ಮಾರಾಟದ ಮೇಲೆ ಹೊಡೆತ; 2021ರ ಜನವರಿಯಿಂದ ವಾಹನಗಳ ಬೆಲೆ ಹೆಚ್ಚಳ; ಆಟೋ ಕಂಪನಿ
ಇತ್ತೀಚೆಗಷ್ಟೇ ಬಜಾಜ್ ಆಟೋ ಲಿಮಿಟೆಡ್ ಮತ್ತು ರಾಯಲ್ ಎನ್ ಫೀಲ್ಡ್ ಬೆಲೆಯನ್ನು ಹೆಚ್ಚಿಸಿತ್ತು.
Team Udayavani, Dec 21, 2020, 2:48 PM IST
ನವದೆಹಲಿ: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬಹಳಷ್ಟು ನಷ್ಟ ಅನುಭವಿಸಿದ್ದ ಆಟೋಮೊಬೈಲ್ ಕಂಪನಿಗಳು ಇದೀಗ 2021ರ ಜನವರಿಯಿಂದ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡಲು ಯೋಜಿಸಿರುವುದಾಗಿ ವರದಿ ತಿಳಿಸಿದೆ.
ಕೈಗಾರಿಕಾ ಉತ್ಪನ್ನಗಳ ಬೆಲೆ ಹಾಗೂ ಇತರ ಬೆಲೆ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಜನವರಿಯಿಂದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಹೀರೋ ಮೋಟಾರ್ಸ್ ಕಾರ್ಪೋರೇಶನ್ ಲಿಮಿಟೆಡ್, ಹೋಂಡಾ ಮೋಟಾರ್ ಕಂಪನಿ ಮತ್ತು ಮಹೀಂದ್ರಾ ಆ್ಯಂಡ್ ಮಹೀಂದ್ರ ಲಿಮಿಟೆಡ್ ತಮ್ಮ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಘೋಷಿಸಿರುವುದಾಗಿ ದ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಇತ್ತೀಚೆಗಷ್ಟೇ ಬಜಾಜ್ ಆಟೋ ಲಿಮಿಟೆಡ್ ಮತ್ತು ರಾಯಲ್ ಎನ್ ಫೀಲ್ಡ್ ಬೆಲೆಯನ್ನು ಹೆಚ್ಚಿಸಿತ್ತು. ವಾಹನಗಳ ಮಾರಾಟದಲ್ಲಿ ಕುಸಿತ ತಡೆಯಲು 2020ರ ದೀಪಾವಳಿಯ ನಂತರ ಮಾರುಕಟ್ಟೆಯಲ್ಲಿ ವಾಯನಗಳ ಬೆಲೆಯಲ್ಲಿ ರಿಯಾಯಿತಿ ಘೋಷಿಸಲಾಗಿತ್ತು.
ಬೆಲೆ ಏರಿಕೆಯಿಂದ ವಾಹನ ಖರೀದಿಗಾಗಿ ಶೋರೂಂಗಳಿಗೆ ಬರುವ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ಆದರೂ ಕಳೆದ ಎರಡು ವರ್ಷಗಳಿಂದ ಮಾರುಕಟ್ಟೆ ಹೆಚ್ಚು ಚೇತರಿಕೆ ಕಂಡಿಲ್ಲ. ಅಷ್ಟೇ ಅಲ್ಲ 2020 ಕೈಗಾರಿಕಾ ಕ್ಷೇತ್ರಕ್ಕೆ ಭಾರೀ ಸಂಕಷ್ಟ ತಂದೊಡ್ಡಿರುವುದಾಗಿ ಹೆಸರು ಹೇಳಲು ಇಚ್ಚಿಸದ ಸಿಇಒ ತಿಳಿಸಿದ್ದಾರೆ.
2020ರ ಏಪ್ರಿಲ್ ನಲ್ಲಿ ಜಾರಿಗೆ ಬಂದ ಭಾರತ್ ಸ್ಟೇಜ್ 6ರ ವಾಯುಮಾನಲಿನ್ಯ ಪರಿಮಿತ ಮಾನದಂಡದ ಪ್ರಯಾಣಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.15ರಷ್ಟು ಏರಿಕೆ ಕಂಡಿತ್ತು. ಏತನ್ಮಧ್ಯೆ ಜುಲೈ1ರಿಂದ ಲೋಹದ ಬೆಲೆ ಶೇ.31ರಷ್ಟು ಹೆಚ್ಚಳವಾಗಿತ್ತು. ತಾಮ್ರ ಶೇ.32, ಸೀಸ ಶೇ.16ರಷ್ಟು, ಅಲ್ಯೂಮಿನಿಯಂ ಶೇ.28ರಷ್ಟು, ಕಚ್ಚಾ ಬೆಲೆ ಶೇ.24ರಷ್ಟು ಏರಿಕೆಯಾಗಿರುವುದಾಗಿ ಬ್ಲೂಮ್ ಬರ್ಗ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ