ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟ ಬಸವ ಭವನ ಕಟ್ಟಡ!

10 ಕೋಟಿ ರೂ.ವೆಚ್ಚದಕಟ್ಟಡ ಅಪೂರ್ಣ, ನೆಲ ಅಂತಸ್ತಿಗೆ 1.84 ಕೋಟಿ ರೂ. ವ್ಯಯಿಸಿದ್ದರೂ ಗುಣಮಟ್ಟ ಇಲ್ಲ

Team Udayavani, Dec 24, 2020, 1:45 PM IST

ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟ ಬಸವ ಭವನ ಕಟ್ಟಡ!

ನಂಜನಗೂಡು: ತಾಲೂಕಿನಲ್ಲಿ ಬಹು ನಿರೀಕ್ಷೆಯ ಬಸವ ಭವನ ಕಟ್ಟಡ ಪೂರ್ಣಗೊಳ್ಳುವ ಮುನ್ನವೇ ಬಿರುಕುಬಿಡಲಾರಂಭಿಸಿದೆ. ಇದಕ್ಕೆ ಕಳಪೆ ಕಾಮಗಾರಿಯೇಕಾರಣವಾಗಿದೆ ಎನ್ನಲಾಗಿದೆ.

ನಗರದ ಅಂಡುನಹಳ್ಳಿ ಬಡವಾಣೆಯಲ್ಲಿ 2017 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಪ್ರಥಮ ಹಂತದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಬಸವ ಭವನ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಈಗಾಗಲೇ 1.83 ಕೋಟಿ ರೂ.ಗಳನ್ನು ಬಸವ ಭವನದನೆಲಅಂತಸ್ತಿನಕಟ್ಟಡಕಾಮಗಾರಿಗಾಗಿಯೇ ವ್ಯಯಿಸಲಾಗಿದ್ದು, ಇಷ್ಟು ಮೊತ್ತವನ್ನು ಖರ್ಚುಮಾಡಿದ್ದರೂ ಗೋಡೆಗಳು ಬಿರುಕು ಬಿಡುತ್ತಿವೆ. ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಸಾರ್ವನಿಕರು ಆಪಾದಿಸಿದ್ದಾರೆ.

ಹೊಸ ಸರ್ಕಾರ ಬಂದ ಬಳಿಕ ಯಾರೂ ಕಾಳಜಿ ವಹಿಸದ ಕಾರಣ ಕಾಮಗಾರಿ ಸ್ಥಗಿತಗೊಂಡಿದ್ದು, ನೆಲಅಂತಸ್ತಿನ ಈ ಕಟ್ಟಡ ಪಾಳು ಬಿದ್ದಿರುವಂತೆ ಕಾಣುತ್ತಿದೆ. ಈ ಭವನದ ಹಣಕಾಸಿನ ನೆರವುಕನ್ನಡ ಹಾಗೂ ಸಂಸ್ಕೃತಿ ಇಲಾಖೆಯದ್ದಾಗಿದ್ದು, ಕಾಮಗಾರಿಯ ನೇರ ಉಸ್ತುವಾರಿ ಲೋಕೋಪಯೋಗಿ ಇಲಾಖೆಯದ್ದಾಗಿದೆ. ಸುಮಾರು 10 ಕೋಟಿ ರೂ. ಅಂದಾಜು ವೆಚ್ಚದ ಈ ಭವನಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಯಾಗಿದ್ದು, 1.84 ಕೋಟಿರೂ. ವ್ಯಯಿಸಲಾಗಿದೆ. ನಂತರ ಹಣ ಬಿಡುಗಡೆ ಯಾಗದ ಕಾರಣ ಇದು ಪಾಳು ಬೀಳುವಂತಾಗಿದೆ. ಕಳಪೆ ಕಾಮಗಾರಿಗೆ ಕಡಿವಾಣ ಹಾಕಿ ಗುಣಮಟ್ಟದ ಕಾಮಗಾರಿಗಾಗಿ ನಿರ್ಮಿಸಬೇಕು. ಬಾಕಿ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಿ ಬಸವ ಭವನ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ.

ತನಿಖೆ ನಡೆಸಿ: ತಾಲೂಕಿನ ವೀರಶೈವ ಲಿಂಗಾಯ ತರಕನಸಿನ ಬಸವ ಭವನ ಉದ್ಘಾಟನೆಗೂ ಮೊದಲೇ ಅದು ಬಿರುಕು ಬಿಟ್ಟಿದೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿ ಭವನದ ಕಾಮಾಗಾರಿಯನ್ನು ಪೂರ್ಣಗೊಳಿಸಬೇಕು ಎಂದು ವೀರಶೈವ ಸಹಕಾರ ಸಂಘದಅಧ್ಯಕ್ಷಎನ್‌.ಸಿ.ಬಸವಣ್ಣ ಆಗ್ರಹಿಸಿದ್ದಾರೆ.

10 ಕೋಟಿ ರೂ. ವೆಚ್ಚದ ಭವನ ಪೂರ್ಣಗೊಳಿಸಿ.. :

ಸುಮಾರು10ಕೋಟಿ ರೂ. ಅಂದಾಜು ವೆಚ್ಚದ ಬಸವ ಭವನ ಅಪೂರ್ಣಗೊಂಡಿದೆ.ಕೇವಲ 2 ಕೋಟಿ ರೂ.ಮಾತ್ರ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ1.84ಕೋಟಿ ರೂ. ವ್ಯಯಿಸಲಾಗಿದೆ. ಅಪೂರ್ಣಗೊಂಡಿರುವಕಾಮಗಾರಿ ಕಳಪೆಯಿಂದಕೂಡಿದ್ದು, ಇದ ರಿಂದಲೇ ಗೋಡೆ ಬಿರುಕು ಬಿಟ್ಟಿದೆ.ಕನ್ನಡ ಹಾಗೂ ಸಂಸ್ಕೃತಿ ಇಲಾಖೆ, ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಉಸ್ತುವರಿ ಸಚಿವರು,ಕ್ಷೇತ್ರದ ಶಾಸಕರು ಉಳಿದ ಹಣ ಬಿಡುಗಡೆಗೆಕ್ರಮಕೈಗೊಂಡು ಬಸವಭವನವನ್ನು ಪೂರ್ಣಗೊಳಿಸಬೇಕು. ಗುಣಮಟ್ಟದಕಾಮಗಾರಿ ನಡೆಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಬಸವ ಭವನದ ಕಟ್ಟಡ ಬಿರುಕು ಬಿಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ. ನಾನು ಇಲ್ಲಿಗೆ ಬರುವುದಕ್ಕೂ ಮೊದಲೇ ಹಣವಿಲ್ಲದೇಕಾಮಗಾರಿ ಸ್ಥಗಿತವಾಗಿತ್ತು. ನಾಳೆ(ಗುರುವಾರ) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಮುತ್ತುರಾಜ್‌, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌

 

ಶ್ರೀಧರ್‌ ಆರ್‌.ಭಟ್

ಟಾಪ್ ನ್ಯೂಸ್

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.