ಬಳವಡಗಿ ಏಲಾಂಬಿಕೆಗೆ ಉಧೋ..ಉಧೋ..

ಐದು ದಿನ ಮೊದಲೇ ನಡೆಯಿತು ಜಾತ್ರೆ

Team Udayavani, Dec 26, 2020, 5:17 PM IST

ಬಳವಡಗಿ ಏಲಾಂಬಿಕೆಗೆ ಉಧೋ..ಉಧೋ..

ವಾಡಿ: ಮಹಾಮಾರಿ ಕೋವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿ ನಡುವೆಯೂ ಬಳವಡಗಿ ಗ್ರಾಮದ ಶ್ರೀ ಏಲಾಂಬಿಕೆ (ಯಲ್ಲಮ್ಮ) ದೇವಿ ಜಾತ್ರೆ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.

ಡಿ.30ರ ಹುಣ್ಣಿಮೆಯಂದು ನಡೆಯಬೇಕಿದ್ದ ಜಾತ್ರೆ ತಾಲೂಕು ಆಡಳಿತ ವಿಧಿ ಸಿದ ಕಾನೂನು ಗೌರವಿಸಿ ಐದು ದಿನ ಮುಂಚಿತವಾಗಿಯೇ ನಡೆಯಿತು. ಭಕ್ತರು ಸಾಂಪ್ರದಾಯಿಕವಾಗಿ ದೇವಿಗೆ ಹಡ್ಡಲಗಿ ತುಂಬಿ, ಭಕ್ತಿ ಸಮರ್ಪಿಸಿದರು. ಅಸಂಖ್ಯಾತ ಭಕ್ತರನ್ನು ಹೊಂದಿರುವ ಬಳವಡಗಿ ಏಲಾಂಬಿಕೆ ದೇವಿ ಹಾಗೂ ಕೊಂಚೂರು ಶ್ರೀ ಹನುಮಾನ ದೇವರ ರಥೋತ್ಸವ ಪ್ರತಿ ವರ್ಷ ಏಕಕಾಲಕ್ಕೆ ನಡೆಯುತ್ತದೆ. ಪ್ರಸಕ್ತ ವರ್ಷ ಡಿ.30ರಂದು ಕೊಂಚೂರ ಹನುಮಾನ ರಥೋತ್ಸವ-ಬಳವಡಗಿ ಯಲ್ಲಮ್ಮನ ಜಾತ್ರೆ ನಿಗದಿಯಾಗಿತ್ತು.

ಕೋವಿಡ್ ನಿಯಮಗಳಡಿ ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಜಾತ್ರೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದರು. ಪರಿಣಾಮ ಸಂದೇಶ ಅರಿತ ವಿವಿಧ  ತಾಲೂಕುಗಳ ಭಕ್ತರು, ಶುಕ್ರವಾರವೇ ದೇವಸ್ಥಾನಕ್ಕೆ ಬಂದು ಹಡ್ಡಲಗಿ ತುಂಬಿದರು.

ಡಿ.30ರಂದು ಜಾತ್ರೆಗೆ ಬರಲು ಪೊಲೀಸರು ಅವಕಾಶ ನೀಡುವುದಿಲ್ಲ ಎನ್ನುವ ಕಾರಣಕ್ಕೆ ಭಕ್ತರು ಐದು ದಿನ ಮೊದಲೇ ಬಳವಡಗಿಗೆ ಆಗಮಿಸಿ ಜಾತ್ರೆಯ ವಾತಾವರಣ ನಿರ್ಮಿಸಿದರು. ಪೊಲೀಸ್‌ ಬಂದೋಬಸ್ತ್ ಇಲ್ಲದ ಸಂದರ್ಭ ಬಳಸಿಕೊಂಡ ಭಕ್ತರು, ಯಲ್ಲಮ್ಮ ದೇವಸ್ಥಾನ ಸುತ್ತಲೂ ಪ್ರದಕ್ಷಿಣೆ ಹಾಕಿ ಉಧೋ..ಉಧೋ.. ಘೋಷವಾಕ್ಯ ಮೊಳಗಿಸಿದರು.

ಇದನ್ನೂ ಓದಿ:ಬೆಲೆ ಏರಿಕೆ: ರಸ್ತೆಯಲ್ಲಿ ಒಲೆ ಹಚ್ಚಿ ಆಕ್ರೋಶ

ಜಾತ್ರೆ ಆವರಣದಲ್ಲಿ ದೇವದಾಸಿಯರ ತಂಡವೇ ನೆರೆದಿತ್ತು. ದೇವಸ್ಥಾನ ಪ್ರವೇಶಿಸುವವರ ಹಣೆಗೆ ಭಂಡಾರ ಹಚ್ಚುವವರೂ ಇದ್ದರು. ಮಹಿಳೆಯರ ಅರೆಬೆತ್ತಲೆ ಸೇವೆ ಮುಂದುವರಿದಿತ್ತು. ಮಕ್ಕಳು ದೀಡ್‌ ನಮಸ್ಕಾರ ಹಾಕುತ್ತಿದ್ದರು. ರೊಟ್ಟಿ, ಹೋಳಿಗೆ, ಜೋಳದ ಕಡಬು, ಹೂರಣ ಕಡಬು,  ತರಕಾರಿ ದಿನಿಸು, ಕಾಳು ಪಲ್ಲೆ, ಜೋಳದ ಬಾನ, ಅನ್ನ ಸೇರಿದಂತೆ ವಿವಿಧ ಪದಾರ್ಥಗಳನ್ನು ಹಡ್ಡಲಗಿ ರೂಪದಲ್ಲಿ ದೇವಿಗೆ ನೈವೇದ್ಯ ಅರ್ಪಿಸಿದರು.

ಒಟ್ಟಾರೆ ಕೋವಿಡ್ ಸಂಕಷ್ಟದ ಕಾರಣಕ್ಕೆ ತಾಲೂಕು ಆಡಳಿತ ಹೊರಡಿಸಿದ್ದ ಜಾತ್ರೆ ರದ್ದು ಆದೇಶ ಕಡೆಗಣಿಸಿ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿ ದರ್ಶನ ಪಡೆದರು. ವಿಶೇಷವೆಂದರೆ ಡಿ.30 ರಂದು ಸರಕಾರ ಜಾತ್ರೆ ನಡೆಸಲು ಅವಕಾಶ ನೀಡುವುದಿಲ್ಲ. ಶುಕ್ರವಾರವೇ ಹಡ್ಡಲಗಿ ತುಂಬಬೇಕು ಎಂದು ಗ್ರಾಮದಲ್ಲಿ ಡಂಗೂರ ಸಾರಲಾಗಿತ್ತು ಎನ್ನಲಾಗಿತ್ತು. ಸುದ್ದಿ ಒಬ್ಬರಿಂದ ಒಬ್ಬರಿಗೆ ಹಬ್ಬಿ ಭಕ್ತರು ಅಪಾರ ಸಂಖ್ಯೆಯಲ್ಲಿ ನೆರೆದು ಜಾತ್ರೆಯ ವಾತಾವರಣ ಸೃಷ್ಟಿಸಿದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.