ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ


Team Udayavani, Dec 19, 2020, 6:45 PM IST

ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ಡಿಸೆಂಬರ್‌ 18, 19 ಮತ್ತು 21 ರಂದು ಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ. ಮೊದಲದಿನವಾದ ಶುಕ್ರವಾರದಂದು ಮೆರಿಟ್‌ ಸೀಟುಗಳಿಗೆಪ್ರವೇಶಾತಿ ಪ್ರಕ್ರಿಯೆ ಯಾವುದೇ ತೊಡಕುಗಳಿಲ್ಲದೆ ನಡೆಯಿತು.

19 ಹಾಗೂ 21 ರಂದು ಪೇಮೆಂಟ್‌ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಪ್ರಕಾರ ಶುಕ್ರವಾರ ಸಂಜೆ4 ಗಂಟೆಯ ಹೊತ್ತಿಗೆಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ. 65ರಷ್ಟು ಸೀಟುಗಳು ಭರ್ತಿಯಾಗಿದ್ದವು ಹಾಗೂ ಕೋವಿಡ್‌19 ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳು ಶನಿವಾರಮತ್ತು ಸೋಮವಾರ ವಿವಿಗೆ ಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಆನ್‌ಲೈನ್‌-ಆಫ್‌ಲೈನ್‌: ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್‌ಮತ್ತು ಆಫ್‌ಲೈನ್‌ನ ಎರಡೂ ಮಾದರಿಗಳಲ್ಲಿಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕಭರಿಸುವವರ ಸಂಖ್ಯೆ ಹೆಚ್ಚಾದಂತೆ ಮೂರು ಕೌಂಟರ್‌ಗಳನ್ನು ಬ್ಯಾಂಕಿನಲ್ಲಿ ತೆರೆಯಲಾಗಿತ್ತು. ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆ ವಿದ್ಯಾರ್ಥಿಗಳುಮತ್ತು ಪಾಲಕರು ಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯ ಪ್ರವೇಶ ಪ್ರಕ್ರಿಯೆಯನ್ನುಅಚ್ಚುಕಟ್ಟಾಗಿ ಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದ ಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ ಒಳಗೆ ಬಿಡುವ ಜೊತೆಗೆವಿಭಾಗಗಳಲ್ಲಿ ಕೂರಲು 6ಅಡಿ ಅಂತರ ನೀಡಿಕುರ್ಚಿಗಳನ್ನು ಹಾಕಲಾಗಿತ್ತು. ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಸೀಟು ಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜ ವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜ ವಿಜ್ಞಾನ, ವಾಣಿಜ್ಯಶಾಸ್ತ್ರ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುತ್ಛಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂಇದೇ ಕಟ್ಟಡಗಳಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳುಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್‌ ಕಟ್ಟಡದ ವಿವರ, ಮಾರ್ಗ ತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತ ಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು.

ಡಿಜಿಟಲ್‌ ಬೋರ್ಡ್‌ನಲ್ಲಿ ಮಾಹಿತಿ ಪ್ರದರ್ಶನ ;  ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನುಯಾವುದೇ ಗೊಂದಲಗಳಿಗೆ ದಾರಿಯಾಗದಂತೆಡಿಜಿಟಲ್‌ ಬೋರ್ಡ್‌ಗಳಲ್ಲಿ  ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್‌ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.