ಕೈ ಹೊಸ್ತಿಲಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ?

ಮಾಜಿ ಶಾಸಕ ಹಂಪನಗೌಡರ ಜತೆ ಮಾತುಕತೆ,ಜೆಡಿಎಸ್‌ ಬಿಡದಂತೆ ಮನವೊಲಿಕೆ ಯತ್ನ

Team Udayavani, Dec 22, 2020, 4:43 PM IST

ಕೈ ಹೊಸ್ತಿಲಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ?

ಸಿಂಧನೂರು: ಕಳೆದ 12 ವರ್ಷಗಳಿಂದ ಸುದೀರ್ಘ‌ ಅವಧಿಯವರೆಗೆ ಜೆಡಿಎಸ್‌ ತಾಲೂಕು ಅಧ್ಯಕ್ಷರಾಗಿದ್ದ ಲಿಂಗಪ್ಪ ದಢೇಸುಗೂರು ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆಂಬ ಮಾತು ಕೇಳಿ ಬಂದಿವೆ.

ಅವರ ರಾಜೀನಾಮೆ ಪತ್ರ ಶನಿವಾರ ಸಾಮಾಜಿಕ ತಾಣದಲ್ಲಿ ಹರಿದಾಡಿದ ನಂತರದಲ್ಲಿ ಪಕ್ಷಾಂತರದ ಗುಮಾನಿ ಶುರುವಾಯಿತು. ಈ ಬೆಳವಣಿಗೆಬೆನ್ನಲ್ಲೇ ಶಾಸಕ ವೆಂಕಟರಾವ್‌ ನಾಡಗೌಡಅವರು ಲಿಂಗಪ್ಪ ಅವರ ನಿವಾಸಕ್ಕೆ ಭೇಟಿ ನೀಡಿಭಾನುವಾರ ಮಾತುಕತೆ ನಡೆಸಿದ್ದರು. ಹಲವು ಜೆಡಿಎಸ್‌ ಮುಖಂಡರು ಅವರ ಜತೆಯಲ್ಲಿ ಉಳಿದುವಾತಾವರಣ ತಿಳಿಸಿಗೊಳಿಸಿದ್ದಾಗಿ ಹೇಳಿದ್ದರು.ಎರಡು ದಿನ ಕಳೆದರೂ ಮನವೊಲಿಕೆಯ ಕಸರತ್ತುಮುಂದುವರಿದಿದ್ದು, ಒಳಗೊಳಗೆ ಮತ್ತೂಂದುರಾಜಕೀಯ ಬೆಳವಣಿಗೆ ನಡೆದಿದೆ ಎಂಬ ಗುಮಾನಿಗೆ ಆಸ್ಪದ ನೀಡಿದೆ.

ಕಾಂಗ್ರೆಸ್‌ ಸೇರಲು ಉತ್ಸುಕ: ಗ್ರಾಮ ಪಂಚಾಯಿತಿ ಚುನಾವಣೆ ಹೊತ್ತಿನಲ್ಲಿ ಪಕ್ಷಸೇರ್ಪಡೆ ಚಟುವಟಿಕೆಗಳು ಎಲ್ಲ ಪಕ್ಷದಲ್ಲೂ ಚುರುಕಾಗಿವೆ.ಇದೇ ಸಮಯದಲ್ಲಿ ಜೆಡಿಎಸ್‌ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂಬ ಸಂಗತಿ ಗೊತ್ತಾದ ನಂತರ ಕಾಂಗ್ರೆಸ್‌ ಆಹ್ವಾನ ನೀಡಿದೆ.ಮಾಜಿ ಶಾಸಕ ಹಂಪನಗೌಡ ಬಾದರ್ಲಿ  ಅವರೊಂದಿಗೆ ಒಂದು ಸುತ್ತಿನ ಮಾತುಕತೆಯಾಗಿದ್ದು, ಕಾಂಗ್ರೆಸ್‌ ಸೇರ್ಪಡೆ ಮುಹೂರ್ತಅಂತಿಮಗೊಳಿಸಲಾಗಿದೆ. ಮುಂದಿನ ಜಿಪಂ, ತಾಪಂ ಚುನಾವಣೆ ಸಂದರ್ಭದಲ್ಲಿ ಸೂಕ್ತ ಜವಾಬ್ದಾರಿ ಕೊಡುವ ಬಗ್ಗೆ ಆಫರ್‌ ನೀಡಿದ್ದು, ಒಪ್ಪಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ.

ಮನೆಗೆ ಜೆಡಿಎಸ್‌ ನಿಯೋಗ: ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಸುಳಿವು ದೊರೆಯುತ್ತಿದ್ದಂತೆ 2ನೇ ದಿನ ಜೆಡಿಎಸ್‌ ಮುಖಂಡರಾದ ಧರ್ಮನಗೌಡ ಮಲ್ಕಾಪುರ, ಜಿಲಾನಿಪಾಷಾ, ಸತ್ಯನಾರಾಯಣ ದಾಸರಿ ಹಾಗೂ ವೆಂಕೋಬ ಕಲ್ಲೂರು ಅವರಿದ್ದನಿಯೋಗ ಲಿಂಗಪ್ಪ ಅವರ ನಿವಾಸಕ್ಕೆ ತೆರಳಿ, ಪಕ್ಷ ಬಿಡದಂತೆ ಮನವೊಲಿಸಲು ಯತ್ನಿಸಿದೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಜೆಡಿಎಸ್‌ ಮುಖಂಡರು, ಲಿಂಗಪ್ಪ ಅವರು ಯಾವುದೇ ಕಾರಣಕ್ಕೂ ಪಕ್ಷಬಿಡಲ್ಲ. ಭಿನ್ನಾಭಿಪ್ರಾಯ ಸರಿ ಹೋಗಿವೆ ಎಂದರು.

ಶಾಸಕರ ಸಹೋದರರೊಬ್ಬರ ಜತೆಯಲ್ಲೇ ಮುನಿಸಿಕೊಂಡಿರುವುದರಿಂದ ಮಾತುಕತೆ ಫಲಪ್ರದವಾಗುವ ಲಕ್ಷಣಗಳಿಲ್ಲ ಎನ್ನಲಾಗಿದೆ. ಈಗಾಗಲೇ ಜೆಡಿಎಸ್‌ ತಾಲೂಕಾಧ್ಯಕ್ಷರ ಸಹೋದರ ನಾಗರಾಜ್‌ ಸಾಹುಕಾರ್‌ ಅವರು ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದಾರೆ. ತಮ್ಮ ಹೋದ ಮೇಲೆಅಣ್ಣ ಕಾಂಗ್ರೆಸ್‌ ಸೇರುವುದರಲ್ಲಿ ಅನುಮಾನವೇ ಇಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಅತ್ತ ತಡೆಯುವ ಕಸರತ್ತು ಸಾಗಿದ್ದರೆ, ಇತ್ತ ತಮ್ಮ ಪಕ್ಷದತ್ತ ಸೆಳೆಯುವ ವಿದ್ಯಮಾನಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

ಕಾಂಗ್ರೆಸ್‌ನವರು ಮನೆಗೆ ಬಂದು ಹೋಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸೇರ್ಪಡೆಯಾಗುವವನಿದ್ದೆ. ಆದರೆ, ಹಲವರು ನನ್ನನ್ನು ಬಿಡುತ್ತಿಲ್ಲ. ಸದ್ಯ ಬೇಡ; ಮುಂದೆ ನಾವೆಲ್ಲರೂ ಹೋಗೋಣ ಎನ್ನುತ್ತಿದ್ದಾರೆ. –ಲಿಂಗಪ್ಪ ದಢೇಸುಗೂರು ತಾಲೂಕಾಧ್ಯಕ್ಷ, ಜೆಡಿಎಸ್‌

 

-ಯಮನಪ್ಪ ಪವಾರ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.