ಕಾರು ಪಲ್ಟಿ: ತಾತ ಮತ್ತು 3 ತಿಂಗಳ ಮೊಮ್ಮಗು ಸಾವು
Team Udayavani, Dec 25, 2020, 8:12 PM IST
ಚಾಮರಾಜನಗರ: ತಾಲೂಕಿನ ಬೆಂಡರವಾಡಿ ಗ್ರಾಮದ ಬಳಿ, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲೆ ಉರುಳಿಬಿದ್ದ ಪರಿಣಾಮ ಚಾಲಕ ಹಾಗೂ 3 ತಿಂಗಳ ಹಸುಳೆ ಮೃತಪಟ್ಟಿರುವ ಘಟನೆ ನಡೆದಿದೆ.
ತಮಿಳುನಾಡಿನ ಕೊಯಮತ್ತೂರು ನಗರದ ನಿವಾಸಿ ಯಾಸಿನ್ ವಜೀರ್ (50) ಹಾಗೂ ಇವರ ಮೊಮ್ಮಗು 3 ತಿಂಗಳ ಹಸುಳೆ ಹೀನಾ ಫಾತಿಮಾ ಮೃತರು. ಕಾರಿನಲ್ಲಿದ್ದ ಮೃತ ಯಾಸೀನ್ ವಜೀರ್ರ ಪತ್ನಿ ರಜಿಯಾ ಹಾಗೂ ಮಗುವಿನ ತಾಯಿ ಸಾನೋಫರ್ ನಸ್ರೀನ್ ಹಾಗೂ ಸಫಿನ್ ಎಂಬುವರು ಗಾಯಗೊಂಡಿದ್ದು, ಇವರನ್ನು ಕೊಯಮತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಯಮತ್ತೂರಿನ ವಜೀರ್ ತನ್ನ ಕುಟುಂಬದವರೊಂದಿಗೆ ಶುಕ್ರವಾರ ಚಾಮರಾಜನಗರ ಮಾರ್ಗವಾಗಿ ಬಂಧುಗಳ ಮನೆಯ ಮದುವೆಗೆ ಮೈಸೂರಿಗೆ ತೆರಳುತ್ತಿದ್ದರು. ಚಾಮರಾಜನಗರ ನಂಜನಗೂಡು ಹೆದ್ದಾರಿಯಲ್ಲಿ, ಮುತ್ತಿಗೆ ಮತ್ತು ಬೆಂಡರವಾಡಿ ಗ್ರಾಮದ ನಡುವೆ, ಕಾರು ನಿಯಂತ್ರಣ ತಪ್ಪಿ ಉರುಳಿಬಿದ್ದಿತು. ಇದರಿಂದಾಗಿ ಕಾರು ಚಾಲನೆ ಮಾಡುತ್ತಿದ್ದ ವಜೀರ್ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟರು.
ಇದನ್ನೂ ಓದಿ: ಬಂಟ್ವಾಳ : ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಲಿಫ್ಟ್ : ನಾಲ್ವರು ಮಕ್ಕಳು ಅಪಾಯದಿಂದ ಪಾರು
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ