ಬಸ್- ಕ್ರೂಸರ್ ನಡುವೆ ಭೀಕರ ಅಪಘಾತ: ಮಹಿಳೆ ಸೇರಿ ಐವರು ಸ್ಥಳದಲ್ಲೇ ಸಾವು
Team Udayavani, Dec 27, 2020, 7:51 AM IST
ಚಿತ್ರದುರ್ಗ: ಬಸ್ ಮತ್ತು ಕ್ರೂಸರ್ ವಾಹನ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದಲ್ಲಿ ನಡೆದಿದೆ.
ಅಪಘಾತದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ರೂಸರ್ ವಾಹನವು ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಗೆ ಮುಖಾಮುಖಿ ಢಿಕ್ಕಿಯಾಗಿದೆ.
ಇದನ್ನೂ ಓದಿ:ಶಿರೂರು ನೀರ್ಗದ್ದೆ ಬಳಿ ಭೀಕರ ಅಪಘಾತ: ಲಾರಿಯಡಿಗೆ ಸಿಲುಕಿ ವ್ಯಕ್ತಿ ಸಾವು
ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.