ತಲೆನೋವಾದ ಕೃಷಿ ಸಾಮಗ್ರಿ ಕಳವು

|ಹೊಳಲ್ಕೆರೆ ತಾಲೂಕಿನ ಗಡಿ ಭಾಗದಲ್ಲಿ ಬೆಲೆ ಬಾಳುವ ಶ್ರೀಗಂಧ-ಕೇಬಲ್‌ ಹೊತ್ತೂಯ್ಯುತ್ತಿರುವ ಕಳ್ಳರು

Team Udayavani, Dec 19, 2020, 6:40 PM IST

ತಲೆನೋವಾದ ಕೃಷಿ ಸಾಮಗ್ರಿ ಕಳವು

ಹೊಳಲ್ಕೆರೆ: ತಾಲೂಕಿನ ಗಡಿ ಭಾಗದ ಉಪ್ಪರಿಗೇನಹಳ್ಳಿ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ ಗ್ರಾಮಗಳಲ್ಲಿ ಕೃಷಿ ಬೆಳೆ ಹಾಗೂ ಪರಿಕರಗಳ ಕಳ್ಳತನ ಹೆಚ್ಚಾಗುತ್ತಿರುವುದು ರೈತರಿಗೆ ಸಮಸ್ಯೆ ತಂದೊಡ್ಡಿದೆ.

ಉಪ್ಪರಿಗೇನಹಳ್ಳಿ ವ್ಯಾಪ್ತಿಯ ಕೆರೆಯಾಗಲಹಳ್ಳಿಯಲ್ಲಿ ಬೆಳೆದಿರುವ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೇಬಲ್‌ ಕಳವು ಮಾಡಲಾಗಿದೆ. ಕೆರೆಯಾಗಲಹಳ್ಳಿಯಲ್ಲಿ ಸುಮಾರು ಎರಡ್ಮೂರು ತಿಂಗಳ ಅಂತರದಲ್ಲಿ 10 ಲಕ್ಷ ರೂ. ಮೌಲ್ಯದ 20 ಶ್ರೀಗಂಧ ಮರಗಳು ಕಳ್ಳತನವಾಗಿವೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದರೂ ಪ್ರಯೋಜನವಾಗಿಲ್ಲ. ಹೊಲಗಳಲ್ಲಿರುವ ಬೆಲೆ ಬಾಳುವ ವಸ್ತುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅಡಿಕೆ, ತೆಂಗು, ಬಾಳೆ, ವೀಳ್ಯದೆಲೆಯಂತಹ ತೋಟಗಾರಿಕೆ ಬೆಳೆಗಳ ಜೊತೆಗೆ ಹಣ್ಣು, ಹೂವು, ಕಾಯಿಪಲ್ಲೆಬೆಳೆಯಲಾಗುತ್ತಿದೆ. ರೈತರು ಕೊಳವೆಬಾವಿ ಹಾಕಿಸಿ ಮೋಟಾರ್‌ ಅಳವಡಿಸಿ ಪೈಪ್‌ಲೈನ್‌ ಹಾಕಲು ಲಕ್ಷಾಂತರ ರೂ. ವ್ಯಯಿಸಿರುತ್ತಾರೆ. ಆದರೆ ತೋಟ ಹಾಗೂ ಹೊಲಗಳಲ್ಲಿರುವ ಕೊಳವೆಬಾವಿಗಳ ಮೋಟಾರ್‌, ವೈರ್‌, ಪೈಪ್‌ಗಳ ಕಳ್ಳತನ ಕೃಷಿಕರನ್ನು ಸಂಕಷ್ಟಕ್ಕೆ ತಳ್ಳಿದೆ. ಚೌಡಗೊಂಡನಹಳ್ಳಿಯ ಲೋಕೇಶ್‌ ಎಂಬುವರ ತೋಟದ ಕೊಳವೆಬಾವಿಯೊಳಗಿನಮೋಟಾರ್‌ ಪಂಪ್‌ ಮೇಲೆತ್ತಿ ಕೇಬಲ್‌ ಕಳ್ಳತನ ಮಾಡಲಾಗಿದೆ.

ಅದೇ ರೀತಿ ಗೋವಿಂದಪ್ಪ ಬಿನ್‌ ಮೂಡಲಗಿರಿಯಪ್ಪ ಎನ್ನುವವರ 100 ಮೀಟರ್‌ ಕೇಬಲ್‌, ಮಂಜಣ್ಣ ಬಿನ್‌ ತಿಮ್ಮಪ್ಪ ಅವರ 20 ಮೀಟರ್‌, ತಿಮ್ಮಪ್ಪ ತಂದೆ ತೊರಿಯಪ್ಪಅವರ 30 ಮೀಟರ್‌, ರಂಗಪ್ಪ ಬಿನ್‌ ತಿಮ್ಮಪ್ಪ ಅವರ 20 ಮೀಟರ್‌, ಗಿರೀಶ್‌ ಬಿನ್‌ ಸಣ್ಣತಿಮ್ಮಪ್ಪ ಅವರ 30 ಮೀಟರ್‌, ನಾಗರಾಜ್‌ ಅವರ 20 ಮೀಟರ್‌, ಮಹೇಶ್ವರಪ್ಪ ಅವರ 40 ಮೀಟರ್‌, ಗಿರೀಶ್‌ ತಂದೆ ರಾಮಪ್ಪ ಅವರ 20 ಮೀಟರ್‌,ಕೃಷ್ಣಮೂರ್ತಿ ಬಿನ್‌ ದಾಸಭೋವಿ ರಾಮಪ್ಪ ಅವರ 20 ಮೀಟರ್‌ ಕೇಬಲ್‌ ಕಳ್ಳತನ ಮಾಡಲಾಗಿದೆ. ಇನ್ನಾದರೂತ್ತಿದ್ದರೂ ಪೊಲೀಸರು ಹಾಗೂ ಸಂಬಂಧಿಸಿದವರು ಈ ಬಗ್ಗೆ ಗಮನ ನೀಡಿ ರೈತರ ಸ್ವತ್ತುಗಳ ರಕ್ಷಣೆಗೆ ಮುಂದಾಗಬೇಕಿದೆ.

ಕಳ್ಳತನ ಮಾಡಿರುವ ವ್ಯಕ್ತಿಗಳನ್ನು ಪತ್ತೆ ಮಾಡಲು ವಿಶೇಷ ತಂಡ ರಚಿಸಲಾಗಿದೆ. ಮಾಲು ಸಹಿತ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. -ರವೀಶ್‌, ಸಿಪಿಐ, ಹೊಳಲ್ಕೆರೆ

ಇತ್ತೀಚೆಗೆ ನಡೆದ ಕಳ್ಳತನದಿಂದ ರೈತರು ಕಂಗೆಟ್ಟಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು.ತೋಟಗಳಲ್ಲಿ ಮೋಟಾರ್‌, ಕೇಬಲ್‌ ಕಳ್ಳತನವಾಗದಂತೆ ಹಳ್ಳಿಗಳಲ್ಲಿ ಗಸ್ತು ವ್ಯವಸ್ಥೆ ಮಾಡಬೇಕು. ಪೊಲೀಸರು ರಾತ್ರಿ ಪಾಳಿಯಲ್ಲಿ ಹಳ್ಳಿ ರಸ್ತೆಗಳ ಮೇಲೆ ಗಸ್ತು ತಿರುಗುವುದರಿಂದ ಕಳ್ಳತನ ತಪ್ಪಿಸಲು ಸಾಧ್ಯ. ಇಲ್ಲವಾದಲ್ಲಿ ಕೃಷಿ ಮಾಡುವುದು ಕಠಿಣವಾಗಲಿದೆ. -ಲೋಕೇಶ್‌, ಚೌಡಗೊಂಡನಹಳ್ಳಿ

ಶ್ರೀಗಂಧ ಮರಗಳ ದಿಂಡುಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗುತ್ತಿದ್ದರೂ ಪೊಲೀಸರುನಿರ್ಲಕ್ಷಿಸಿದ್ದಾರೆ. ಸರಕಾರದ ರಕ್ಷಣೆ ಇಲ್ಲದೆ ಬೆಳೆಗಾರ ಬೆಲೆ ಬಾಳುವ ಶ್ರೀಗಂಧ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಿಲ್ಲ.ಆದ್ದರಿಂದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಳ್ಳರು ರೈತರ ಪ್ರಾಣ ತೆಗೆದು ಕಳ್ಳತನ ಮಾಡುವ ಸ್ಥಿತಿ ನಿರ್ಮಾಣವಾಗಲಿದೆ. -ಕೆ.ಸಿ. ದಿನೇಶ್‌, ಉಪ್ಪರಿಗೇನಹಳ್ಳಿ

 

-ಎಸ್‌. ವೇದಮೂರ್ತಿ

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.