ಪಕ್ಷದ ಆ ತೀರ್ಮಾನಗಳು ಸರಿಯಲ್ಲ: ಜೆಡಿಎಸ್ ವಿರುದ್ಧ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ
ತಮ್ಮ ಪಕ್ಷದವರಿಗೆ ಪಾಠ ಮಾಡಿದ ದತ್ತ ಮೇಷ್ಟ್ರು
Team Udayavani, Dec 25, 2020, 2:16 PM IST
ಶಿವಮೊಗ್ಗ: ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು. ಇಲ್ಲದೇ ಇದ್ದರೆ ನಾವು ಜನರ ಮಧ್ಯೆ ನಗೆ ಪಾಟಲಿಗೀಡಾಗಬೇಕಾಗುತ್ತದೆ. ಆಗ ತನ್ನಿಂತಾನೆ ಪಕ್ಷ ದುರ್ಬಲವಾಗುತ್ತದೆ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ತನ್ನದೇ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ವಿಷಯದಲ್ಲಿ ನಮ್ಮ ಪಕ್ಷ ತೆಗೆದುಕೊಂಡ ತೀರ್ಮಾನ ಸರಿಯಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ:ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿಯಿಂದ ಅಕ್ರಮಕ್ಕೆ ಯತ್ನ: ವಿನಯ್ ಕುಮಾರ್ ಸೊರಕೆ ಆಕ್ರೋಶ
ನಾವು ದೆಹಲಿ ಹೈಕಮಾಂಡ್ ಸಂಸ್ಕೃತಿಯನ್ನು ವಿರೋಧಿಸಿದವರು. ಈಗಲೂ ನಾವು ಅದಕ್ಕೇ ಬದ್ಧರಾಗಿರಬೇಕು. ಧಾರ್ಮಿಕ ಹಾಗೂ ಭಾವನಾತ್ಮಕತೆ ನಮಗೆ ಮುಖ್ಯವಲ್ಲ ಎಂದು ನಾವು ಸಾರಬೇಕಿದೆ. ನಮಗೆ ಅಧಿಕಾರವಿರಲಿ ಇಲ್ಲದಿರಲಿ ಅದಕ್ಕೆ ತಲೆಕೆಡಿಸಿಕೊಳ್ಳಬಾರದು. ಜನರೇ ನಮ್ಮನ್ನು ಗುರುತಿಸುವಂತಾಗಬೇಕು ಎಂದು ವೈಎಸ್ ವಿ ದತ್ತ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್