ಕಿಲಾಡಿಗಳಿಗೆ ಮೆಚ್ಚುಗೆ
Team Udayavani, Jan 1, 2021, 6:45 PM IST
“ಕಿಲಾಡಿಗಳು’- ಹೀಗೊಂದು ಸಿನಿಮಾ ಬಿಡುಗಡೆಯಾಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಖ್ಯವಾಗಿ ಪೊಲೀಸ್ ಇಲಾಖೆ ಸಿನಿಮಾವನ್ನು ಮೆಚ್ಚಿಕೊಂಡಿದೆ. ಬಿ.ಪಿ.ಹರಿಹರನ್ ಅವರ ನಿರ್ದೇಶನ, ನಿರ್ಮಾಣವಿದೆ. ಮಹೇಂದ್ರ ಮಣೋತ್ ಕೂಡಾ ಚಿತ್ರದನಿರ್ಮಾಣದಲ್ಲಿ ಕೈ ಜೋಡಿಸುವ ಜೊತೆಗೆ ಪ್ರಮುಖ ಪಾತ್ರ ಮಾಡಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹರಿಹರನ್, “ಇದು ಮನುಷ್ಯನ ಅಂಗಾಂಗಗಳಕಳ್ಳಸಾಗಣಿಕೆ ಕುರಿತಾದ ಸಿನಿಮಾ. ಈ ಚಿತ್ರದಲ್ಲಿ ಮಕ್ಕಳನ್ನುಕಿಡ್ನಾಪ್ ಮಾಡಿ, ಅವರ ಅಂಗಾಂಗಗಳನ್ನು ಯಾವ ರೀತಿ ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುತ್ತಾರೆ, ಅದಕ್ಕೆ ಅವರು ಅನುಸರಿಸುವ ಮಾರ್ಗಗಳೇನು ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುವುದು ನಿರ್ದೇಶಕರ ಮಾತು. ಚಿತ್ರತಂಡ ಈ ಚಿತ್ರವನ್ನು ಪೊಲೀಸರಿಗೆ ಅರ್ಪಿಸಿದೆ.
ಅದಕ್ಕೆ ಕಾರಣ ಚಿತ್ರದಲ್ಲಿ ಬರುವ ಪೊಲೀಸ್ ಅಂಶಗಳು. ಇಡೀ ಚಿತ್ರದಲ್ಲಿ ಪೊಲೀಸ್ ಸಾಹಸವನ್ನು ಎತ್ತಿಹಿಡಿಯಲಾಗಿದೆ. ಪೊಲೀಸರ ಕುರಿತಾಗಿಯೇ ಹಾಡುಗಳಿದೆ. ಪೊಲೀಸ್ಇಲಾಖೆಗೆ ಟಿಕೆಟ್ ಕೂಡಾ ನೀಡಿದ್ದು, ಕುಟುಂಬ ಸಮೇತ ಸಿನಿಮಾ ನೋಡಿಖುಷಿ ಪಟ್ಟಿದ್ದಾರೆ. ಇನ್ನು, ಕಳ್ಳರು ಮಕ್ಕಳನ್ನು ಕಿಡ್ನಾಪ್ ಮಾಡಿದಾಗ ಪೊಲೀಸರು ಯಾವ ರೀತಿ ಅವರನ್ನು ರಕ್ಷಿಸುತ್ತಾರೆ, ಅವರು ತೆಗೆದುಕೊಳ್ಳುವ ರಿಸ್ಕ್ಯಾವ ರೀತಿಯದ್ದು ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆ.ಚಿತ್ರದಲ್ಲಿ ಗುರುರಾಜ ಹೊಸಕೋಟೆ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.
ಶ್ರೀನಾಥ್ ಕೈಯಲ್ಲಿ ಪ್ರಣಯ ರಾಜ ಪೋಸ್ಟರ್ : “ಪ್ರಣಯ ರಾಜ’ ಅಂದ್ರೆ ಕನ್ನಡ ಚಿತ್ರರಂಗದಲ್ಲಿ ಮೊದಲು ನೆನಪಿಗೆ ಬರುವಹೆಸರು ಹಿರಿಯ ನಟ ಶ್ರೀನಾಥ್ ಅವರದ್ದು. 1970-80ರ ದಶಕದಲ್ಲಿ ರೊಮ್ಯಾಂಟಿಕ್ ಚಿತ್ರಗಳ ಮೂಲಕ “ಪ್ರಯಣ ರಾಜ’ ಎಂಬಪಟ್ಟ ಗಿಟ್ಟಿಸಿಕೊಂಡಿದ್ದರು ಶ್ರೀನಾಥ್.
ಈಗ ಇದೇ “ಪ್ರಣಯ ರಾಜ’ ಎಂಬ ಹೆಸರಿನಲ್ಲಿಕನ್ನಡದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಲು ರೆಡಿಯಾಗುತ್ತಿದೆ. ಅಂದಹಾಗೆ, ಈ “ಪ್ರಣಯರಾಜ’ ಚಿತ್ರದಲ್ಲಿ ನಟ ಭುವನ್ ಪೊನ್ನಣ್ಣನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಹಿರಿಯ ನಟಶ್ರೀನಾಥ್ ಅವರ ಕೈಯಿಂದ ಚಿತ್ರತಂಡ, “ಪ್ರಣಯ ರಾಜ’ ಚಿತ್ರದ ಮೊದಲ ಪೋಸ್ಟರ್ನ ಬಿಡುಗಡೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
MUST WATCH
ಹೊಸ ಸೇರ್ಪಡೆ
Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು
Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು
Arrested: ಲಿವ್ ಇನ್ ಸಂಗಾತಿ ಆತ್ಮಹತ್ಯೆ; ಐಆರ್ಎಸ್ ಅಧಿಕಾರಿ ಬಂಧನ
ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ
Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು