ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಟಾಪ್‌ 3 ರಾಜ್ಯಗಳಲ್ಲಿ ಒಂದಾಗಬೇಕು: ಬಿ.ಎಸ್‌.ಯಡಿಯೂರಪ್ಪ


Team Udayavani, Dec 28, 2020, 8:26 PM IST

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಟಾಪ್‌ 3 ರಾಜ್ಯಗಳಲ್ಲಿ ಒಂದಾಗಬೇಕು: ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ದೇಶದ ಟಾಪ್‌ 3 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಬೇಕು ಎಂಬ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಆರೋಗ್ಯ ಸೌಧ ಕಟ್ಟಡ ಉದ್ಘಾಟಸಿ ಅವರು ಮಾತನಾಡಿದರು.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕ ಆಧಾರದಲ್ಲಿ ಕರ್ನಾಟಕ ನೂರರಲ್ಲಿ 66 ಅಂಕಗಳಿಸಿ 6ನೇ ಶ್ರೇಯಾಂಕದಲ್ಲಿದೆ. ಈ ಶ್ರೇಯಾಂಕ ಸುಧಾರಿಸಿ ನೀತಿ ಆಯೋಗ ನಿಗದಿ ಪಡಿಸಿರುವ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಮೂಲಕ ದೇಶದ ಮೊದಲ ಮೂರು ಸ್ಥಾನಗಳಲ್ಲಿ ರಾಜ್ಯ ಕೂಡ ಒಂದಾಗಬೇಕು ಎಂಬ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದರು.

ಆರೋಗ್ಯ ಇಲಾಖೆಯ ಎಲ್ಲಾ ಕಚೇರಿಗಳು ಒಂದೇ ಸೂರಿನಲ್ಲಿ ಇರಲಿ ಎಂಬ ಉದ್ದೇಶದಿಂದ ಸರ್ಕಾರ 238 ಕೋಟಿ ರೂ. ವೆಚ್ಚ ಮಾಡಿ ಎರಡು ಹಂತಗಳಲ್ಲಿ ಕಟ್ಟಡ ನಿರ್ಮಾಣ ಮಾಡಿದೆ. ಆರೋಗ್ಯ ಇಲಾಖೆಯ 53 ಕಚೇರಿಗಳು ಈ ಸೌಧದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ಇದನ್ನೂ ಓದಿ:ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆ ಸಂಭ್ರಮ

ರಾಜ್ಯದ ಎಲ್ಲಾ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ದೊರೆಯಬೇಕು ಎಂಬುವುದು ಸರ್ಕಾರದ ಆಶಯವಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ್‌ ಭಾರತ ಯೋಜನೆಯಡಿಯಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ: ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ 1500 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಪ್ರಾರಂಭ ಮಾಡಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಮುಂದಿನ ಆಯುವ್ಯಯದಲ್ಲಿ ಅನುದಾನ ಮೀಸಲಿಡಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡಗಳು ಮತ್ತು ಸಿಬ್ಬಂದಿಗಳು ಅಗತ್ಯವಿದ್ದು ಈ ಬಗ್ಗೆ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಎಂಬಿಬಿಎಸ್‌ ಪೂರೈಸಿದ ಎಲ್ಲಾ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಜನರ ಸೇವೆ ಮಾಡುವ ಮೂಲಕ ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ ತೋರಬೇಕು. ಆಸ್ಪತ್ರೆಗೆ ಬಂದ ರೋಗಿಗಳನ್ನು ಸಿಬ್ಬಂದಿಗಳು ತಮ್ಮ ಮನೆ ಮಕ್ಕಳ ರೀತಿಯಲ್ಲಿ ಆರೈಕೆ ಮಾಡಬೇಕು ಎಂದು ಮನವಿ ಮಾಡಿದರು.

ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ
ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ಆರೋಗ್ಯಕರ ಸಮಾಜದಿಂದ ದೇಶದ ಪ್ರಗತಿ ಸಾಧ್ಯ. ಆ ಹಿನ್ನೆಲೆಯಲ್ಲಿ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ ಸರ್ಕಾರದ ವೈದ್ಯಕೀಯ ಕಾಲೇಜುಗಳಿದ್ದು ಮುಂದಿನ ಹಂತದಲ್ಲಿ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.
ಕೊರೊನೊ ವೇಳೆ ವೈದ್ಯರು ಮತ್ತು ಆರೋಗ್ಯಕ್ಷೇತ್ರದ ಸಿಬ್ಬಂದಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.ಆ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ಭತ್ಯಯನ್ನು ನೀಡಲು ಸರ್ಕಾರ 125 ಕೋಟಿ ರೂ.ಮೀಸಲಿಡುವ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು. ಆರೋಗ್ಯ ವಿಚಾರದಲ್ಲಿ ಕೇರಳ ಮತ್ತು ತಮಿಳುನಾಡುಗಳನ್ನು ಮಾದರಿಯಾಗಿ ತೆಗೆದು ಕೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಕೂಡ ಇಂಡಿಯಾ ಮಾಡೆಲ್‌ ಆಗಬೇಕು ಎಂಬುವುದು ಸರ್ಕಾರದ ಆಶಯವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಆರೋಗ್ಯ ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.