ಪಕ್ಷ ಬಯಸಿದ ಜವಾಬ್ದಾರಿ ಹೊರಲು ರಾಹುಲ್ ಗಾಂಧಿ ರೆಡಿ: ಕಾಂಗ್ರೆಸ್
Team Udayavani, Dec 20, 2020, 10:04 AM IST
ಹೊಸದಿಲ್ಲಿ: ಪಕ್ಷ ಬಯಸಿದ ಯಾವುದೇ ಜವಾಬ್ದಾರಿ ಹೊರಲು ನಾನು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಭಿನ್ನಮತೀಯರ ಸಭೆಯಲ್ಲಿ ರಾಹುಲ್ ಗಾಂಧಿ ಈ ಜವಾಬ್ದಾರಿ ವಹಿಸಿಕೊಳ್ಳುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸಮ್ಮುಖದಲ್ಲಿ ರೆಬೆಲ್ ಗಳ ಸಭೆ ನಡೆಯಿತು.
ನಿಮ್ಮೆಲ್ಲರ ಅಪೇಕ್ಷೆಯಂತೆ ನಾನು ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದರು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪವನ್ ಬನ್ಸಾಲ್ ಸಭೆಯ ನಂತರ ಹೇಳಿದರು. ಪಕ್ಷದೊಳಗೆ ಉತ್ತಮ ಸಂವಹನದ ಅಗತ್ಯವಿದೆ ಮತ್ತು ಪಕ್ಷವು ಬೂತ್ ಮಟ್ಟದಲ್ಲಿ ತನ್ನನ್ನು ಬಲಪಡಿಸುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ ಕ್ರಿಕೆಟ್ ಅಕ್ರಮ: ಫಾರೂಕ್ ಅಬ್ದುಲ್ಲಾಗೆ ಸೇರಿದ 11.86 ಕೋ.ರೂ. ಆಸ್ತಿ ವಶ
ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಬನ್ಸಾಲ್, ರಾಹುಲ್ ಗಾಂಧಿ ಬಗ್ಗೆ ಯಾರಿಗೂ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.
ರಾಜ್ಯಗಳ “ಪ್ರಧಾನ ಕಾರ್ಯದರ್ಶಿ ವಿಧಾನ” ವನ್ನು ಬದಲಿಸಬೇಕು, ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ಅಧಿಕಾರ ನೀಡಬೇಕು ಮತ್ತು ಕಾಂಗ್ರೆಸ್ ತನ್ನ ಮತದಾರರನ್ನು ಉಳಿಸಿಕೊಳ್ಳಲು ಸಹಾಯ ಮಾಡಲು ಬೂತ್ ಮಟ್ಟದ ಸಮಿತಿಗಳನ್ನು ಬಲಪಡಿಸಬೇಕು ಎಂದು ಚಿದಂಬರಂ ಸೂಚನೆ ನೀಡಿದ್ದಾರೆ ಎಂದು ವರದಿಗಳು ತಿಳಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ