40 ಹಳ್ಳಿಗಳಿಗೆ ಒಬ್ಬರೇ ಅರೆ ವೈದ್ಯರು!

|ವೈದ್ಯರ ಹುದ್ದೆಗಳು ಖಾಲಿ-ಖಾಲಿ |ತುಕ್ಕು ಹಿಡಿದ ಎಕ್ಸರೇ ಯಂತ್ರ |ಶೌಚಾಲಯ ಅವ್ಯವಸ್ಥೆ

Team Udayavani, Dec 28, 2020, 4:33 PM IST

40 ಹಳ್ಳಿಗಳಿಗೆ ಒಬ್ಬರೇ ಅರೆ ವೈದ್ಯರು!

ದೇವದುರ್ಗ: ತಾಲೂಕಿನ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆಗಳು ಖಾಲಿ ಇದ್ದು, ಮಹಾಮಾರಿ ಕೋವಿಡ್ ರೋಗದ ಆತಂಕ ನಡುವೆ 40 ಹಳ್ಳಿಗಳಿಗೆ ಒಬ್ಬರೇ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಡರೋಗಿಗಳಿಗೆ ಸಂಜೀವಿನಿ ಆಗಬೇಕಾದ ಆಸ್ಪತ್ರೆ ಶಾಪ ಗ್ರಸ್ತವಾಗಿದೆ.

ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿ 40ಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ಈ ಗ್ರಾಮಗಳ ಜನರಿಗೆ ಒಬ್ಬರೇ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. 5 ಜನ ವೈದ್ಯರ ಹುದ್ದೆಯಲ್ಲಿ ಅರೆ ಸರಕಾರಿ ಗುತ್ತಿಗೆಯಓರ್ವ ವೈದ್ಯರಿದ್ದಾರೆ. ಉಳಿದ ಹುದ್ದೆ ಭರ್ತಿಗೆ ಸರಕಾರ ಮೀನಾಮೇಷ ಎಣಿಸುತ್ತಿದ್ದು, ಬಡರೋಗಿಗಳು ಆತಂಕಪಡುವಂತಾಗಿದೆ. ಹೇರುಂಡಿ, ಬಾಗೂರು, ಬೊಮ್ಮನಹಳ್ಳಿ, ಚಿಂಚೋಡಿ, ಜಾಲಹಳ್ಳಿ, ಕರಡಿಗುಡ್ಡ, ಅಮರಾಪುರು, ಲಿಂಗದಹಳ್ಳಿ, ಕಕ್ಕಲದೊಡ್ಡಿ, ಜಂಬಲದಿನ್ನಿ, ಮುಂಡರಗಿ, ಪರಾಪೂರು, ಕಮ್ಮಲದಿನ್ನಿ, ಮೇಕಲದೊಡ್ಡಿ, ಗಾಣಾಧಾಳ, ಬಿಆರ್‌.ಗುಂಡ, ಎಸ್‌.ಸಿದ್ದಪುರು, ಮುಕ್ಕನಾಳು, ಬುಂಕಲದೊಡ್ಡಿ, ಬಸಾಪುರು, ಯರಗುಡ್ಡ ಸೇರಿ 40ಕ್ಕೂ ಹಳ್ಳಿಗಳ ಬಡ ರೋಗಿಗಳು ಚಿಕಿತ್ಸೆಗೆ ಈ ಸಮುದಾಯ ಆರೋಗ್ಯ ಕೇಂದ್ರವನ್ನೇ ಅವಲಂಬಿತರಾಗಿದ್ದಾರೆ.

ಅವಧಿ ಮುಗಿದ ಎಕ್ಸರೇ ಯಂತ್ರ: ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ಎಕ್ಸರೇ ಯಂತ್ರ ಕೆಟ್ಟು ಹೋಗಿದೆ. ಎಕ್ಸರೇ ಸೌಲಭ್ಯಕ್ಕಾಗಿ ರೋಗಿಗಳು ಪಟ್ಟಣಕ್ಕೆ ಬರಬೇಕಾಗಿದೆ. ಯಂತ್ರದ ಅವಧಿ 10 ವರ್ಷಕ್ಕೆ ಮುಗಿದಿದ್ದು, ಎರಡೂ¾ರು ವರ್ಷಗಳಿಂದ ಕೆಟ್ಟ ಯಂತ್ರಕ್ಕೆ ಲಕ್ಷಾಂತರ ರೂ. ವೆಚ್ಚ ಭರಿಸಲಾಗುತ್ತಿದೆ. 40ಕ್ಕೂ ಹೆಚ್ಚು ಹಳ್ಳಿಗಳ ಬಡರೋಗಿಗಳು ಎಕ್ಸರೇ ಸೌಲಭ್ಯ ಪಡೆಯಲು 18 ಕಿ.ಮೀ. ದೂರದ ದೇವದುರ್ಗ ಪಟ್ಟಣಕ್ಕೆ ಬರಬೇಕಾಗಿದೆ.

ಹುದ್ದೆಗಳು ಖಾಲಿ-ಖಾಲಿ: ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಐದು ವೈದ್ಯರ ಹುದ್ದೆಗಳುಬಹುತೇಕ ಖಾಲಿ ಇದ್ದು, ಅರೆ ಸರಕಾರಿ ಗುತ್ತಿಗೆ ಒಬ್ಬವೈದ್ಯರೇ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. 12 ಡಿ ಗ್ರೂಪ್‌ ಹುದ್ದೆಯಲ್ಲಿ 7 ಜನರಿದ್ದು, 5 ಹುದ್ದೆಗಳು ಖಾಲಿ ಇವೆ. ಹೆರಿಗೆ ವೈದ್ಯರು ಇಲ್ಲದೇ ಇರುವ ಹಿನ್ನೆಲೆ ಸ್ಟಾರ್ಪ್‌ ನರ್ಸ್‌ಗಳೇ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿದ್ದು, ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಅವ್ಯವಸ್ಥೆ ಶೌಚಾಲಯ: ಆರೋಗ್ಯ ಕುರಿತುಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲೇ ಶೌಚಾಲಯ ಅವ್ಯವಸ್ಥೆಗೊಂಡಿದೆ. ಪುರುಷ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ಮಹಿಳೆಯರ ಶೌಚಾಲಯವೇ ಸಾಮೂಹಿಕವಾಗಿ ಬಳಕೆ ನಡೆದಿದೆ. 30 ಹಾಸಿಗೆ ಆಸ್ಪತ್ರೆ ಹಲವು ಸಮಸ್ಯೆ ಮಧ್ಯೆ ಘನಘೋರ ನರಕ ಎನಿಸಿದೆ. ಇನ್ನಾದರೂ ಇಲ್ಲಿನ ಸಮಸ್ಯೆ ಕುರಿತು ಸ್ಥಳೀಯ ಜನಪತ್ರಿನಿಧಿಗಳು ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೆಲ ವೈದ್ಯರ ಹುದ್ದೆಗಳ ಖಾಲಿ ಇದ್ದು, ನಿಯೋಜನೆಗೊಂಡ ವೈದ್ಯರು ಸೇವೆ ನೀಡಲಾಗುತ್ತಿದೆ. ಎಕ್ಸರೇ ಕೆಟ್ಟು ಹೋಗಿದ್ದು, ದುರಸ್ತಿಗೆ ಕ್ರಮವಹಿಸಲಾಗುತ್ತದೆ.  –ಡಾ| ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.