“ಸಪ್ತಪದಿ’ ಕಲ್ಯಾಣಕ್ಕೆ ಕೋವಿಡ್ ವಿಘ್ನ

ರಾಯಚೂರಿನ ಮೂರು ದೇಗುಲಗಳಲ್ಲಿ 440ಕ್ಕೂ ಹೆಚ್ಚು ನೋಂದಣಿ,ರದ್ದಾಯ್ತು ವಿವಾಹ

Team Udayavani, Dec 19, 2020, 5:53 PM IST

“ಸಪ್ತಪದಿ’ ಕಲ್ಯಾಣಕ್ಕೆ ಕೋವಿಡ್ ವಿಘ್ನ

ರಾಯಚೂರು: ಸರ್ಕಾರ ಜಾರಿಗೊಳಿಸಿದ್ದ ಸಪ್ತಪದಿ ಹೆಸರಿನ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಕೋವಿಡ್ ಅಡ್ಡಗಾಲುಹಾಕಿದೆ. ಜಿಲ್ಲೆಯ ಮೂರು ಪ್ರಮುಖ ದೇವಸ್ಥಾನಗಳಲ್ಲಿ ನೋಂದಣಿ ಮಾಡಿಸಿದ್ದ ಬಹುತೇಕ ವಿವಾಹಗಳು ರದ್ದಾಗುವ ಮೂಲಕ ಯೋಜನೆಗೆ ಆರಂಭಿಕ ವಿಘ್ನ ಉಂಟಾಗಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈ ವರ್ಷ ಶಾದಿಭಾಗ್ಯದ ಮಾದರಿಯಲ್ಲಿ ಸಪ್ತಪದಿಯೋಜನೆ ಅನುಷ್ಠಾನಗೊಳಿಸಿತ್ತು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂಥ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕವಿವಾಹ ಮಾಡಿಕೊಡುವ ಕಾರ್ಯಕ್ರಮ ಇದಾಗಿತ್ತು. ಕಳೆದ ಬೇಸಿಗೆಯಲ್ಲಿಯೇ ಕಾರ್ಯಕ್ರಮ ಆರಂಭಿಸಿತ್ತು. ಅದಕ್ಕೆ ಜಿಲ್ಲೆಯಲ್ಲೂ ವ್ಯಾಪಕ ಸ್ಪಂದನೆ ಸಿಕ್ಕಿತ್ತು. ಆದರೆ, ಕೋವಿಡ್‌-19 ಹಾವಳಿಯಿಂದ ಕಾರ್ಯಕ್ರಮಕ್ಕೆ ಹಿನ್ನಡೆಯಾಯಿತು.

ಎಲ್ಲ ಮದುವೆಗಳು ರದ್ದು: ಜಿಲ್ಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿ ಹಲವು ದೇವಸ್ಥಾನಗಳಲ್ಲಿದ್ದು, ಅದರಲ್ಲಿ ಮೂರು ಪ್ರಮುಖ ದೇವಸ್ಥಾನಗಳಿವೆ. ಸಿಂಧನೂರಿನ ಅಂಬಾ ಮಠದಲ್ಲಿ 300 ಅರ್ಜಿಗಳುಸಲ್ಲಿಕೆಯಾಗಿದ್ದರೆ, ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರ ದೇವಸ್ಥಾನದಲ್ಲಿ 100 ಹಾಗೂ ತಾಲೂಕಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದಲ್ಲಿ 40ಕ್ಕೂ ಅಧಿಕ ಮದುವೆಗಳು ನೋಂದಣಿಯಾಗಿದ್ದವು. ಆದರೆ, ಇನ್ನೇನು ಶುಭ ಮೂಹೂರ್ತದಲ್ಲಿಮದುವೆ ನಡೆಸಬೇಕು ಎನ್ನುವಷ್ಟರಲ್ಲಿ ಕೋವಿಡ್ ಹಾವಳಿ ಶುರುವಾಗಿ ಲಾಕ್‌ ಡೌನ್‌ ಜಾರಿಗೊಳಿಸಲಾಯಿತು. ಇದರಿಂದ ಜನ ಒಗ್ಗೂಡುವುದಕ್ಕೆ ಸರ್ಕಾರವೇ ನಿಷೇಧಹೇರಿದ್ದರಿಂದ ಸಪ್ತಪದಿ ಕೂಡ ರದ್ದಾಯಿತು.

ಬಹುತೇಕ ಮದುವೆ ಪೂರ್ಣ: ನೋಂದಣಿಯಾಗಿದ್ದ ಬಹುತೇಕ ಮದುವೆಗಳು ಲಾಕ್‌ಡೌನ್‌ ವೇಳೆಯಲ್ಲಿ ಮುಗಿದು ಹೋಗಿವೆ. ಕುಟುಂಬಸ್ಥರುತಮ್ಮಷ್ಟಕ್ಕೆ ತಾವು ಮದುವೆ ಮಾಡಿ ಮುಗಿಸಿದ್ದಾರೆ. ಕೆಲವರು ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಸ್ವ-ಗ್ರಾಮಗಳಲ್ಲೇ ಸರಳವಾಗಿ ಮದುವೆ ಮಾಡಿಕೊಂಡಿದ್ದಾರೆ. ಈಚೆಗೆ ಸರ್ಕಾರ ಮತ್ತೆ ಸಪ್ತಪದಿ ಆರಂಭಿಸಲು ಸೂಚನೆ ನೀಡಿದ್ದು, ನೋಂದಣಿ ಮಾಡಿಸಿದವರಿಗೆ ಕರೆ ಮಾಡಿದರೆ ಸ್ಪಂದನೆ ಸಿಗುತ್ತಿಲ್ಲ.

ಮುಂದುವರಿದ ಯೋಜನೆ: ಮೊದಲ

ಪ್ರಯತ್ನಕ್ಕೆ ಕೋವಿಡ್ ಅಡ್ಡಿ ಮಾಡಿದ್ದರೂಜನರಿಂದ ಸಿಕ್ಕ ಸ್ಪಂದನೆ ಸರ್ಕಾರಕ್ಕೂ ಪ್ರೇರಣೆನೀಡಿದೆ. ಹೀಗಾಗಿ ಮುಜರಾಯಿ ಸಚಿವರುಈಚೆಗೆ ಮತ್ತೂಮ್ಮೆ ಸಭೆ ನಡೆಸಿ ಸಪ್ತಪದಿಯೋಜನೆ ಮುಂದುವರಿಸಲು ಸೂಚನೆ ನೀಡಿದ್ದು, ಜನವರಿ, ಫೆಬ್ರವರಿಯಲ್ಲಿ ಆರು ದಿನಗಳನ್ನು ನಿಗದಿ ಮಾಡಿದ್ದಾರೆ. ಈ ಬಗ್ಗೆ ಪ್ರಚಾರ ನಡೆಸಿ ಬಡವರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಏನಿದು ಸಪ್ತಪದಿ?: ಬಡವರು ಮಕ್ಕಳ ಮದುವೆ ಮಾಡಲು ನಾನಾ ಕಷ್ಟ ಪಡುತ್ತಾರೆ.ಸಾಲ ಮಾಡಿ ದುಂದು ವೆಚ್ಚ ಮಾಡುತ್ತಾರೆ.ಅದರ ಬದಲಿಗೆ ಸರ್ಕಾರವೇ ಸಪ್ತಪದಿಯೋಜನೆ ಹೆಸರಿನಲ್ಲಿ ಸಾಮೂಹಿಕವಿವಾಹ ಮಾಡಲು ಮುಂದಾಗಿತ್ತು.ಈ ರೀತಿ ಮದುವೆಯಾದ ವರನಿಗೆ 5 ಸಾವಿರ ರೂ. ವಧುವಿಗೆ 10 ರೂ.ಹಾಗೂ 8 ಗ್ರಾಂ ತಾಳಿಯನ್ನು ಸರ್ಕಾರವೇನೀಡುತ್ತಿತ್ತು. ಇನ್ನು ಮದುವೆಗೆ ಬಂದವರಿಗೆ ಊಟದ ವ್ಯವಸ್ಥೆಯನ್ನು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಯೇ ನೋಡಿಕೊಳ್ಳಬೇಕಿತ್ತು. ಒಂದು ಬಾರಿ

25ರಿಂದ 50 ಮದುವೆಗಳನ್ನು ಮಾಡಲು ಅವಕಾಶವಿತ್ತು. ಅದಕ್ಕಿಂತ ಹೆಚ್ಚು ಮದುವೆ ನೋಂದಣಿಯಾಗಿದ್ದರೆ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇನ್ನು ಮದುವೆಯಾದಲ್ಲಿ ಸ್ಥಳದಲ್ಲೇ ಸಹಾಯಧನದ ಚೆಕ್‌ ವಿತರಿಸಿದರೆ,ಉಪನೋಂದಣಾಧಿಕಾರಿ ಮದುವೆ ನೋಂದಣಿ ಮಾಡಿ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಇತ್ತು.

ರಾಜ್ಯ ಸರ್ಕಾರ ಆರಂಭಿಸಿದ್ದ ಸಪ್ತಪದಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿತ್ತು. ಕೋವಿಡ್ ಕಾರಣಕ್ಕೆ ಯಾವ ಮದುವೆಗಳೂ ನಡೆದಿಲ್ಲ. ನೋಂದಣಿ ಮಾಡಿದವರನ್ನು ಸಂಪರ್ಕಿಸಿದ್ದು, ಅವರೆಲ್ಲ ಈಗಾಗಲೇ ಮದುವೆಗಳನ್ನು ಮುಗಿಸಿದ್ದಾರೆ. ಈಗ ಮತ್ತೂಂದು ಸೂಚನೆ ಬಂದಿದ್ದು ಜನವರಿ, ಫೆಬ್ರವರಿಯಲ್ಲಿ ಮತ್ತೆ ಮದುವೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಪ್ರಚಾರ ನೀಡಲಾಗುವುದು.  –ಸೆಲ್ವಮಣಿ, ದತ್ತಿ ಸಹಾಯಕ, ಧಾರ್ಮಿಕ ದತ್ತಿ ಇಲಾಖೆ, ರಾಯಚೂರು

 

-ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.