ಐಪಿಎಲ್‌ ತಂಡಗಳ ಸಂಖ್ಯೆ; ಇಂದಿನ ಬಿಸಿಸಿಐ ಸಭೆಯಲ್ಲಿ ಇತ್ಯರ್ಥ


Team Udayavani, Dec 24, 2020, 6:20 AM IST

ಐಪಿಎಲ್‌ ತಂಡಗಳ ಸಂಖ್ಯೆ; ಇಂದಿನ ಬಿಸಿಸಿಐ ಸಭೆಯಲ್ಲಿ ಇತ್ಯರ್ಥ

ಅಹ್ಮದಾಬಾದ್: ಗುರುವಾರ ಬಿಸಿಸಿಐನ 89ನೇ ವಾರ್ಷಿಕ ಸರ್ವಸದಸ್ಯರ ಸಭೆ ನಡೆಯಲಿದೆ. ಹಲವು ಕಾರಣಗಳಿಂದ ಇದು ಮಹತ್ವ ಪಡೆದಿದೆ. ಎಲ್ಲಕ್ಕಿಂತ ಮುಖ್ಯವಾಗಿ ಐಪಿಎಲ್‌ ತಂಡಗಳ ಸಂಖ್ಯೆ 10ಕ್ಕೆ ಏರಿಸುವ ಬಗ್ಗೆ ನಿರ್ಧಾರವಾಗಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪೂರ್ಣ ತೆರಿಗೆವಿನಾಯಿತಿಯನ್ನು ಸರಕಾರದಿಂದ ಪಡೆಯುವ ಕುರಿತು ಖಚಿತ ತೀರ್ಮಾನಕ್ಕೆ ಬರಲಾಗುವುದು. ಆಯ್ಕೆ ಮಂಡಳಿಗೆ ಮೂವರು ಹೆಚ್ಚುವರಿ ಸದಸ್ಯರ ಸೇರ್ಪಡೆ, ಅಧ್ಯಕ್ಷ ಸೌರವ್‌ ಗಂಗೂಲಿ ಮೇಲಿರುವ ಸ್ವಹಿತಾಸಕ್ತಿ ಸಂಘರ್ಷದ ಆರೋಪ ಇವೆಲ್ಲ ಚರ್ಚೆಯಾಗುವ ನಿರೀಕ್ಷೆಯಿದೆ.

ಬಿಸಿಸಿಐ ಉಪಾಧ್ಯಕ್ಷರಾಗಿ ರಾಜೀವ್‌ ಶುಕ್ಲಾ ಅಧಿಕೃತವಾಗಿ ಆಯ್ಕೆಯಾಗ ಲಿದ್ದಾರೆ. ಸದ್ಯ ಅವರೊಬ್ಬರೇ ಉಮೇದುವಾರ ರಾಗಿರುವುದರಿಂದ ಅವಿರೋಧ ಆಯ್ಕೆ ನಿರೀಕ್ಷಿತ. ಐಪಿಎಲ್‌ ಮುಖ್ಯಸ್ಥರಾಗಿ ಬೃಜೇಶ್‌ ಪಟೇಲ್‌ ಮುಂದುವರಿಯಲಿದ್ದಾರೆ.

ಐಪಿಎಲ್‌ಗೆ 10 ತಂಡ?
ಮುಂದಿನ ವರ್ಷ ಎಪ್ರಿಲ್‌-ಮೇ ತಿಂಗಳಲ್ಲಿ 14ನೇ ಆವೃತ್ತಿ ಐಪಿಎಲ್‌ ನಡೆಯಲಿದೆ. ಆ ವೇಳೆ ತಂಡಗಳ ಸಂಖ್ಯೆಯನ್ನು 8ರಿಂದ 10ಕ್ಕೆ ಏರಿಸಲು ಸಾಧ್ಯವೇ? ಅಥವಾ ಸಂಖ್ಯೆಯನ್ನು 10ಕ್ಕೆ ಏರಿಸಲು ಒಪ್ಪಿಗೆ ಪಡೆದು 2022ರಲ್ಲಿ ಇದನ್ನು ಜಾರಿಗೊಳಿಸುವುದೇ? ಇವು ಸದ್ಯ ಬಿಸಿಸಿಐ ಮುಂದಿರುವ ಪ್ರಶ್ನೆ. ಮುಂದಿನ ವರ್ಷ ಐಪಿಎಲ್‌ನ ಮೆಗಾ ಹರಾಜು ಕೂಡ ನಡೆಯಲಿದೆ. ಐಪಿಎಲ್‌ ಕೂಡ ಹತ್ತಿರದಲ್ಲೇ ಇದೆ. ತಂಡಗಳ ಸಂಖ್ಯೆಯನ್ನೂ ಹೆಚ್ಚಿಸಿದರೆ ನಿಭಾಯಿಸಲು ಸಾಧ್ಯವೇ? ಇದು ಆತುರದ ನಿರ್ಧಾರವಾಗುತ್ತದೆ ಎಂದು ಬಿಸಿಸಿಐ ಮೂಲಗಳೇ ಹೇಳಿವೆ.

ಗಂಗೂಲಿ ಜಾಹೀರಾತು?
ಸೌರವ್‌ ಗಂಗೂಲಿ ಕೆಲವು ಜಾಹೀರಾತುಗಳಿಗೆ ರಾಯಭಾರಿಯಾಗಿದ್ದಾರೆ. ಅದರಲ್ಲೂ ಮೈ 11ಸರ್ಕಲ್‌ ಎಂಬ ಆನ್‌ಲೈನ್‌ ಬೆಟ್ಟಿಂಗ್‌
ಆ್ಯಪ್‌ಗೆ ಅವರು ರಾಯಭಾರಿ.

ಮತ್ತೂಂದು ಕಡೆ ಸ್ವತಃ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕ ಸ್ಥಾನದಲ್ಲಿ ಡ್ರೀಮ್‌11 ಎಂಬ ಬೆಟ್ಟಿಂಗ್‌ ಆ್ಯಪ್‌ ಇದೆ. ಇದು ಸ್ವಹಿತಾಸಕ್ತಿ ಸಂಘರ್ಷ ಎಂಬ ಆರೋಪಗಳಿವೆ. ಈ ಬಗ್ಗೆ ಗುರುವಾರದ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಕ್ರಿಕೆಟ್‌ ಸಮಿತಿಗಳ ರಚನೆ
ತಾಂತ್ರಿಕ ಸಮಿತಿ, ತೀರ್ಪುಗಾರರ ಸಮಿತಿ ಸೇರಿದಂತೆ ಹಲವಾರು ಸಮಿತಿಗಳ ರಚನೆಯನ್ನು ಬಿಸಿಸಿಐ ಬಾಕಿ ಉಳಿಸಿಕೊಂಡಿದೆ. ಹಾಗೆಯೇ ಆಯ್ಕೆ ಮಂಡಳಿಗೆ ಮೂವರು ಹೆಚ್ಚುವರಿ ಸದಸ್ಯರ ನೇಮಕ ಮಾಡಬೇಕು. ಇದಕ್ಕಾಗಿ ಮೂವರು ಸದಸ್ಯರಿರುವ ಕ್ರಿಕೆಟ್‌ ಸಲಹಾ ಸಮಿತಿಯ ರಚನೆಯಾಗಲಿದೆ.

ತೆರಿಗೆ ವಿನಾಯಿತಿ ಸಿಗದಿದ್ದರೆ ಟಿ20 ವಿಶ್ವಕಪ್‌ ಸ್ಥಳಾಂತರ!
ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್‌ ನಡೆಯಲಿದೆ. ಆದರೆ ಇದಕ್ಕೆ ಪೂರ್ಣ ಪ್ರಮಾಣದಲ್ಲಿ ತೆರಿಗೆ ವಿನಾಯಿತಿಯನ್ನು ಕೇಂದ್ರ ಸರಕಾರ ನೀಡಬೇಕೆಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಆಗ್ರಹಿಸಿದೆ. ಸದ್ಯ ಹೀಗೆ ತೆರಿಗೆ ವಿನಾಯಿತಿ ನೀಡುವ ಪದ್ಧತಿ ಭಾರತದಲ್ಲಿಲ್ಲ. ಒಂದು ವೇಳೆ ನೀಡದಿದ್ದರೆ ವಿಶ್ವಕಪ್‌ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರಿಸುವುದಾಗಿ ಐಸಿಸಿ ಹೇಳಿದೆ. ಬಿಸಿಸಿಐ ಏನು ಮಾಡುತ್ತದೆ ಎನ್ನುವುದೊಂದು ಕುತೂಹಲ.

ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ: ಬಿಸಿಸಿಐ ನಿಲುವು?
2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಅನ್ನು ಸೇರ್ಪಡೆ ಮಾಡಬೇಕೆಂಬ ಕೂಗು ಜಗತ್ತಿನ ಎಲ್ಲ ಕಡೆ ಇದೆ. ಇದಕ್ಕೆ ಬಿಸಿಸಿಐ ಬೆಂಬಲಿಸುವುದೇ, ಇಲ್ಲವೇ ಎನ್ನುವುದು ಇನ್ನೊಂದು ಮುಖ್ಯ ವಿಷಯ. ಒಂದು ವೇಳೆ ಬೆಂಬಲಿಸಿದರೆ ಬಿಸಿಸಿಐ ರಾಷ್ಟ್ರೀಯ ಕ್ರೀಡಾಒಕ್ಕೂಟಗಳ ವ್ಯಾಪ್ತಿಗೆ ಬರುತ್ತದೆ. ಆಗ ಪದೇಪದೇ ಕ್ರೀಡಾ ಸಚಿವಾಲಯದ ಮಧ್ಯಪ್ರವೇಶವನ್ನು ಸಹಿಸಿಕೊಳ್ಳಬೇಕಾಗುತ್ತದೆ. ಇದನ್ನು ಬಗೆಹರಿಸುವುದು ಹೇಗೆ ಎಂಬುದಕ್ಕೂ ಉತ್ತರ ಕಂಡುಕೊಳ್ಳಬೇಕಿದೆ.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.