ತಿಂಗಳಿಗೆ ಲಕ್ಷ ಖರ್ಚು ಬರೆದರೂ ಬೆಳಕಿಲ್ಲ

ದೀಪ ನಿರ್ವಹಣೆ ಸ್ಥಗಿತ-ಕತ್ತಲಲ್ಲಿ ಬೀದಿಗಳು: ಗುತ್ತಿಗೆದಾರನ ನಿರ್ಲಕ್ಷéಕ್ಕೆ ಜನರ ಆಕ್ರೋಶ

Team Udayavani, Dec 28, 2020, 4:14 PM IST

ತಿಂಗಳಿಗೆ ಲಕ್ಷ ಖರ್ಚು ಬರೆದರೂ ಬೆಳಕಿಲ್ಲ

ವಾಡಿ: ಪಟ್ಟಣದ ಪುರಸಭೆಯ ಕಾಂಗ್ರೆಸ್‌ ಆಡಳಿತ ಕಳೆದ ಒಂದು ತಿಂಗಳಿಂದ ಬೀದಿ ದೀಪಗಳ ನಿರ್ವಹಣೆ ಕೈಬಿಟ್ಟಿದೆ. ಪರಿಣಾಮ ರಾತ್ರಿ ವೇಳೆ ನಗರದ ಬೀದಿಗಳಲ್ಲಿ ಕಗ್ಗತ್ತಲು ಆವರಿಸಿಕೊಳ್ಳುತ್ತಿದ್ದು, ಬಡಾವಣೆಗಳ ಜನರಿಗೆ ಬೆಳಕಿನ ಭಾಗ್ಯವೇ ಇಲ್ಲದಂತಾಗಿದೆ.

ಸುಮಾರು 50 ಸಾವಿರ ಜನಸಂಖ್ಯೆ ಹೊಂದಿರುವ ನಗರದಲ್ಲಿ ಒಟ್ಟು 23 ವಾರ್ಡ್ ìಗಳಿವೆ. ಪುರಸಭೆ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಕಸ ಸ್ವಚ್ಛತೆ, ಚರಂಡಿ-ಶೌಚಾಲಯಗಳ ಶುಚಿತ್ವ, ಬೀದಿ ದೀಪಗಳ ನಿರ್ವಹಣೆ,ನಿತ್ಯ ಕುಡಿಯುವ ನೀರು ಪೂರೈಕೆ ಪುರಸಭೆ ಆಡಳಿತ ನಿಭಾಯಿಸಬೇಕಾದ ಪ್ರಮುಖ ಕರ್ತವ್ಯಗಳು.

ಹಲವು ಬಡಾವಣೆಗಳಲ್ಲಿ ಬೀದಿ ದೀಪಗಳು ಕೆಟ್ಟಿವೆ. ರಾತ್ರಿ ರಸ್ತೆಗಳಲ್ಲಿ ಸಂಚರಿಸಲುಪಾದಚಾರಿಗಳು ಭಯ ಪಡುತ್ತಿದ್ದಾರೆ. ವಾಹನಗಳ ಓಡಾಟ ಒಂದೆಡೆಯಾದರೆ, ನಾಯಿ, ಹಂದಿಗಳ ಕಿರಿಕಿರಿ ಇನ್ನೊಂದೆಡೆ. ಲಾರಿ, ಜೀಪು, ಬೈಕ್‌ಗಳನ್ನು ಬೀದಿಗಳಲ್ಲೇಪಾರ್ಕಿಂಗ್‌ ಮಾಡಲಾಗುತ್ತಿದೆ. ಹೀಗಾಗಿಜನಸಂಚಾರಕ್ಕೆ ತೊಂದರೆಯಾಗುತ್ತಿದೆ.ಕಲಬುರಗಿ ಮೂಲದ ಗುತ್ತಿಗೆದಾರನಿಗೆನೀಡಲಾದ ಬೀದಿ ದೀಪ ನಿರ್ವಹಣೆ ಅವಧಿಪೂರ್ಣಗೊಂಡಿದೆ. ಹೀಗಾಗಿ ಕಳೆದ ಒಂದುತಿಂಗಳಿಂದ ನಿರ್ವಹಣೆ ಸ್ಥಗಿತವಾಗಿದೆ. ಪುರಸಭೆ ಆಡಳಿತ ಒಂದು ವರ್ಷದ ಬೀದಿದೀಪ ನಿರ್ವಹಣೆ ವೆಚ್ಚ ಪಾವತಿಸಿಲ್ಲಎನ್ನುವ ಕಾರಣಕ್ಕೆ ಬೇಸರಗೊಂಡ ಗುತ್ತಿಗೆದಾರ ದೀಪಗಳ ರಿಪೇರಿಗೆ ಮುಂದಾಗುತ್ತಿಲ್ಲ ಎನ್ನುವ ಆರೋಪಕೇಳಿಬರುತ್ತಿದೆ. ಇನ್ನೊಂದೆಡೆ ದೀಪಗಳ ನಿರ್ವಹಣೆ ಹೆಸರಿನಲ್ಲಿ ಗುತ್ತಿಗೆದಾರ ಪುಕ್ಕಟೆ ಬಿಲ್‌ ಪಡೆಯುತ್ತಿದ್ದಾರೆ ಎನ್ನುವ ದೂರುಗಳು ಇವೆ.

ಬೀದಿ ದೀಪಗಳ ನಿರ್ವಹಣೆಗಾಗಿ ಪುರಸಭೆ ಪ್ರತಿ ತಿಂಗಳು ಒಂದು ಲಕ್ಷ ರೂ. ವರೆಗೂ ಖರ್ಚು ಮಾಡುತ್ತಿದೆ. ದೀಪಗಳ ನಿರ್ವಹಣೆ ಮಾಡದೇ ಕೊಟ್ಟಿ ಬಿಲ್ಲು ಬರೆಯಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪುರಸಭೆ ಆಡಳಿತ ಮತ್ತು ಗುತ್ತಿಗೆದಾರನ ಬೇಜವಾಬ್ದಾರಿಗೆ ನಗರ ರಾತ್ರಿ ವೇಳೆ ಕತ್ತಲಲ್ಲಿ ಮುಳುಗಿದೆ.

ಕಾಂಗ್ರೆಸ್‌ ಆಡಳಿತಕ್ಕೆ ಸ್ಥಳೀಯರಿಗೆ ಕುಡಿಯಲು ಶುದ್ಧ ನೀರು ಕೊಡಲಾಗುತ್ತಿಲ್ಲ.ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದ್ದರೂ ಸಮರ್ಪಕವಾಗಿ ಬೀದಿ ದೀಪಗಳ ನಿರ್ವಹಣೆ ಮಾಡಲಾಗದೆ ಇಡೀ ನಗರವನ್ನು ಕತ್ತಲಿಗೆ ನೂಕಿದ್ದಾರೆ. ಅಧಿಕಾರಿಗಳು, ಕಾಂಗ್ರೆಸ್‌ ಆಡಳಿತ ಸದಸ್ಯರು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. -ಭೀಮಶಾ ಜಿರೊಳ್ಳಿ, ಪುರಸಭೆ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ

ಬೀದಿ ದೀಪಗಳ ನಿರ್ವಹಣೆ ಹೊಣೆ ಹೊತ್ತ ಗುತ್ತಿಗೆದಾರನ ಅವಧಿ ಪೂರ್ಣವಾಗಿದೆ. ಹೊಸಟೆಂಡರ್‌ ಕರೆಯಲಾಗಿದ್ದು, ಹತ್ತಾರು ದಿನಗಳಲ್ಲಿ ಮತ್ತೂಬ್ಬ ಗುತ್ತಿಗೆದಾರಕರ್ತವ್ಯಕ್ಕೆ ಹಾಜರಾಗುತ್ತಾರೆ. ಹೊಸ ಗುತ್ತಿಗೆದಾರ ಬರುವವರೆಗೂ ದೀಪಗಳ ನಿರ್ವಹಣೆ ಮಾಡುವಂತೆ ಹಳೆಯ ಗುತ್ತಿಗೆದಾರನಿಗೆ ಸೂಚಿಸಿದರೂ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಜನರಿಗೆ ತುಸು ತೊಂದರೆಯಾಗುತ್ತಿದೆ.  -ವಿಠ್ಠಲ ಹಾದಿಮನಿ, ಮುಖ್ಯಾಧಿಕಾರಿ ಪುರಸಭೆ

 

 

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.