ರೈತರ ಪ್ರತಿಭಟನೆ ಕುರಿತು ಪರದೇಶದ ಸಲಹೆ ಅಗತ್ಯವಿಲ್ಲ : ಸಚಿವ ಪ್ರಹ್ಲಾದ್ ಜೋಶಿ


Team Udayavani, Dec 28, 2020, 6:20 AM IST

ರೈತರ ಪ್ರತಿಭಟನೆ ಕುರಿತು ಪರದೇಶದ ಸಲಹೆ ಅಗತ್ಯವಿಲ್ಲ : ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಬ್ರಿಟನ್‌ ಮತ್ತು ಇತರ ದೇಶದ ಕೆಲವು ಸಂಸತ್‌ ಸದಸ್ಯರು ಆಕ್ಷೇಪಿಸುತ್ತಿರುವುದು ಸರಿಯಲ್ಲ. ಇದು ದೇಶದ ಆಂತರಿಕ ವಿಷಯ. ಇದಕ್ಕೆ ಹೊರಗಿನವರ ಸಲಹೆಗಳು ಅಗತ್ಯವಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹೋರಾಟದ ಬಗ್ಗೆ ವಿದೇಶದಲ್ಲಿ ಒಂದು ಸಮುದಾಯ ಅಥವಾ ಸರಕಾರವೇ ಧ್ವನಿ ಎತ್ತಿದೆ ಎಂಬುದು ಮಾಧ್ಯಮಗಳಲ್ಲಿ ಮುಖ್ಯಸುದ್ದಿಯಾಗುತ್ತಿರುವುದು ಸರಿಯಲ್ಲ. 10-20 ಸಾವಿರ ಜನರು ಸೇರಿ ರಸ್ತೆಯ ಮೇಲೆ ಕುಳಿತು ಕಾನೂನು ರಚಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೆ ಯಾವ ನ್ಯಾಯ? ಇದನ್ನು ಸಹಿಸಲಾಗದು. ಭಾರತದ ಗೌರವ-ಘನತೆ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ ಎಂದರು.

ಪ್ರತಿಭಟನಕಾರರಿಗೆ ಮತ್ತೂಂದು ಮಾತುಕತೆ ಅವಕಾಶ
ಐರೋಪ್ಯ ದೇಶಗಳಲ್ಲಿ ಭಾರತೀಯ ಸಂಜಾತರು ದೊಡ್ಡ ಪ್ರಮಾಣದಲ್ಲಿದ್ದಾರೆ. ಸೆನೆಟ್‌, ಸಿಂಡಿಕೇಟ್‌ ಹಾಗೂ ಸಂಸತ್‌ ಸದಸ್ಯರು ಇದ್ದಾರೆ. ಅವರಲ್ಲಿನ ಬೆರಳೆಣಿಕೆ ಸದಸ್ಯರು ದಿಲ್ಲಿಯ ರೈತರ ಹೋರಾಟ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದು ಸರಿಯಲ್ಲ. ಡಿ. 29ರವರೆಗೆ ಅವರು ಗಡುವು ನೀಡಿದ್ದು, ಕೇಂದ್ರವು ಅವರೊಂದಿಗೆ ಮತ್ತೂಮ್ಮೆ ಮಾತುಕತೆಗೆ ಸಿದ್ಧವಿದೆ. ಆದರೆ ಹೋರಾಟಗಾರರು ಮುಕ್ತ ಮನಸ್ಸು ಹೊಂದಿರಬೇಕೆಂಬುದು ನಮ್ಮ ಸಲಹೆ. ಸಂಸತ್‌ ರಚಿಸಿದ ಕಾನೂನು ರದ್ದುಪಡಿಸಬೇಕೆಂದು ಬೇಡಿಕೆ ಇಟ್ಟಿರುವುದು ಸರಿಯಲ್ಲ ಎಂದು ಹೇಳಿದರು.

ಗಣಿ ಉದ್ಯಮದಲ್ಲಿ ಬದಲಾವಣೆ
ಗಣಿ ಉದ್ಯಮದಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಚರ್ಚೆ ಗಳು ನಡೆದಿವೆ. ಈ ಕುರಿತು ಪ್ರಧಾನ ಮಂತ್ರಿಗಳ ಅನುಭವದ ಹಿನ್ನೆಲೆಯಲ್ಲಿ ಅವರಿಂದ ಮಾರ್ಗದರ್ಶನ ಪಡೆಯಲಾಗುವುದು. ದೇಶದಲ್ಲಿ ಮತ್ತೆ ಯಾವುದೇ ರೀತಿಯ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ಯಾರ ಸಹಾಯವೂ ಬೇಕಾಗಿಲ್ಲ
ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ನೆಲೆಯೂರಿದ್ದು, ಯಾರ ಸಹಾಯವೂ ಅಗತ್ಯವಿಲ್ಲ. 2023ರ ವಿಧಾನಸಭೆ ಹಾಗೂ 2024ರ ಲೋಕಸಭೆ ಚುನಾವಣೆ ಸಹಿತ ಜಿ.ಪಂ., ತಾ.ಪಂ. ಚುನಾವಣೆಯಲ್ಲೂ ಜಯ ಸಾಧಿಸಿ ರಾಜ್ಯದ ನಂಬರ್‌ ಒನ್‌ ಪಕ್ಷವಾಗಿ ಮುಂದುವರಿಯಲಿದೆ ಎಂದು ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ದೇಶದಲ್ಲಿ ಪಕ್ಷವನ್ನು ಸ್ವಂತ ಬಲದ ಆಧಾರ ಮೇಲೆ ಬಲಪಡಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ತೆಲಂಗಾಣ, ಹಿಮಾಚಲ ಪ್ರದೇಶದ ಉಪ ಚುನಾವಣೆ ಹಾಗೂ ಈಶಾನ್ಯ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿದೆ. ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಯೋಚಿಸಿಲ್ಲ. ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಸಂಖ್ಯಾಬಲವಿಲ್ಲ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನೊಂದಿಗೆ ವಿಷಯಾಧಾರಿತ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ಇದರ ವ್ಯಾಪ್ತಿ ಬಿಟ್ಟು ಹೊರಗಡೆ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆಯ ಮಾತೇ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.