ಎಪಿಎಂಸಿ ಅಭಿವೃದ್ಧಿಗೆ ಸರಕಾರ ಬದ್ಧ: ಶೆಟ್ಟರ
Team Udayavani, Dec 27, 2020, 1:38 PM IST
ಹುಬ್ಬಳ್ಳಿ: ಎಪಿಎಂಸಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಹು-ಧಾ ಮಹಾನಗರ ಪಾಲಿಕೆಯಿಂದ ಎಪಿಎಂಸಿ ವರ್ತಕರಿಗೆ ವಿಧಿಸಲಾಗಿರುವ ಆಸ್ತಿಕರ ಮನ್ನಾ ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಎಪಿಎಂಸಿ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದಅವರು, ಬಹಳ ವರ್ಷಗಳಿಂದ ಎಪಿಎಂಸಿ ಆಸ್ತಿ ಕರ ಬಾಕಿಉಳಿದಿದೆ. ನೀರು, ವಿದ್ಯುತ್, ಒಳಚರಂಡಿ ಸೇರಿದಂತೆಯಾವುದೇ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲಎಂದು ಆರೋಪಿಸಿ ವರ್ತಕರು ಕರ ಪಾವತಿ ಮಾಡಿಲ್ಲ.ಈಗ ಬಡ್ಡಿ ಸಹಿತ ಆಸ್ತಿ ಕರ ಮನ್ನಾ ಮಾಡಲು ಸಚಿವಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಿದೆ.ಪಾಲಿಕೆ ಆಯುಕ್ತರು ಈ ಕುರಿತು ಸರಕಾರಕ್ಕೆ ವರದಿಸಲ್ಲಿಸಬೇಕು ಎಂದರು.
ಎಪಿಎಸಿ ಅಂಗಳ ವಿನ್ಯಾಸ ರಚನೆ ಕುರಿತು ಹುಡಾ, ಪಾಲಿಕೆ ಹಾಗೂ ಎಪಿಎಂಸಿ ವರ್ತಕ ಸಂಘದವರು ಒಂದು ಸಾಮಾನ್ಯ ಒಪ್ಪಂದಕ್ಕೆ ಬರಬೇಕು. ಸರಕಾರದ ನಿಯಮಾವಳಿಗಳ ಪಾಲನೆಯಾಗಬೇಕು. ವರ್ತಕರಿಗೆಸೇಲ್ಡೀಡ್ ಮಾತ್ರ ನೀಡಲಾಗಿದೆ. ಪೂರ್ಣ ಪ್ರಮಾಣದಲ್ಲಿ ಆಸ್ತಿ ಪರಭಾರೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಎಪಿಎಂಸಿ ಅಧ್ಯಕ್ಷ ಸಹದೇವ ಸುಡಕೇನವರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ತಹಶೀಲ್ದಾರ್ ರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಸೇರಿದಂತೆ ಎಪಿಎಂಸಿ ಸದಸ್ಯರಾದ ಚನ್ನು ಹೊಸಮನಿ, ಬಸವರಾಜ ಯಕಲಾಸಪೂರ, ಪ್ರಭುದೇವ ಅಂಕಲಕೋಟೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ