ಗೆದ್ದ ಮತದಾರ : ಗ್ರಾ.ಪಂ.: ಒಟ್ಟು ಶೇ. 80; ಕರಾವಳಿ-ಶೇ. 75 ಮತದಾನ
Team Udayavani, Dec 23, 2020, 6:01 AM IST
ಉಡುಪಿ: ಹಿರೇಬೆಟ್ಟು ಗ್ರಾಮ ವ್ಯಾಪ್ತಿಯ ಮತಗಟ್ಟೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಮತದಾನ ನಡೆಯಿತು.
ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆ ಮಂಗಳವಾರ ನಡೆದ ಮೊದಲ ಹಂತದ ಗ್ರಾ.ಪಂ. ಚುನಾವಣೆಗೆ ಮತದಾರರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿ ಮತದಾನ ಶಾಂತಿಯುತವಾಗಿ ನಡೆದಿದೆ. ಒಟ್ಟು ಶೇ. 80ರಷ್ಟು ಮತದಾನವಾಗಿದೆ.
ಮತದಾನದಲ್ಲಿ ಗ್ರಾಮೀಣ ಜನರು ಉತ್ಸಾಹ ತೋರಿಸುತ್ತಾರೆ ಎಂಬುದಕ್ಕೆ ಗ್ರಾ.ಪಂ ಚುನಾವಣೆ ಮತ್ತೂಮ್ಮೆ ಸಾಕ್ಷಿ ನೀಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ನಿರ್ಬಂಧಗಳಿದ್ದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಮತದಾನದ ವೇಳೆ ಬಹುತೇಕ ಎಲ್ಲ ಕಡೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿರುವ ಬಗ್ಗೆ ವರದಿಯಾಗಿದೆ.
ಮೊದಲ ಹಂತದ ಮತದಾನದಲ್ಲಿ ಗ್ರಾಮೀಣ ಜನರು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಯಾವುದೇ ದೊಡ್ಡ ಗೊಂದಲಗಳಿಲ್ಲದೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಕೊರೊನಾ ಭೀತಿ ಅಷ್ಟೊಂದು ಕಂಡು ಬಂದಿಲ್ಲ. ಆದರೆ ಕೋವಿಡ್-19 ಮಾರ್ಗಸೂಚಿಗಳನ್ನು ಗರಿಷ್ಠ ಪಾಲಿಸಲಾಗಿದೆ.
– ಡಾ| ಬಿ. ಬಸವರಾಜು, ರಾಜ್ಯ ಚುನಾವಣ ಆಯುಕ್ತ
ಕರಾವಳಿ: ಶೇ. 75ರಷ್ಟು ಮತದಾನ
ಉಡುಪಿ/ ಮಂಗಳೂರು, ಡಿ. 22: ಕರಾವಳಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮೊದಲ ಹಂತದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದರು. ಉಳ್ಳಾಲ ಭಾಗದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯ ಹೊರತಾಗಿ ಮತದಾನ ಶಾಂತಿಯುತವಾಗಿತ್ತು.
ದಕ್ಷಿಣ ಕನ್ನಡ ಶೇ. 75.05
ಉಡುಪಿ ಶೇ. 74.10
ಗರಿಷ್ಠ
ಉಡುಪಿ: ಹೆಬ್ರಿ ತಾಲೂಕು ಶೇ. 79.41
ದ.ಕ.: ಬಂಟ್ವಾಳ ತಾಲೂಕು ಶೇ. 77.77
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ