ಕೈಕೊಟ್ಟ ಪ್ರೀತಿ…ಎಸ್ ಬಿಐ ಉದ್ಯೋಗಿಯನ್ನು ಕೊಂದು ಸುಟ್ಟು ಹಾಕಿದ ಮಾಜಿ ಪ್ರಿಯಕರ
ಸ್ನೇಹಲತಾಗೆ ಕರೆ ಮಾಡಿ ಮಾತನಾಡಲು ಇದೆ ಎಂದು ಹೇಳಿ ಬೈಕ್ ನಲ್ಲಿ ಕರೆದೊಯ್ದಿದ್ದ.
Team Udayavani, Dec 24, 2020, 12:12 PM IST
Representative Image
ಹೈದರಾಬಾದ್: ಸ್ಟೇಟ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 19 ವರ್ಷದ ಯುವತಿಯನ್ನು ಮಾಜಿ ಪ್ರಿಯಕರ ಹತ್ಯೆಗೈದು ನಂತರ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯುವತಿ ಮತ್ತೊಬ್ಬ ಯುವಕನ ಜತೆ ಸಂಬಂಧ ಹೊಂದಿರುವುದಕ್ಕೆ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ಬಂಧಿತ ಯುವಕ ವಿಚಾರಣೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಗೂಟೈ ರಾಜೇಶ್ ಜತೆ ಸ್ನೇಹಲತಾ ಗೆಳೆತನ ಹೊಂದಿದ್ದಳು. ರಾಜೇಶ್ ಗಾರೆಕೆಲಸ ಮಾಡುತ್ತಿದ್ದ. ಆದರೆ ಬ್ಯಾಂಕ್ ನಲ್ಲಿ ಗುತ್ತಿಗೆ ಆಧಾರಿತ ಕೆಲಸ ಸಿಕ್ಕಿದ ನಂತರ ಸ್ನೇಹಲತಾ ರಾಜೇಶ್ ನಿಂದ ಅಂತರ ಕಾಯ್ದುಕೊಂಡಿದ್ದಳು.
ರಾಜೇಶ್ ಸ್ನೇಹ ಬಿಟ್ಟ ಸ್ನೇಹಲತಾ ಕಾಲೇಜ್ ಕ್ಲಾಸ್ ಮೇಟ್ ಜತೆ ಹೆಚ್ಚು ಸುತ್ತಾಡತೊಡಗಿದ್ದಳು. ಇದರಿಂದ ರಾಜೇಶ್ ಅಸಮಾಧಾನಗೊಂಡಿದ್ದು, ಸ್ನೇಹಲತಾಳನ್ನು ಕೊಲ್ಲುವ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಸ್ನೇಹಲತಾ ಮತ್ತು ರಾಜೇಶ್ 1,618 ಬಾರಿ ಕರೆ ಮಾತನಾಡಿರುವುದು ಮೊಬೈಲ್ ಕಾಲ್ ರೆಕಾರ್ಡ್ಸ್ ಮೂಲಕ ಬಯಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸ್ನೇಹಲತಾಗೆ ಕರೆ ಮಾಡಿ ಮಾತನಾಡಲು ಇದೆ ಎಂದು ಹೇಳಿ ಬೈಕ್ ನಲ್ಲಿ ಕರೆದೊಯ್ದಿದ್ದ. ನಂತರ ಕ್ಲಾಸ್ ಮೇಟ್ ಜತೆಗಿನ ಸ್ನೇಹದ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.
ಅನಂತಪುರದ ಬದನಪಲ್ಲಿ ಗದ್ದೆ ಪ್ರದೇಶದಲ್ಲಿ ಆಕೆಯ ಉಸಿರುಗಟ್ಟಿಸಿ ಸಾಯಿಸಿದ್ದು, ನಂತರ ಆಕೆಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗಬಾರದು ಎಂದು ಬ್ಯಾಂಕ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಹರಿದು ಆಕೆಯ ಮೈಮೇಲೆ ಹಾಕಿ ಬೆಂಕಿಹಚ್ಚಿ ಸುಟ್ಟಿದ್ದ. ಆಕೆಯ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಬಿ.ಸತ್ಯ ಯೇಸು ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು