ಮೂರೂವರೆ ತಿಂಗಳ ಹಿಂದೆ ಹತ್ಯೆಮಾಡಿ ಹೂತಿದ್ದ ಅರ್ಚಕ ನೀಲಕಂಠ ದೀಕ್ಷಿತ್ ಮೃತದೇಹ ಹೊರಕ್ಕೆ
Team Udayavani, Dec 24, 2020, 10:48 PM IST
ಬೆಂಗಳೂರು: ಹಣಕಾಸಿನ ವಿಚಾರವಾಗಿ ಮೂರೂವರೆ ತಿಂಗಳ ಹಿಂದೆ ಹತ್ಯೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ನೀಲಕಂಠ ದೀಕ್ಷಿತ್ ಅವರ ಮೃತದೇಹವನ್ನು ಗುರುವಾರ ಹೊರ ತೆಗೆದು ಮಹಜರು ಮಾಡಲಾಗಿದೆ.
ಬೆಂಗಳೂರ ಪೂರ್ವ ವಿಭಾಗದ ತಹಶೀಲ್ದಾರ್ ಅಜಿತ್, ವೈದ್ಯಾಧಿಕಾರಿ ಜಗದೀಶ್ ಮತ್ತು ವೈಟ್ಫೀಲ್ಡ್ ಉಪ ವಿಭಾಗದ ಎಸಿಪಿ ಹಾಗೂ ಕಾಡುಗೋಡಿ ಠಾಣೆ ಇನ್ಸ್ಪೆಕ್ಟರ್ ಸಮ್ಮುಖದಲ್ಲಿ ಬಿಬಿಎಂಪಿಯ ಕಸ ವಿಂಗಡಣ ಘಟಕದ ನಿರ್ಮಾಣ ಹಂತದ ಕಟ್ಟಡದ ಪಾಯದಲ್ಲಿದ್ದ ಶವವನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಸೆ. 5ರಂದು ರಾತ್ರಿ 8 ಗಂಟೆ ಸುಮಾರಿಗೆ ಮಂಜುನಾಥ್ ಎಂಬಾತನು ದೀಕ್ಷಿತ್ನನ್ನು ಕೊಂದಿದ್ದ. ಬಳಿಕ ಇತರ ಕೆಲವರ ಸಹಾಯದಿಂದ ಶವವನ್ನು ಸೆ.6ರಂದು ರಾತ್ರಿ ಕಾರಿನಲ್ಲಿ ಕೊಂಡೊಯ್ದು ಹೂತು ಹಾಕಿದ್ದ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಗಾಜನೂರಿನಲ್ಲಿ ಪುನೀತ್ರಾಜ್ಕುಮಾರ್: ಆಲದ ಮರದ ಕೆಳಗೆ ಕುಳಿತು ತಂದೆಯನ್ನು ಸ್ಮರಿಸಿದ ಅಪ್ಪು
ಇಬ್ಬರ ಬಂಧನ
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಂಜುನಾಥ್ನ ಇಬ್ಬರು ಸಹಚರರಾದ ಭರತ್ ಅಲಿಯಾಸ್ ಪಡಿ ಮತ್ತು ಹರೀಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?