ಪ. ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ; ಈ ತೆರನಾದ ಜನಸ್ತೋಮ ನಾನೆಂದೂ ಕಂಡಿಲ್ಲ: ಅಮಿತ್ ಶಾ
Team Udayavani, Dec 20, 2020, 7:10 PM IST
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಜನರು ಬದಲಾವಣೆ ಬಯಸಿದ್ದು, ಭ್ರಷ್ಟಾಚಾರ, ರಾಜಕೀಯ ಹಿಂಸೆ, ಸುಲಿಗೆ, ಬಾಂಗ್ಲಾದೇಶಿಯರ ಒಳನುಸುಳುವಿಕೆ ಮುಂತಾದವನ್ನು ತೊಡೆದುಹಾಕಲು ತಯಾರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಬೋಲ್ ಪುರದಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನನ್ನ ಜೀವನದಲ್ಲಿ ಹಲವಾರು ರೋಡ್ ಶೋಗಳಲ್ಲಿ ಭಾಗಿಯಾಗಿದ್ದೇನೆ ಮತ್ತು ಆಯೋಜಿಸಿದ್ದೇನೆ. ಆದರೇ ಹಿಂದೆಂದಿಗಿಂತಲೂ ಹೆಚ್ಚು ಈ ಬಾರಿ ಜನ ಸೇರಿದ್ದಾರೆ. ಈ ತೆರನಾದ ರೋಡ್ ಶೋವನ್ನು ಎಂದೂ ಕಂಡಿಲ್ಲ. ಇದು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಜನರ ಆಕ್ರೋಶದ ಸಂಕೇತವಾಗಿದೆ. ಇಲ್ಲಿ ನೆರೆದಿರುವ ಜನಸ್ತೋಮ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ನಂಬಿಕೆಯಿಟ್ಟಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಜಿಎಫ್- 2 ಚಿತ್ರೀಕರಣ ಮುಕ್ತಾಯ: ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸರ್ಪ್ರೈಸ್ !
ಬಂಗಾಳದ ಸಾಂಸ್ಕೃತಿಕ ಮತ್ತು ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿತ್ವ ರವೀಂದ್ರ ನಾಥ್ ಟ್ಯಾಗೋರ್ ಅವರೊಂದಿಗೆ ನಿಕಟ ಭಾಂಧವ್ಯ ಹೊಂದಿರು ವಟ್ಟಣವಿದು. ಈ ಹಿಂದೆ ಬೆಂಗಾಲ್ ಆಫ್ ಗೋಲ್ಡ್ ಎಂದು ಕರೆಯುತ್ತಿದ್ದ ಇಲ್ಲಿನ ವೈಭವವನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಮರಳಿ ರೂಪಿಸಲಿದೆ ಎಂದು ತಿಳಿಸಿದ್ದಾರೆ.
ರೋಡ್ ಶೋ ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ವೇಳೆ ರಸ್ತೆಯೂದ್ದಕ್ಕೂ ಜೈಶ್ರೀರಾಮ್, ನರೇಂದ್ರ ಮೋದಿ ಜಿಂದಾಬಾದ್, ಮತ್ತು ಅಮಿತ್ ಶಾ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿದವು.
ಇದನ್ನೂ ಓದಿ: ಸಂಸತ್ ವಿಸರ್ಜಿಸಲು ನೇಪಾಳದ ಕ್ಯಾಬಿನೆಟ್ ಶಿಫಾರಸು-ಅನುಮೋದನೆ: ಏಪ್ರಿಲ್ ನಲ್ಲಿ ಚುನಾವಣೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!