ಜಿಲ್ಲಾ ಕೇಂದ್ರದ ಹೈಟೆಕ್‌ ಗ್ರಂಥಾಲಯ ಕಾಮಗಾರಿಗೆ ಗ್ರಹಣ

ಅನುದಾನ ಮಂಜೂರಾದರೂ ಕೈ ಸೇರದ ಮೊತ್ತ ,ಒಳಾಂಗಣ ವಿನ್ಯಾಸಕ್ಕೆ 2 ಕೋ.ರೂ. ಅಗತ್ಯ

Team Udayavani, Dec 24, 2020, 12:11 PM IST

ಜಿಲ್ಲಾ ಕೇಂದ್ರದ ಹೈಟೆಕ್‌ ಗ್ರಂಥಾಲಯ ಕಾಮಗಾರಿಗೆ ಗ್ರಹಣ

ಉಡುಪಿ, ಡಿ. 23:   ನಗರದ ಅಜ್ಜರಕಾಡು ಬಳಿಯ ಹೊಸ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದ್ದು, ಅನುದಾನದ ಕೊರತೆಯಿಂದ ಕಟ್ಟಡ ಒಳಾಂಗಣ ವಿನ್ಯಾಸ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.

ನೂತನ ಡಿಜಿಟಲ್‌ ಗ್ರಂಥಾಲಯವನ್ನು ಅಜ್ಜರಕಾಡು ಸಮೀಪದ ಸುಮಾರು 20 ಸೆಂಟ್ಸ್‌  ಜಾಗದಲ್ಲಿ ಕಟ್ಟಡ  ನಿರ್ಮಿಸ ಲಾಗಿದೆ.  ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭೆ  ಸದಸ್ಯರ ನಿಧಿಯಿಂದ 99.56 ಲ.ರೂ., ನಗರಾಭಿವೃದ್ಧಿ ಪ್ರಾಧಿಕಾರದಿಂದ 87.54 ಲ.ರೂ., ಗ್ರಂಥಾಲಯ ಇಲಾಖೆಯಿಂದ 1 ಕೋ.ರೂ., ಸಂಸದೆ ನಿಧಿಯಿಂದ 5 ಲ.ರೂ. ಸೇರಿದಂತೆ ಇತರ ಒಟ್ಟು 3.35 ಕೋ.ರೂ. ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ.

ಅನುದಾನದ ಕೊರತೆ :

ಪ್ರಸ್ತುತ ಬಾಕಿ ಇರುವ ಒಳಾಂಗಣ ವಿನ್ಯಾಸಕ್ಕೆ ಸುಮಾರು 2 ಕೋ. ರೂ. ಅಗತ್ಯವಿದೆ. ಆರ್ಥಿಕ ಇಲಾಖೆಯಿಂದ ಅನುದಾನ  ಮಂಜೂರಾಗಿದೆ. ಆದರೆ ಇಲಾಖೆಯಲ್ಲಿ ಆರ್ಥಿಕ ಸಮಸ್ಯೆಯಿಂದ ಅನುದಾನ ನಿರ್ಮಿತಿ ಕೇಂದ್ರದ ಕೈಸೇರದ  ಹಿನ್ನೆಲೆಯಲ್ಲಿ ಕಾಮಗಾರಿಗೆ ಹಿನ್ನಡೆ ಯಾಗಿದೆ ಎಂದು ಇಲಾಖೆ ಮೂಲಗಳು  ತಿಳಿಸಿವೆ. ಹಿಂದೊಮ್ಮೆ ಜಿಲ್ಲಾಡಳಿತ ಸ್ಥಳೀಯ  ಕಂಪೆನಿಯೊಂದರ ಸಿಎಸ್‌ಆರ್‌ ಅನುದಾನ ಬಳಸಿಕೊಂಡು ಕಾಮಗಾರಿ ಪೂರ್ಣ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೂ ಈಡೇರಿಲ್ಲ.

ಹೈಟೆಕ್‌ ಮಾದರಿ ವಿನ್ಯಾಸ :

ಹೊಸದಾಗಿ ನಿರ್ಮಾಣವಾಗಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡ ಹೈಟೆಕ್‌ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ಮಾದರಿಯ ತಂತ್ರಜ್ಞಾನ ಸೌಲಭ್ಯ  ಆಳವಡಿಸಲಾಗಿದೆ.  ಇಲ್ಲಿ  ತಳ ಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿ ಗಳಿವೆ. ತಳಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಮೆಟ್ಟಿಲು, ಜನರೇಟರ್‌,  ಪುಸ್ತಕ ಸಂಗ್ರಹ ಕೊಠಡಿ ನಿರ್ಮಿಸಲಾಗಿದೆ. ನೆಲ ಮಹಡಿಯಲ್ಲಿ ಹಿರಿಯ ನಾಗರಿಕರ ಕೊಠಡಿ, ಮಕ್ಕಳ ಒಳಾಂಗಣ ಕ್ರೀಡೆ ಹಾಗೂ ಮಕ್ಕಳ ಪುಸಕ್ತ ಕೊಠಡಿ, ದಿನಪತ್ರಿಕೆಗಳ ವಿಭಾಗ, ವಾರ, ತಿಂಗಳ ಪತ್ರಿಕೆಗೆ ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ಮಹಡಿಯಲ್ಲಿ ಕಂಪ್ಯೂಟರ್‌ ಕೊಠಡಿ, ಡಿಜಿಟಲ್‌ ಗ್ರಂಥಾಲಯ, ಕಿರು ಸಭಾಂಗಣ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ 100 ಮಂದಿ ಕುಳಿತುಕೊಳ್ಳುವ ಸಭಾಂಗಣ, ಕಚೇರಿ, ಓದುವ ಕೊಠಡಿ ಒಳಗೊಂಡಿದೆ.

ಅಭ್ಯರ್ಥಿಗಳಿಗೆ ಅನುಕೂಲ :

ಗ್ರಂಥಾಲಯದಲ್ಲಿ  ಐಎಎಸ್‌, ಕೆಎಎಸ್‌,  ಮುಂತಾದ ಸಿವಿಲ್‌ ಸರ್ವಿಸ್‌ ಪರೀಕ್ಷಾರ್ಥಿ ಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಪ್ಯೂಟರ್‌ ಕೊಠಡಿ, ತರಬೇತಿ ನೀಡಲು ಕಿರು ಸಭಾಂಗಣ, ಅಧ್ಯಯನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ನಿರಂತರ ವಿದ್ಯುತ್‌ ಸಂಪರ್ಕ ವಿದ್ಯಾರ್ಥಿ, ಸಾರ್ವಜನಿಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವಂತೆ ಗ್ರಂಥಾಲಯಕ್ಕೆ 24×7 ವಿದ್ಯುತ್‌ ಸಂಪರ್ಕ ಒದಗಿಸಲಾಗುತ್ತದೆ. ಅದಕ್ಕೆ ಪೂರಕ ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೆಲ ಮಹಡಿ ಯಲ್ಲಿ ಏಕಕಾಲಕ್ಕೆ 50ಕ್ಕೂ  ಹೆಚ್ಚಿನ ದ್ವಿಚಕ್ರ ವಾಹನ ನಿಲುಗಡೆ ಮಾಡಬಹುದಾಗಿದೆ. ಕಟ್ಟಡದ ಮುಂಭಾಗ ಇಂಟರ್‌ಲಾಕ್‌ ಹಾಕಲಾಗಿದೆ.

 

ಕಟ್ಟಡ ಕಾಮಗಾರಿ ಸುಮಾರು 3.35 ಕೋಟಿ ರೂ.  ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಒಳಾಂಗಣ ವಿನ್ಯಾಸಕ್ಕೆ ಸುಮಾರು ಇನ್ನೂ 2 ಕೋ.ರೂ. ಅಗತ್ಯವಿದೆ. ಅನುದಾನ ಬಿಡುಗಡೆಯಾದ ತತ್‌ಕ್ಷಣ ಬಾಕಿಯಿರುವ ಕೆಲಸ ಪೂರ್ಣಗೊಳಿಸಲಾಗುತ್ತದೆ.  -ಅರುಣ್‌,  ನಿರ್ಮಿತಿ ಕೇಂದ್ರ ಯೋಜನಾಧಿಕಾರಿ, ಉಡುಪಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.