ಎಚ್ಚರ…ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ
ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಹೊಸ ವರ್ಷಾಚರಣೆಗೆ ಕಠಿಣ ನಿರ್ಬಂಧ ವಿಧಿಸಲಾಗಿದೆ.
Team Udayavani, Dec 30, 2020, 3:25 PM IST
ನವದೆಹಲಿ:ಬ್ರಿಟನ್ ನಿಂದ ಭಾರತಕ್ಕೆ ವಾಪಸ್ ಆದವರಿಂದ ನೂತನ ರೂಪಾಂತರಿತ ಕೋವಿಡ್ ಸೋಂಕು ಹಾಗೂ ಕೋವಿಡ್ 19 ಸೋಂಕು ಹರಡದಿರುವ ಕುರಿತು ಮುಂಜಾಗ್ರತಾ ಕ್ರಮವಾಗಿ ಹೊಸ ಸಂಭ್ರಮಾಚರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಬೇಕು ಎಂದು ಕೇಂದ್ರ ಸರ್ಕಾರ ಬುಧವಾರ(ಡಿಸೆಂಬರ್ 30, 2020) ಸಲಹೆ ನೀಡಿದೆ.
ಜನಸಂದಣಿಯನ್ನು ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30, 31 ಹಾಗೂ ಜನವರಿ 1ರಂದು ನಿರ್ಬಂಧ ವಿಧಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಹೊಸ ವರ್ಷಾಚರಣೆಗೆ ಕಠಿಣ ನಿರ್ಬಂಧ ವಿಧಿಸಲಾಗಿದೆ.
ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಕೋವಿಡ್ 19 ಸೋಂಕಿನ ಸಕ್ರಿಯ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಏತನ್ಮಧ್ಯೆ ಬ್ರಿಟನ್ ಮತ್ತು ಅಮೆರಿಕದಲ್ಲಿ ನೂತನ ರೂಪಾಂತರಿತ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ನಿಟ್ಟಿನಲ್ಲಿ ಇನ್ನೂ ಕೂಡಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಬೆಳ್ತಂಗಡಿ ಮತಎಣಿಕೆ ಕೇಂದ್ರದ ಬಳಿ ಪಾಕಿಸ್ಥಾನ್ ಜಿಂದಾಬಾದ್ ಕೂಗಿದ ಎಸ್ ಡಿಪಿಐ ಕಾರ್ಯಕರ್ತರು!
ಚಳಿಗಾಲದಲ್ಲಿನ ಹೊಸ ವರ್ಷ ಸಂಭ್ರಮಾಚರಣೆಯನ್ನು ಕಟ್ಟು ನಿಟ್ಟಿನ ನಿರ್ಬಂಧದ ಮೂಲಕ ಆಚರಿಸುವ ಮೂಲಕ ಕ್ಷಿಪ್ರವಾಗಿ ಹರಡಬಲ್ಲ ನೂತನ ರೂಪಾಂತರಿತ ಕೋವಿಡ್ ಸೋಂಕನ್ನು ತಡೆಯಬೇಕಾಗಿದೆ. ಅಲ್ಲದೇ ಹೆಚ್ಚು ಜನರು ಗುಂಪುಗೂಡಲು ಅವಕಾಶ ನೀಡಬಾರದು ಎಂದು ಕೇಂದ್ರ ಎಚ್ಚರಿಸಿದೆ.
ಏತನ್ಮಧ್ಯೆ ಅಂತರ್ ಜಿಲ್ಲೆ ಮತ್ತು ಅಂತರಾಜ್ಯ ನಡುವೆ ಜನರ ಓಡಾಟ ಹಾಗೂ ಸರಕು ಸಾಗಾಟಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಹಬ್ಬದ ಸಂದರ್ಭದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗಿರುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ