  ವೃತ್ತದಲ್ಲಿ ಸುಗಮಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಬೈಪಾಸ್‌ನಿರ್ಮಾಣವಾದರೆ ದೂರದ ಊರಿನ ಪ್ರಯಾಣಿಕರ ಹಾದಿ ಸುಗಮವಾಗಲಿದೆ.

ಹೆದ್ದಾರಿ ಪ್ರಾಧಿಕಾರ ಉತ್ಸುಕ:

ಜೇವರ್ಗಿ-ಚಾಮರಾಜನಗರ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಂಧನೂರು ನಗರ ಹೊರಭಾಗದಲ್ಲಿ 12.5 ಕಿ.ಮೀ. ಉದ್ದದ ಬೈಪಾಸ್‌ ರಸ್ತ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ವಿಸ್ತೃತ ವರದಿ ಸಲ್ಲಿಸಿದೆ. ಈ ಮಾರ್ಗದ ಕುರಿತು ಪೀಡ್‌ಬ್ಯಾಂಕ್‌ ಕಂಪನಿ ವಾಹನಗಳ ದಟ್ಟಣೆ ಅವಲೋಕಿಸಿ ವರದಿ ನೀಡಿದೆ. ಗಂಗಾವತಿ ಮಾರ್ಗದ ಕೈಗಾರಿಕಾ ಪ್ರದೇಶದಿಂದ ಮಸ್ಕಿ ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಬೈಪಾಸ್‌ಗೆ ಅವಕಾಶವಿದೆ ಎನ್ನುವುದನ್ನು ತಿಳಿಸಲಾಗಿದೆ. ವೇಗಧೂತ ಬಸ್‌ಗಳು, ಖಾಸಗಿ ವಾಹನಗಳು ಈ ಮಾರ್ಗದಲ್ಲಿಸಾಗಿದರೆ, ನಗರ ಪ್ರವೇಶಿಸಬೇಕಾಗದ ಅನಿವಾರ್ಯತೆ ತಪ್ಪಲಿದೆ. ಅಗತ್ಯ ಜಮೀನನ್ನು ಸ್ವಾಧೀನಪಡಿಸಿಕೊಂಡು ಒಪ್ಪಿಸಿದರೆ, ತ್ವರಿತವಾಗಿ ಬೈಪಾಸ್‌ ನಿರ್ಮಿಸಿಕೊಡುವುದಕ್ಕೆ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ.

ಸರಕಾರಕ್ಕೆ ಸಲ್ಲಿಕೆ: ಬೈಪಾಸ್‌ ಅಗತ್ಯತೆ ಉಲ್ಲೇಖೀಸಿ ಸಂಸದ ಸಂಗಣ್ಣ ಕರಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಇದಕ್ಕೆ ಡಿಸಿಎಂ ಗೋವಿಂದ ಕಾರಜೋಳ ಅವರುಕೂಡ ಸಾಥ್‌ ನೀಡಿದ್ದಾರೆ. 12.5 ಕಿ.ಮೀ. ಮಾರ್ಗದಲ್ಲಿ ಅಗತ್ಯ ಬೀಳುವ ಜಮೀನನ್ನು ಸ್ವಾಧಿಧೀನಪಡಿಸಿಕೊಳ್ಳುವುದಕ್ಕಾಗಿ 70 ಕೋಟಿ ರೂ. ಅಗತ್ಯವೆಂದು ಅನುದಾನ ಕೋರಿ ರಾಜ್ಯ ಸರಕಾರಕ್ಕೆ ಬೇಡಿಕೆ ಇಡಲಾಗಿದೆ.

ಬೈಪಾಸ್‌ ನಿರ್ಮಾಣಕ್ಕೆ ಸಂಬಂಧಿಸಿ ಭೂಸ್ವಾಧೀನಕ್ಕಾಗಿ ಹಣ ನೀಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ರಾಜ್ಯ ಸರಕಾರದಿಂದ ಅನುದಾನ ದೊರಕಿದ ತಕ್ಷಣವೇ ಈ ಕೆಲಸ ಆರಂಭಗೊಳ್ಳಲಿದೆ. – ಸಂಗಣ್ಣ ಕರಡಿ, ಸಂಸದ

 

 

ಯಮನಪ್ಪ ಪವಾರ

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.