ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ, ಅದನ್ನು ನನ್ನ ಕಡೆಯಿಂದ ಹೇಳಿಸಬೇಡಿ: ಬಿ.ಸಿ.ಪಾಟೀಲ್
Team Udayavani, Dec 21, 2020, 4:31 PM IST
ಬೆಂಗಳೂರು: ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ. ಇಲ್ಲಿ ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ. ಅದನ್ನೆಲ್ಲಾ ನನ್ನ ಕಡೆಯಿಂದ ಹೇಳಿಸಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಯಾವ ಚುನಾವಣೆಗಳೂ ಇಲ್ಲ. ಗ್ರಾಮ ಪಂಚಾಯತಿ ಚುನಾವಣ ಪಕ್ಷದ ಚಿಹ್ನೆ ಮೇಲೆ ನಡೆಯಲ್ಲ, ಹೀಗಾಗಿ ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ ಎಂದರು.
ಇದನ್ನೂ ಓದಿ:ಸ್ವಂತ ಶಕ್ತಿಯಿಂದ ಅಧಿಕಾರದಲ್ಲಿದ್ದೇವೆ, ನಮಗೆ ಜೆಡಿಎಸ್ ಅನಿವಾರ್ಯವಲ್ಲ: ರೇಣುಕಾಚಾರ್ಯ
ಇಂದು ವಿಧಾನ ಸೌಧದ ಕಚೇರಿಯಲ್ಲಿ ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಹಾಗೂ ಉಡುಗಣಿ ತಾಳಗುಂದ ಹೊಸೂರು ಹೋಬಳಿಗಳ ಕೆರೆ ತುಂಬಿಸುವ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯ ಬಗ್ಗೆ ಪರಿಶೀಲನೆ ನಡೆಸಿ ಪ್ರಕ್ರಿಯೆ ತ್ವರಿತಗೊಳಿಸಲು ನಿರ್ದೇಶನ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ