ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು!

ಬಸ್ತಿಹಳ್ಳಿ ಗ್ರಾಮದ ಶಾಂತಕುಮಾರ್ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು

Team Udayavani, Dec 30, 2020, 2:18 PM IST

ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು

ಮಣಿಪಾಲ: ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಪರಿಗಣಿಸಲ್ಪಟ್ಟಿರುವ ಗ್ರಾಮ ಪಂಚಾಯ್ತಿ ಚುನಾವಣೆಯ ಮತಎಣಿಕೆ ಬಿರುಸುಗೊಂಡಿದ್ದು, ಏತನ್ಮಧ್ಯೆ ಕೆಲವು ಕುತೂಹಲಕಾರಿ ಘಟನೆ ನಡೆದಿದೆ.

ಒಂದು ಮತದ ಅಂತರದಿಂದ ಗೆದ್ದ ಅದೃಷ್ಟಶಾಲಿಗಳು!

ಬೆಳ್ಮಣ್ಣು ಮುಂಡ್ಕೂರು ಗ್ರಾಮ ಪಂಚಾಯ್ತಿಯ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಸರಳ ಶೆಟ್ಟಿ 339 ಮತ ಪಡೆದಿದ್ದು, ಪ್ರತಿಸ್ಪರ್ಧಿ ಪ್ರೇಮಾ ಶೆಟ್ಟಿ340 ಮತ ಗಳಿಸಿ ಕೇವಲ ಒಂದು ಮತದ ಅಂತರದಿಂದ ಜಯಗಳಿಸಿದ್ದಾರೆ.

ನಾಡ ಗ್ರಾ.ಪಂನಲ್ಲಿ ಗೆಲುವು ತಂದ 1 ಮತ:

ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಚಂದ್ರಶೇಖರ್ ಆಚಾರ್ಯ ಒಂದು ಮತದ ಅಂತರದಿಂದ ಜಯ ಸಾಧಿಸಿದ್ದಾರೆ. ಚಂದ್ರಶೇಖರ್ 170 ಮತ ಪಡೆದಿದ್ದು, ಪ್ರತಿಸ್ಪರ್ಧಿ ರಾಜು ಭಂಡಾರಿ 169 ಮತ ಗಳಿಸಿ ಪರಾಜಯಗೊಂಡಿದ್ದಾರೆ.

ಒಂದು ಮತದ ಗೆಲುವು:

ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮ ಪಂಚಾಯ್ತಿಯ ಬಸ್ತಿಹಳ್ಳಿ ಗ್ರಾಮದ ಶಾಂತಕುಮಾರ್ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಸಮಬಲದ ಫಲಿತಾಂಶ- ಟಾಸ್ ನಲ್ಲಿ ಗೆದ್ದ ಅಭ್ಯರ್ಥಿ:

ಬಾಗಲಕೋಟೆ ಜಿಲ್ಲೆಯ ಗೊರಬಾಳ ಗ್ರಾಮ ಪಂಚಾಯ್ತಿಯ ಫಲಿತಾಂಶ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಇಲ್ಲಿನ ಗೋಪಶಾನಿ ವಾರ್ಡ್ ನ ಇಬ್ಬರು ಅಭ್ಯರ್ಥಿಗಳು ಸಮಾನ ಮತ ಪಡೆದಿದ್ದರು.

ಗೋಪಶಾನಿ ವಾರ್ಡ್ ನ ಮಹಾಂತೇಶ್ ಮತ್ತು ಕಳಕಪ್ಪ ತಲಾ 88 ಮತಗಳನ್ನು ಪಡೆದಿದ್ದು, ಸಮಬಲ ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಗೆಲುವು ನಿರ್ಧರಿಸಲು ಟಾಸ್  ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು.

ಚುನಾವಣಾಧಿಕಾರಿ ಇಬ್ಬರು ಅಭ್ಯರ್ಥಿಗಳ ಸಮ್ಮುಖದಲ್ಲಿ ಟಾಸ್ ಹಾಕಿದ್ದು, ಇದರಲ್ಲಿ ಅಭ್ಯರ್ಥಿ ಮಹಾಂತೇಶ್ ಗೆಲುವಿನ ನಗು ಬೀರಿದ್ದಾರೆ.

ಬೂಕನಕೆರೆ ಗ್ರಾ.ಪಂನಲ್ಲಿ ಲಾಟರಿ ಮೂಲಕ ಆಯ್ಕೆ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರೂರು ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮ ಪಂಚಾಯಿತಿ ಫಲಿತಾಂಶದಲ್ಲಿ ಸಮಬಲದ ಮತ ಪಡೆದಿದ ಪರಿಣಾಮ ಲಾಟರಿ ಡ್ರಾ ಮೂಲಕ ಅಭ್ಯರ್ಥಿ ಆಯ್ಕೆ ನಡೆದಿತ್ತು.

ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಜುಳ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರುಕ್ಮಿಣಮ್ಮ ತಲಾ 183 ಮತ ಪಡೆದಿದ್ದರು. ನಂತರ ಅಧಿಕಾರಿಗಳ ನಡೆಸಿದ ಲಾಟರಿ ಡ್ರಾ ಪರೀಕ್ಷೆಯಲ್ಲಿ ಜೆಡಿಎಸ್ ನ ಮಂಜುಳಾ ವಿಜೇತರಾಗುವ ಮೂಲಕ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

ಸಾಣಿಕೆರೆ ಅಭ್ಯರ್ಥಿಗೆ ಲಾಟರಿ ಮೂಲಕ ಗೆಲುವು:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯ್ತಿಯ ಅಭ್ಯರ್ಥಿಗಳಾದ ಅಂಜು ಎಂ ಹಾಗೂ ಬಿ.ಎ.ಕ್ಷಿತಿಜಾ 375 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಅಂಜು ಎ ಲಾಟರಿ ಮೂಲಕ ಗೆಲುವು ಸಾಧಿಸಿದ್ದಾರೆ.

ಸ್ಪರ್ಧೆಯಲ್ಲಿ ತಾಯಿಗೆ ಜಯ, ಮಗನಿಗೆ ಸೋಲು!

ಬೀದರ್ ತಾಲೂಕಿನ ಚಿಮಕೋಡ್ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ತಾಯಿ ಗೆಲುವು ಸಾಧಿಸಿದ್ದು, ಮಗ ಸೋಲನ್ನನುಭವಿಸಿದ್ದಾರೆ. ಚಿಮಕೋಡ್ ನ ಖಾಜಾಪುರ ಗ್ರಾಮದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ತಾಯಿ ತುಳಜಮ್ಮ 244 ಮತ ಪಡೆದು ಜಯ ಗಳಿಸಿದ್ದಾರೆ. ಪುತ್ರ ಶಿವರಾಜ್ 255 ಮತ ಪಡೆದು ಪರಾಜಯಗೊಂಡಿದ್ದು, ಪ್ರತಿಸ್ಪರ್ಧಿ ಅನಿಲ್ 301 ಮತ ಪಡೆದು ಗೆಲುವು ಪಡೆದಿದ್ದಾರೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.