ಆಸ್ತಿಗಾಗಿ ತಂದೆಯ ಮೇಲೆ ಬಿಸಿನೀರು ಎರಚಿ ಚಾಕುವಿನಿಂದ ಇರಿದು ಕೊಂದ ಡ್ರಗ್ಸ್‌ ವ್ಯಸನಿ!


Team Udayavani, Dec 31, 2020, 10:50 AM IST

ಆಸ್ತಿಗಾಗಿ ತಂದೆಯ ಮೇಲೆ ಬಿಸಿನೀರು ಎರಚಿ ಚಾಕುವಿನಿಂದ ಇರಿದು ಕೊಂದ ಡ್ರಗ್ಸ್‌ ವ್ಯಸನಿ!

ಬೆಂಗಳೂರು: ಆಸ್ತಿ ವಿಚಾರಕ್ಕೆ ನಿವೃತ್ತ ಆರ್‌ಬಿಐ ಅಧಿಕಾರಿಯೊಬ್ಬರು ಪುತ್ರನಿಂದಲೇ ಹತ್ಯೆಗೀಡಾಗಿರುವ ಘಟನೆ ಭಾರತೀನಗರ
ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಬಿಐ ಲೇಔಟ್‌ ನಿವಾಸಿ ಅಮರನಾಥ್‌ (61) ಕೊಲೆಯಾದವರು. ಈ ಸಂಬಂಧ ಅವರ ಪುತ್ರ ಆರೋಪಿ ಮನಾಂಕ್‌ (27) ಎಂಬಾತನನ್ನು ಬಂಧಿಸಲಾಗಿದೆ.

ಅಮರನಾಥ್‌ 1 ವರ್ಷದ ಹಿಂದಷ್ಟೇ ನಿವೃತ್ತಿ ಹೊಂದಿದ್ದು, ಪತ್ನಿಗೆ ವಿಚ್ಛೇಧನ ನೀಡಿದ್ದಾರೆ. ಮುಂಬೈನಲ್ಲಿ ಪುತ್ರ ಮನಾಂಕ್‌ ಜತೆ ವಾಸವಾಗಿದ್ದರು.

ಬೆಂಗಳೂರಿನ ಆರ್‌ಬಿಐ ಲೇಔಟ್‌ನಲ್ಲಿ ಹೊಸ ಮನೆ ನಿರ್ಮಾಣ ಮಾಡಲು ಕೆಲ ತಿಂಗಳಿಂದ ಆರ್‌ಬಿಐ ಲೇಔಟ್‌ನ ಬಾಡಿಗೆ
ಮನೆಯಲ್ಲಿ ವಾಸವಾಗಿದ್ದರು. ಈ ಮಧ್ಯೆ ವಿಪರೀತ ಮಾದಕ ವಸ್ತು ವ್ಯಸನಿ ಆಗಿದ್ದ ಮನಾಂಕ್‌ 3 ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದು ತಂದೆ ಜತೆ ಆಸ್ತಿ ವಿಚಾರಕ್ಕೆ ಜಗಳವಾಡಿದ್ದ. ಹೀಗಾಗಿ ತಂದೆ ಅಮರನಾಥ್‌, ತನ್ನ ಪರಿಚಯಸ್ಥ ಆಪ್ತ ಸಮಾಲೋಚರ ಬಳಿ ಕರೆದೊಯ್ದು ಪುತ್ರನಿಗೆ ಆಪ್ತ ಸಮಾಲೋಚನೆ ಕೊಡಿಸಿದ್ದರೆಂದು ಪೊಲೀಸರು ಹೇಳಿದರು.

ಇದನ್ನೂ ಓದಿ:ವಿಭಿನ್ನ ಕರಪತ್ರದಿಂದ ಗಮನ ಸೆಳೆದ ಕಲ್ಕೆರೆಯ ಗಂಗಮ್ಮ ಪಡೆದ ಮತ ಎಷ್ಟು ಗೊತ್ತಾ?

ತಂದೆಯನ್ನು ಕೊಲ್ಲುವುದಾಗಿ ಹೇಳಿದ್ದ: ಆಪ್ತ ಸಮಾಲೋಚನೆ ವೇಳೆ ಆರೋಪಿ ಮನಾಂಕ್‌ ತಂದೆ-ತಾಯಿಯನ್ನು ಕೊಂದರೆ ಎಲ್ಲಾ ಆಸ್ತಿ ತನಗೆ ಸಿಗುತ್ತದೆ ಅಲ್ಲವೇ? ಎಂದು ಆಪ್ತ ಸಮಾಲೋಚಕರನ್ನು ಪ್ರಶ್ನಿಸಿದ್ದಾನೆ. ಅದರಿಂದ ದಿಗ್ಭ್ರಮೆಗೊಂಡ ಆಪ್ತಸಮಾಲೋಚಕರು, ಈ ವಿಚಾರವನ್ನು ಅಮರನಾಥ್‌ ಬಳಿ ಹೇಳಿದ್ದರು.

ಆದರೆ, ಅಮರನಾಥ್‌ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಮಂಗಳವಾರ ರಾತ್ರಿ ಮನೆಗೆ ಊಟಕ್ಕೆ ಬರುವಂತೆ ಆಪ್ತ ಸಮಾಲೋಚಕರಿಗೆ ಅಮರನಾಥ್‌ ಆಹ್ವಾನ ನೀಡಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಡ್ರಗ್ಸ್‌ ಅಮಲಿನಲ್ಲೇ ಆರೋಪಿ, ಕುಳಿತಿದ್ದ ತಂದೆ ಮೇಲೆ ಬಿಸಿ ನೀರನ್ನು ಎರಚಿದ್ದಾನೆ. ಅದರಿಂದ ಗಂಭೀರವಾಗಿ ಗಾಯಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಕೆಲ ಹೊತ್ತು ಮೃತ ದೇಹದ ಬಳಿಯೇ ಕುಳಿತುಕೊಂಡಿದ್ದ. ಮತ್ತೂಂದೆಡೆ ಊಟಕ್ಕೆಂದು ಮನೆಗೆ ಬಂದ ಆಪ್ತ ಸಮಾಲೋಚಕರು, ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆಸ್ತಿ ಪರಸ್ತ್ರೀಗೆ ಬರೆಯುತ್ತಾರೆ…
ಆರೋಪಿ ವಿಚಾರಣೆ ವೇಳೆ ಕೆಲ ಮಾಹಿತಿ ಬಹಿರಂಗ ಪಡಿಸಿದ್ದಾನೆ. “ತಾನೂ ವಿಪರೀತ ಮಾದಕ ವಸ್ತು ವ್ಯಸನಿಯಾಗಿದ್ದು, ತನಗೆ ತಂದೆ ಹಣ ಕೊಡುತ್ತಿರಲಿಲ್ಲ. ಸಾಕಷ್ಟು ಬಾರಿ ಕೇಳಿದರೂ ಡ್ರಗ್ಸ್‌ ಸೇವನೆಗೆ ಹಣ ಕೊಡುವುದಿಲ್ಲ ಎಂದು ನಿಂದಿಸಿದ್ದರು.
ಅಲ್ಲದೆ, ತಂದೆ ಅಮರನಾಥ್‌, ತನ್ನ ತಾಯಿಗೆ ವಿಚ್ಛೇಧನ ನೀಡಿ, ಪರಸ್ತ್ರೀ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ. ಹೀಗಾಗಿ ಆಸ್ತಿ ಆಕೆಗೆ ಬರೆಯುತ್ತಾರೆ ಎಂದು ಭಾವಿಸಿ ಕೊಲೆಗೈದೆ. ಡ್ರಗ್ಸ್‌ ಅಮಲಿನಲ್ಲಿ ಕೃತ್ಯ ಎಸಗಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.