ತಿರುಪತಿ: ಸ್ಥಳೀಯರಿಗಷ್ಟೇ ವೈಕುಂಠ ದರ್ಶನ ಟಿಕೆಟ್ ವಿತರಿಸಲು ಟಿಟಿಡಿ ನಿರ್ಧಾರ
Team Udayavani, Dec 19, 2020, 9:17 PM IST
ತಿರುಪತಿ: ಪ್ರಸಕ್ತ ವರ್ಷ ವೈಕುಂಠ ದ್ವಾರ ದರ್ಶನ ಟೋಕನ್ಗಳನ್ನು ಕೇವಲ ಸ್ಥಳೀಯ ಭಕ್ತರಿಗಷ್ಟೇ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ನಿರ್ಧರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಲಿಪಿರಿ ಸಮೀಪದ ವಿಷ್ಣು ನಿವಾಸ ಮತ್ತು ಭೂದೇವಿ ಸಂಕೀರ್ಣದಲ್ಲಿ ಸರ್ವದರ್ಶನ ಟೋಕನ್ ವಿತರಣೆಯ ಕೌಂಟರ್ಗಳು ಡಿ.21(ಸೋಮವಾರ) ಸಂಜೆ 5 ಗಂಟೆಗೆ ಮುಚ್ಚಲಿವೆ. ಡಿ.22, 23 ಮತ್ತು 24ರ ದರ್ಶನ ಟೋಕನ್ಗಳನ್ನು ಕೂಡ ಸೋಮವಾರಕ್ಕೂ ಮುನ್ನವೇ ವಿತರಿಸಲಾಗುತ್ತದೆ. ತಿರುಪತಿಯ 5 ನಿಗದಿತ ಪ್ರದೇಶಗಳಲ್ಲಿ ಟೋಕನ್ ಲಭ್ಯವಿದ್ದು, ಸ್ಥಳೀಯರು ತಮ್ಮ ಆಧಾರ್ ಕಾರ್ಡ್ ತೋರಿಸಿ ಸರ್ವದರ್ಶನ ಟೋಕನ್ ಖರೀದಿಸಬಹುದು ಎಂದು ಟಿಟಿಡಿ ಹೇಳಿದೆ.
ಇದೇ ವೇಳೆ, ತಿರುಚನೂರಿನ ಶ್ರೀ ಪದ್ಮಾವತಿ ದೇವಿ ದೇಗುಲದ ದರ್ಶನದ ಸಮಯವನ್ನು ಇನ್ನೂ 1 ಗಂಟೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7.30ರಿಂದ ರಾತ್ರಿ 7ರವರೆಗೆ ದರ್ಶನಕ್ಕೆ ಅವಕಾಶವಿತ್ತು. ಈಗ ಅದನ್ನು ರಾತ್ರಿ 8ರವರೆಗೆ ವಿಸ್ತರಿಸಲಾಗಿದೆ. ಏಕನಾಥ ಸೇವೆ ರಾತ್ರಿ 8.30ಕ್ಕೆ ನಡೆಯಲಿದೆ ಎಂದು ಟಿಟಿಡಿ ತಿಳಿಸಿದೆ.
ಇದನ್ನೂ ಓದಿ:ಬ್ಯಾಂಕ್ ವಂಚನೆ ಪ್ರಕರಣ : ಟ್ರಾನ್ಸ್ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ