ಈ ಎರಡು ಗ್ರಾಮಕ್ಕೆ ಇದು ಕೊನೆ ಚುನಾವಣೆ?

ಎತ್ತಿನ ಹೊಳೆ ನೀರಿಗಾಗಿ ಬೈರಗೊಂಡ್ಲು ಜಲಾಶಯ ನಿರ್ಮಾಣದಿಂದ ಲಕ್ಕೇನಹಳ್ಳಿ, ಗರುಡಗಲ್ಲು ಗ್ರಾಮ ಮುಳುಗಡೆ

Team Udayavani, Dec 20, 2020, 5:43 PM IST

ಈ ಎರಡು ಗ್ರಾಮಕ್ಕೆ ಇದು ಕೊನೆ ಚುನಾವಣೆ?

ದೊಡ್ಡಬಳ್ಳಾಪುರ: ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತವಾಗಿ ನೀರುಣಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿವೆ.

ಈ ನಡುವೆ ಯೋಜನೆಗಳ ಕಾಮಗಾರಿಗಳ ಕೆಲಸ ನಿಗದಿತ ಸಮಯದಲ್ಲಿ ನಡೆದರೆ, ಸಾಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಲಕ್ಕೇನಹಳ್ಳಿ ಹಾಗೂ ಗರುಡಗಲ್ಲು ಗ್ರಾಮ ಮುಳುಗಡೆಯಾಗಲಿದ್ದು, ಬಹುಶಃ ಇಲ್ಲಿನ ಐದಾರು ಗ್ರಾಮಗಳಿಗೆ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಕೊನೆಯ ಚುನಾವಣೆಯಾಗಲಿದೆ.

ಎತ್ತಿನ ಹೊಳೆ ಯೋಜನೆಗಾಗಿ ನಿರ್ಮಾಣ ಗೊಳ್ಳಲಿರುವ ಬೈರಗೊಂಡ್ಲು ಜಲಾಶಯಕ್ಕೆ ದೊಡ್ಡ ಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ 11ಗ್ರಾಮಗಳು ಹಾಗೂ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ 17 ಗ್ರಾಮಗಳು ಮುಳುಗಡೆಯಾಗಲಿವೆ.

ಬೈರಗೊಂಡ್ಲು ಜಲಾಶಯ ನಿರ್ಮಾಣ: ಬೈರಗೊಂಡ್ಲು ಜಲಾಶಯದ ಏರಿ ಹಾಗೂ ಮುಳಗಡೆ ಪ್ರದೇಶ ತುಮಕೂರು ಜಿಲ್ಲೆಯಕೊರಟೆಗೆರೆ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲುಹೋಬಳಿಯಲ್ಲಿಗುರುತಿಸಲಾಗಿದೆ. ಏರಿಯ ಉದ್ದ 4.62 ಕಿ.ಮೀ. ಇದೆ. ಈ ಜಲಾಶಯದ ಒಟ್ಟಾರೆ ಮುಳುಗಡೆ ಪ್ರದೇಶ 5360 ಎಕರೆಯಾಗಿದೆ.

ಇದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಮಚ್ಚೇನಹಳ್ಳಿ, ಶ್ರೀರಾಮನಹಳ್ಳಿ, ಶಿಂಗೇನಹಳ್ಳಿ, ಗಾಣದಾಳು, ಕಣಕೇನಹಳ್ಳಿ, ನರಸಾಪುರ, ಆಲಪ್ಪನಹಳ್ಳಿ, ಬೈಯಪ್ಪನಹಳ್ಳಿ, ಅಂಕೋನಹಳ್ಳಿ ಗ್ರಾಮಗಳು ಭಾಗಶಃ ಹಾಗೂ ಲಕ್ಕೇನಹಳ್ಳಿ, ದಾಸರಪಾಳ್ಯ ಹಾಗೂ ಗರುಡಗಲ್ಲು ಗ್ರಾಮಗಳು ಪೂರ್ಣ, ಒಟ್ಟು11 ಗ್ರಾಮಗಳು ಭಾಗಶಃ, ತಾಲೂಕಿನ 2,678 ಎಕರೆ ಭೂಮಿ ಮುಳುಗಡೆಯಾಗಲಿವೆ. ಇದರಿಂದಾಗಿ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಾತ್ರ ಈ ಗ್ರಾಮಗಳ ಜನರು ಮತಚಲಾಯಿಸಲಿದ್ದಾರೆ. ನಂತರದ ದಿನಗಳಲ್ಲಿ ಈ ಗ್ರಾಮಗಳು ಎಲ್ಲಿ ನೆಲೆ ನಿಲ್ಲುತ್ತವೆ ಎನ್ನುವುದು ಇನ್ನೂ ನಿಗದಿಯಾಗಿಲ್ಲ.

ಮರೀಚಿಕೆಯಾದ ಅಭಿವೃದ್ಧಿ: ಸಾಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬೈರಗೊಂಡ್ಲು ಜಲಾಶಯಕ್ಕೆ ಮುಳುಗಡೆಯಾಗುತ್ತಿರುವ ಗರುಡಗಲ್ಲು – ಲಕ್ಕೇನಹಳ್ಳಿ 7ನೇ ವಾರ್ಡ್‌ನಲ್ಲಿ 533ಜನ ಮತದಾರರಿದ್ದಾರೆ. ಮಚ್ಚೇನಹಳ್ಳಿ – ದಾಸರಪಾಳ್ಯ ಗ್ರಾಮದಲ್ಲಿ 1150 ಜನ ಮತದಾರರಿದ್ದಾರೆ. ಎತ್ತಿನಹೊಳೆ ಯೋಜನೆಯ ಪ್ರಸ್ತಾಪ ಆರಂಭವಾದಾಗಿನಿಂದಲೂ ನಮ್ಮೂರಿನಲ್ಲಿಯಾವುದೇ ಅಭಿವೃದ್ಧಿ ಕೆಲಸಗಳು ಮಾತ್ರ ಇಲ್ಲಿಯವರೆಗೂ ನಡೆದಿಲ್ಲ.

ಮುಳುಗಡೆಯಾಗುತ್ತಿರುವ ಗ್ರಾಮದಲ್ಲಿ ಏಕೆ ಅಭಿವೃದ್ಧಿ ಕೆಲಸ ಎನ್ನುತ್ತಾರೆ ಅಧಿಕಾರಿಗಳು. ಆದರೆ,ಗ್ರಾಮವನ್ನು ಎಲ್ಲಿಗೆ ಸ್ಥಳಾಂತರ ಮಾಡುತ್ತೇವೆ ಎನ್ನುವ ಬಗ್ಗೆ ಮಾತ್ರ ಇಲ್ಲಿಯವರೆಗೂ ಯಾವುದೇ ಸ್ಪಷ್ಟತೆಇಲ್ಲದಾಗಿದೆ. ಈ ಹಿಂದೆ ಜಮೀನು ಅಳತೆ ಮಾಡಲು ಬಂದಿದ್ದಾಗ ಪೈಪ್‌ಲೈನ್‌ ಅಳವಡಿಸುವುದಾಗಿ ಹೇಳಿದ್ದರು. ಆದರೆ, ಈಗ ಗ್ರಾಮವೇ ಮುಳುಗಡೆ ಯಾಗುತ್ತಿದೆ. ಈ ಬಗ್ಗೆ ಜನ ಆತಂಕಗೊಂಡಿದ್ದಾರೆ.

ಸ್ಥಳಾಂತರ ಮಾಡುವ ಗ್ರಾಮದಲ್ಲಾದರೂ ಎಲ್ಲಾ ಮೂಲ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎನ್ನುವುದೇ ನಮ್ಮ ಕನಸಾಗಿದೆ ಎನ್ನುತ್ತಾರೆ ಗ್ರಾಮದ ವೀರೇಂದ್ರಕುಮಾರ್‌, ಪರ್ಯಾಯ ಮಾರ್ಗ ಇತ್ತು: ದೊಡ್ಡಬಳ್ಳಾಪುರ ತಾಲೂಕಿನ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತರೆ ತಾಲೂಕಿಗಳಲ್ಲಿನ ದೊಡ್ಡ ಕೆರೆಗಳನ್ನು ಅಭಿವೃದ್ಧಿ ಪಡಿಸಿ ನೀರು ಸಂಗ್ರಹಿಸಬಹುದಾಗಿತ್ತು. ಇದರಿಂದ ನಮ್ಮ ಹಿರಿಯರು ಬಾಳಿ ಬದುಕಿದ ಊರು ಉಳಿಯುತ್ತಿತ್ತು. ತಾಲೂಕಿನ ಎಲ್ಲಾಪ್ರದೇಶದಲ್ಲೂ ಅಂತರ್ಜಲವೂ ವೃದ್ಧಿಯಾಗುವಮೂಲಕ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುತ್ತಿತ್ತು ಎನ್ನುವುದು ರೈತರಾದ ಮುತ್ತರಾಯಪ್ಪ, ರಂಗಣ್ಣ, ರಾಜಣ್ಣ ಅವರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.