ಗಮನ ಸೆಳೆಯುತ್ತಿವೆ ಗ್ರಾ ಪಂ ಅಭ್ಯರ್ಥಿಗಳ ಚಿಹ್ನೆ!


Team Udayavani, Dec 26, 2020, 6:37 PM IST

ಗಮನ ಸೆಳೆಯುತ್ತಿವೆ ಗ್ರಾ ಪಂ ಅಭ್ಯರ್ಥಿಗಳ ಚಿಹ್ನೆ!

ಸಿಂಧನೂರು: ಮಾರುಕಟ್ಟೆಯಲ್ಲಿ ಹೆಸರುವಾಸಿ ಯಾಗಿರುವ ಉತ್ಪನ್ನದ ಹೆಸರು, ಆರೋಗ್ಯ ಕ್ಷೇತ್ರದಲ್ಲಿ ಗಮನ ಸೆಳೆಯುವ ವಸ್ತುಗಳು ಕೂಡ ಚುನಾವಣೆ ಚಿಹ್ನೆಗಳಾಗಿ ಕಣದಲ್ಲಿ ಗಮನ ಸೆಳೆಯಲಾರಂಭಿಸಿವೆ. ರಾಜಕೀಯ ಪಕ್ಷಗಳ ಗುರುತನ್ನು ಹೊರತುಪಡಿಸಿ ಹಳ್ಳಿಮಟ್ಟದಲ್ಲಿ ನಡೆಯುತ್ತಿರುವ ಗ್ರಾಪಂ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಪಾಲಿಗೆ ಮತದಾರರನ್ನು ಸೆಳೆಯಲು ಚಿಹ್ನೆಗಳೇ ಪ್ರಮುಖ್ಯವಾಗಿವೆ.

ಅವರು ಪಡೆದ ಚಿಹ್ನೆಗಳು ಮನೆ-ಮನೆಗೂ ತಿಳಿಸುವುದರಿಂದ ಅಭ್ಯರ್ಥಿ ಹೆಸರನ್ನು ಇಂತಹ ಚಿಹ್ನೆಯ ವ್ಯಕ್ತಿ ಎಂದೇ ಗುರುತಿಸುವ ಮಟ್ಟಿಗೆ ಪ್ರಖ್ಯಾತಿ ಪಡೆಯುತ್ತಿವೆ. ಕೆಲವು ಬಾರಿ ಗೆದ್ದ ಮೇಲೆ ಅವರ ಅಡ್ಡಹೆಸರಾಗಿ ಚಿಹ್ನೆಗಳು ಸೇರಿಕೊಳ್ಳುತ್ತಿರುವುದರಿಂದ ಅಭ್ಯರ್ಥಿಗಳಿಗಿಂತ ಹೆಚ್ಚಾಗಿ ಚಿಹ್ನೆಗಳು ಸದ್ದು ಮಾಡಲಾರಂಭಿಸಿವೆ. ಪಿಯರ್ಗೆ ವೋಟು ಹಾಕಿ!: ಬೂತಲದಿನ್ನಿ ಗ್ರಾಪಂ ವ್ಯಾಪ್ತಿಯ ಒಂದನೇ ವಾರ್ಡ್‌ನ ಅಭ್ಯರ್ಥಿ ಮಲ್ಲಿಕಾರ್ಜುನ ಅವರು ತಮ್ಮ ಚಿಹ್ನೆಯಾಗಿ ಪಿಯರ್ ಆಯ್ಕೆ ಮಾಡಿಕೊಂಡಿದ್ದಾರೆ.

ತಮ್ಮ ಗುರುತಿನ ಮೂಲಕವೇ ಪ್ರಚಾರ ಮಾಡುತ್ತಿರುವುದರಿಂದ ಊರಲ್ಲಿ ಈ ಹಣ್ಣಿನ ಹೆಸರು ತುಸು ಆಕರ್ಷಣೆ ಸೃಷ್ಟಿಸಿದೆ. ಕಲ್ಲೂರಿನಲ್ಲಿ ಒಬ್ಬ ಅಭ್ಯರ್ಥಿ ಸಿರಿಂಜ್‌ (ಚುಚ್ಚುಮದ್ದು) ಗುರುತಿನ ಮೂಲಕವೇ ಪ್ರಚಾರ ನಡೆಸಿದ್ದು, ತಮ್ಮ ಚಿಹ್ನೆಯ ಸಂಕೇತವಾಗಿ ಅವರು ಗ್ರಾಮದ ಆರೋಗ್ಯ ಸುಧಾರಿಸುವ ಭರವಸೆ ನೀಡುತ್ತಿದ್ದಾರೆ. ಮಲ್ಲಾಪುರದ ಮಹಿಳೆ ರೂಮ್‌ಕೂಲರ್‌ ಚಿಹ್ನೆಯನ್ನು ಆಯ್ಕೆ ಮಾಡಿಕೊಂಡು ಎಲ್ಲರ ಕಷ್ಟಗಳನ್ನು ನಿವಾರಿಸಿ ಮನೆಗಳನ್ನು ತಂಪಾಗಿಡುವೆ ಎನ್ನುವ ಅಭಯ ನೀಡುತ್ತಿದ್ದಾರೆ.

ಯಮನಪ್ಪ ಮಲ್ಲಾಪುರ ಎಂಬುವವರು “ಬಾಣಲೆ’ ಎಂಬ ಚಿಹ್ನೆ ಆಯ್ದುಕೊಂಡು ನಾನಾಗಲೇ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದ್ದು, ನನ್ನನ್ನು ಕಾಪಾಡಿ ಎಂಬ ಸಂದೇಶ ರವಾನಿಸುವಂತಿದೆ. ನನ್ನ ಕೊರಳಿಗೆ ಜಯದ ಮಾಲೆಯಾಗಿ ಮುತ್ತಿನ ಹಾರವನ್ನೇ ಹಾಕಬೇಕು ಎಂದು ಅದನ್ನೇ ಚಿಹ್ನೆಯಗಿ ದುರುಗಪ್ಪ ಎನ್ನುವ ಅಭ್ಯರ್ಥಿ ಆಯ್ಕೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್‌ ಪಂಪ್‌, ಕಪ್‌-ಸಾಸರ್‌, ಟಿವಿ ರಿಮೋಟ್‌,  ತಕ್ಕಡಿ, ಟ್ರ್ಯಾಕ್ಟರ್‌ ಸೇರಿದಂತೆ ಹಲವು ಚಿಹ್ನೆಗಳು ಪ್ರಚಾರ ಸಮಯದಲ್ಲಿ ಸದ್ದು ಮಾಡುತ್ತಿವೆ. ಪಕ್ಷಾತೀತವಾಗಿ ನಡೆಯುವ ಈ ಚುನಾವಣೆಯಲ್ಲಿ ಚಿಹ್ನೆಗಳ ಪಾತ್ರ ಸಾಮಾನ್ಯವೇನಲ್ಲ. ಅವು ಬರೀ ಚುನಾವಣೆಗೆ ಸೀಮಿತವಾಗುವುದಿಲ್ಲ. ಗೆದ್ದ ಮೇಲೆ ಆಯಾ ಅಭ್ಯರ್ಥಿಯೊಂದಿಗೂ ಈ ಚಿಹ್ನೆಗಳು ಸೇರ್ಪಡೆಯಾಗುವುದು ನಡೆದು ಬಂದಿದೆ.

ಗೋಮರ್ಸಿ ಗ್ರಾಮದಲ್ಲಿ ಕರಿಯಪ್ಪ ಎನ್ನುವವರು ನಿಚ್ಚಣಿಕೆ ಚಿಹ್ನೆಯೊಂದಿಗೆ ಕಳೆದಚುನಾವಣೆಯಲ್ಲಿ ಗೆದ್ದರೆ, ಅವರ ಹೆಸರು ಕರಿಯಪ್ಪ ನಿಚ್ಚಣಿಕೆಯಾಗಿ ಮಾರ್ಪಟ್ಟಿದೆ. ನೇಗಿಲು ಹನುಮಂತಪ್ಪ, ಕೂರಿಗೆ ಮಲ್ಲಪ್ಪ ಎನ್ನುವುದು ಸೇರಿದಂತೆ ಹಲವು ಚಿಹ್ನೆಗಳು ಇಂದಿಗೂ ಚರ್ಚೆಯಲ್ಲಿವೆ.  ಅಭ್ಯರ್ಥಿಯೊಬ್ಬರು ಒಮ್ಮೆ ಚುನಾವಣೆಗೆ ಸ್ಪ ರ್ಧಿಸಿ ಮಾಜಿಯಾದ ಮೇಲೂ ಅವರೊಂದಿಗೆ ಚಿಹ್ನೆಗಳು “ಹಾಲಿ’ ಎಂಬಂತೆ ಜತೆಯಲ್ಲೇ ಉಳಿಯುತ್ತಿರುವುದು ವಿಶೇಷ.

ಈ ಹಿಂದೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದಾಗ ನನಗೆ ನಿಚ್ಚಣಿಕೆ ಗುರುತು ಸಿಕ್ಕಿತ್ತು. ಅದನ್ನೇ ಪ್ರೀತಿಯಿಂದ ನನ್ನ ಹೆಸರಿನೊಂದಿಗೆ ಸೇರಿಸಿದ್ದರಿಂದ ಈಗಲೂ ನನ್ನನ್ನು ಹಾಗೆಯೇ ಗುರುತಿಸುತ್ತಾರೆ.

ಕರಿಯಪ್ಪ ನಿಚ್ಚಣಿಕೆ, ಗೋಮರ್ಸಿ

ಯಮನಪ್ಪ ಪವಾರ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.