ರೈತರ ದೆಹಲಿ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿ: ವೈ.ಎಸ್.ವಿ.ದತ್ತ
ಎಪಿಎಂಸಿ ಖಾಸಗೀಕರಣ ಸುದ್ದಿ ಮೊದಲು ಉದಯವಾಣಿ ಪ್ರಕಟವಾಗಿದ್ದರ ನೆನಪು
Team Udayavani, Dec 24, 2020, 4:09 PM IST
ಗಂಗಾವತಿ: ಭೂಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಕಳೆದ ಒಂದುವರೆ ತಿಂಗಳಿಂದ ರೈತರು ನಡೆಸುತ್ತಿರುವ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ ಎಂದು ಜೆಡಿ ಎಸ್ ಪಕ್ಷದ ರಾಜ್ಯ ಮುಖಂಡ, ಪ್ರಗತಿಪರ ಚಿಂತಕ ವೈ.ಎಸ್.ವಿ.ದತ್ತ ಅಭಿಪ್ರಾಯಪಟ್ಟರು.
ಅವರು ಗಂಗಾವತಿಯಲ್ಲಿ ಉದಯವಾಣಿ ಜೊತೆ ಮಾತನಾಡಿ, ರಾಜ್ಯದ ಎಪಿಎಂಸಿ ಗಳನ್ನು ಖಾಸಗೀಕರಣ ಮಾಡುವ ಸುದ್ದಿ ಮೊದಲು ಉದಯವಾಣಿಯಲ್ಲಿ ಪ್ರಕಟವಾಗಿತ್ತು. ರೈತರು ಎಚ್ಚತ್ತುಕೊಳ್ಳದಿದ್ದರೆ ದೇಶದ ಕೃಷಿ ವ್ಯವಸ್ಥೆಗೆ ಭಾರಿಪೆಟ್ಟು ಬೀಳಲಿದ್ದು ಆಹಾರ ಸ್ವಾವಲಂಬನೆ ಆಹಾರ ಭದ್ರತೆ ಇಲ್ಲವಾಗುತ್ತದೆ. ಐಟಿಬಿಟಿಯವರು ಭೂಮಿ ಖರೀದಿಸಲು ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಗುವುದನ್ನು ತಪ್ಪಿಸಲು ಭೂಸುಧಾರಣಾ ಕಾಯ್ದೆಯ 79ಎ,ಬಿ,ಸಿ ಮತ್ತು 108ಕಾಯ್ದೆಗೆ ತಿದ್ದುಪಡಿಯನ್ನು ರಾಜ್ಯ ಸರಕಾರ ಮಾಡಿದ್ದು ಅವೈಜ್ಞಾನಿಕವಾಗಿದೆ ಎಂದರು.
ಇದನ್ನೂ ಓದಿ:ದತ್ತು ಶಾಲೆ ಪ್ರಗತಿ ಯೋಜನೆಗೆ ಸಿದ್ಧತೆ
ಇದರಿಂದ ಸಣ್ಣ ಹಿಡುವಳಿದಾರರು ಬೀದಿಗೆ ಬರುವುದು ಖಚಿತ. ಇರುವ ಭೂಮಿ ಎಲ್ಲಾ ಶ್ರೀಮಂತರು ಮತ್ತು ದೊಡ್ಡ ದೊಡ್ಡ ಕಾರ್ಪೋರೆಟ್ ಕಂಪನಿಗಳ ಪಾಲಾಗಲಿದ್ದು ರಾಜ್ಯ ಸರಕಾರ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಖಾಸಗೀಕರಣವನ್ನು ಮಾಡುವ ಕೇಂದ್ರ ಸರಕಾರ ನೀತಿ ವಿರೋಧಿಸಬೇಕು ಎಂದು ಹೇಳಿದರು.
ಬಿಜೆಪಿ ಜೊತೆ ಜೆಡಿಎಸ್ ವಿಲೀನ ಅಥವಾ ಬೆಂಬಲಕ್ಕೆ ಗೌಡ ಬೆಂಬಲವಿಲ್ಲ: ಬಿಜೆಪಿ ಸರಕಾರದ ಕೆಲ ನಿರ್ಧಾರಗಳನ್ನು ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಸಿದ್ದು ಖಂಡನೀಯ. ದೇವೇಗೌಡರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ಅಥವಾ ಪಕ್ಷವನ್ನು ಅದರಲ್ಲಿ ವಿಲೀನ ಮಾಡುವುದಕ್ಕೆ ವಿರೋಧಿಸಿದ್ದಾರೆ. ಗೌಡರ ನಿರ್ಧಾರ ಅವರ ಜೀವನ ಸೆಕ್ಯೂಲರ್ ಎನ್ನುವುದನ್ನು ಹೇಳುತ್ತದೆ. ಗೌಡರ ನಿಲುವು ತಮ್ಮನಿಲುವಾಗಿದೆ ಎಂದು ದತ್ತ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ
Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ
Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ
MUST WATCH
ಹೊಸ ಸೇರ್ಪಡೆ
‘ಅನರ್ಥ’ ನಂಬಿ ಬಂದ ಹೊಸಬರು; ಹಾಡು-ಟೀಸರ್ ರಿಲೀಸ್
ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ
Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್
Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ
Kasaragod: ಹೊಸದುರ್ಗ; ಟ್ಯಾಂಕರ್ನಿಂದ ಅನಿಲ ಸೋರಿಕೆ