ಹುಡುಗಾಟದ ಕಥೆ ಹುಡುಕಾಟದಲ್ಲಿ ಕೊನೆ


Team Udayavani, Dec 20, 2020, 2:41 PM IST

ಹುಡುಗಾಟದ ಕಥೆ ಹುಡುಕಾಟದಲ್ಲಿ ಕೊನೆ

ಅದೊಂದು ಕಾಲೇಜಿನಲ್ಲಿ ಯುವ ಉತ್ಸಾಹಿ ಹುಡುಗರ ತಂಡ. ಕ್ಯಾಂಪಸ್‌ನಲ್ಲಿ ಹುಡುಕಾಟ ಮಾಡಿಕೊಂಡು ಆರಾಮಾಗಿದ್ದ ಈ ಹುಡುಗರ ಗುಂಪು ಇದ್ದಕ್ಕಿದ್ದಂತೆ ರಿಸ್ಕ್ಒಂದನ್ನು ಮೈಮೇಲೆ ಎಳೆದುಕೊಳ್ಳುತ್ತದೆ. ಪ್ರೊಫೆಸರ್‌ ಒಬ್ಬರು ಹೇಳಿದ ಮಾತನ್ನು ಸವಾಲಾಗಿ ಸ್ವಿಕರಿಸಿ, ಯಾರೂ ವಾಪಾಸ್‌ ಬರದಂತಹ, ನಿಗೂಢತೆ-ರಹಸ್ಯಗಳನ್ನು ಹೊತ್ತ ದಟ್ಟಕಾಡಿಗೆ ಅಡಿಯಿಡುತ್ತದೆ. ಅಲ್ಲಿಯವರೆಗೂ ಕಾಲೇಜ್‌ ಕ್ಯಾಂಪಸ್‌ನಲ್ಲಿ ಸುತ್ತಾಡುತ್ತಿದ್ದ ನಾಲ್ಕು ಮಂದಿ ಹುಡುಗರು, ಇಬ್ಬರು ಹುಡುಗಿಯರು ನೋಡು ನೋಡುತ್ತಿದ್ದಂತೆ ಕಾಡುಪಾಲಾಗುತ್ತಾರೆ.ಹೀಗೆ ವಿಶೇಷವಾದ ಶಕ್ತಿಯೊಂದರ ರಹಸ್ಯ ಭೇದಿಸುವ ಸಲುವಾಗಿ ಕಾಡಿಗೆ ಹೋದ ಈ ಆರು ಮಂದಿ ಮತ್ತೆ ವಾಪಾಸ್‌ ಬರುತ್ತಾರಾ? ಕಾಡಿನ ನಿಗೂಢ ಶಕ್ತಿಯ ರಹಸ್ಯ ಭೇದಿಸುತ್ತಾರಾ? ಅನ್ನೋದು ಚಿತ್ರದ ಕ್ಲೈಮ್ಯಾಕ್ಸ್‌ ವೇಳೆಗೆ ಗೊತ್ತಾಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಆರ್‌.ಹೆಚ್‌ 100′ ಚಿತ್ರದ ಕಥೆಯ ಸಣ್ಣ ಎಳೆ.

ಆರಂಭದಲ್ಲಿ ಹುಡುಗಾಟದ ಮೂಲಕ ತೆರೆದುಕೊಳ್ಳುವ ಕಥೆ ನಂತರ ಹುಡುಕಾಟ ದವರೆಗೆ ಬಂದು ನಿಲ್ಲುತ್ತದೆ. ಚಿತ್ರದ ಮೊದಲಾರ್ಧ ಕೊಂಚ ಸ್ವಲ್ಪ ನಿಧಾನವಾದರೂ, ದ್ವಿತೀಯಾರ್ಧ ಚಿತ್ರಕಥೆ ಸ್ವಲ್ಪ ವೇಗ ಪಡೆದುಕೊಳ್ಳುತ್ತದೆ. ಮೆಡಿಕಲ್‌ ಮಾಫಿಯಾಕ್ಕೆ ಸಂಬಂಧಿಸಿದ ಕಥೆಯನ್ನು ಇಟ್ಟುಕೊಂಡು ಅದರಲ್ಲಿ ಸ್ನೇಹ, ಪ್ರೀತಿ, ಭಯ, ಛಲ, ತಮಾಷೆ, ಮತ್ಸರ, ಹಠ ಹೀಗೆ ಹಲವು ಅಂಶಗಳನ್ನು ಸೇರಿಸಿ ನಿರ್ದೇಶಕರು ತೆರೆಮೇಲೆ ಹೇಳುವ ಪ್ರಯತ್ನ ಮಾಡಿದ್ದಾರೆ. ಕಥೆಯ ಎಳೆ ಚೆನ್ನಾಗಿದ್ದರೂ, ಚಿತ್ರಕಥೆಯ ಕೆಲ ಸನ್ನಿವೇಶಗಳು ಕಥೆಯ ಓಟಕ್ಕೆ ಅಲ್ಲಲ್ಲಿ ಬ್ರೇಕ್‌ ಹಾಕುತ್ತದೆ. ನಿ

ರೂಪಣೆ, ಸಂಭಾಷಣೆಯ ಕಡೆಗೆ ನಿರ್ದೇಶಕರು ಇನ್ನಷ್ಟು ಗಮನ ನೀಡಿದ್ದರೆ, ಚಿತ್ರ ಪ್ರೇಕ್ಷಕರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಮುಟ್ಟುವ ಸಾಧ್ಯತೆಗಳಿದ್ದವು. ಉಳಿದಂತೆ ಚಿತ್ರದ ಬಹುತೇಕ ಹೊಸ ಕಲಾವಿದರದ್ದು ಪರವಾಗಿಲ್ಲ ಎನ್ನಬಹುದಾದ ಅಭಿನಯ. ಚಿತ್ರದ ಛಾಯಾಗ್ರಹಣ ಮತ್ತು ಸಂಗೀತ ಗಮನಸೆ ಳೆಯುತ್ತದೆ. ಸಂಕಲನ ಕಾರ್ಯ ಸ್ವಲ್ಪ ಮೊನಚಾಗಿದ್ದರೆ, ಚಿತ್ರದ ಓಟ ಇನ್ನಷ್ಟು ಹೆಚ್ಚುತ್ತಿತ್ತು. ಒಟ್ಟಾರೆ ಕೆಲ ಲೋಪಗಳನ್ನುಬದಿಗಿಟ್ಟು ನೋಡುವುದಾದರೆ, ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಆರ್‌.ಹೆಚ್‌ 100′ ಚಿತ್ರ ಹಾರರ್‌ ಸಿನಿಪ್ರಿಯರಿಗೆ ಇಷ್ಟವಾಗಬಹುದು.

 

ಚಿತ್ರ:ಆರ್‌.ಹೆಚ್‌ 100

ನಿರ್ದೇಶನ: ಮಹೇಶ್‌ ಎಂ.ಸಿ

ನಿರ್ಮಾಣ: ಎಸ್‌ಎಲ್‌ಎಸ್‌ ಪ್ರೊಡಕ್ಷನ್ಸ್‌

 ತಾರಾಗಣ: ಹರೀಶ್‌ ಕುಮಾರ್‌, ಗಣೇಶ್‌, ಚಿತ್ರಾ, ಸೋಮಶೇಖರ್‌, ಕಾವ್ಯಾ ಮತ್ತಿತರರು

 

 

– ಜಿ.ಎಸ್‌.ಕೆ ಸುಧನ್‌

ಟಾಪ್ ನ್ಯೂಸ್

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.