ಮೂರು ತ್ತೈಮಾಸಿಕ: ಸಹಜ…ಸುರಕ್ಷಿತ ಹೆರಿಗೆಗೆ ಸುಲಭ ಯೋಗ

ಉತ್ಕಟಾಸನ ಮಾಡುವುದರಿಂದ ಗರ್ಭಿಣಿಯರ ಸ್ನಾಯುಗಳು ಬಲಗೊಳ್ಳುತ್ತವೆ.

Team Udayavani, Jan 1, 2021, 4:32 PM IST

 ಮೂರು ತ್ತೈಮಾಸಿಕ: ಸಹಜ…ಸುರಕ್ಷಿತ ಹೆರಿಗೆಗೆ ಸುಲಭ ಯೋಗ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಅನೇಕ ವಿಧದ ಆರೋಗ್ಯ, ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಉದಾಹರಣೆಗೆ ಕಾಲು ಸೆಳೆತ, ಉಸಿರಾಟದ ತೊಂದರೆಗಳು, ಆತಂಕ, ಖಿನ್ನತೆ ಇತ್ಯಾದಿ. ಆದರೆ ಯೋಗದ ಮೂಲಕ ಇದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಿದೆ. ಜತೆಗೆ ತಮ್ಮ ದೇಹ ಮತ್ತು ಮನಸ್ಸು ಮಾತ್ರವಲ್ಲ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯವನ್ನೂ ಕಾಪಾಡಬಹುದು ಹಾಗೂ ಸುಲಭ ಹಾಗೂ ಸುರಕ್ಷಿತ ಹೆರಿಗೆಗೆ ಇದು ಸಹಕಾರಿಯಾಗುತ್ತದೆ.

ಗರ್ಭಿಣಿಯಾದ ತತ್‌ಕ್ಷಣ ಯೋಗ ಪ್ರಯೋಗ ಮಾಡಬಾರದು. ಮಗು ಪಡೆಯುವ ಯೋಜನೆ ಇದ್ದರೆ ಕೂಡಲೇ ಮಾರ್ಗದರ್ಶಕರ ಸಹಾಯದಿಂದ ಯೋಗ ಪ್ರಾರಂಭಿಸಬಹುದು. ಗರ್ಭಧಾರಣೆಯ ಅನಂತರ ಮಾಡಬಹುದಾದ ಯೋಗ ಭಂಗಿಗಳ ಬಗ್ಗೆ ಮೊದಲೇ ತಜ್ಞರಿಂದ ಕೇಳಿ ತಿಳಿಯಿರಿ. ಹೊಸ ಭಂಗಿಗಳನ್ನು
ಪ್ರಯೋಗ ಮಾಡಿ ನೋಡುವುದು ಸರಿಯಲ್ಲ. ಪ್ರತೀ ಮೂರು ತ್ತೈಮಾಸಿಕದಲ್ಲಿ ಅಭ್ಯಾಸ ಮಾಡುವ ಭಂಗಿಗಳು ಬೇರೆಬೇರೆ ಇರುತ್ತವೆ.

ಜತೆಗೆ ತನ್ನ ಆರೋಗ್ಯದ ಇತಿಹಾಸವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಆರಂಭದ ಮೂರು ತಿಂಗಳು ಹೆಚ್ಚು ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಕೆಲವೊಂದು ಯೋಗ ಭಂಗಿಗಳನ್ನು ಹೆಚ್ಚಾಗಿ ತಜ್ಞರು ಗರ್ಭಿಣಿಯರಿಗೆ ಶಿಫಾರಸು ಮಾಡುತ್ತಾರೆ. ಅವುಗಳ ಕುರಿತ ಮಾಹಿತಿ ಇಲ್ಲಿದೆ. ಈ ಭಂಗಿಗಳು ಭ್ರೂಣದ ಆರೋಗ್ಯಕರ ಬೆಳವಣಿಗೆಗೆ, ಗರ್ಭಾಶಯದ ಜಾಗ ಹೆಚ್ಚಿಸಲು, ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಲ್ಲದೇ ನಿಯಮಿತ ವ್ಯಾಯಾಮ ಮಾಡುವುದರಿಂದ ಮನಸ್ಸು ಶಾಂತವಾಗಿರುತ್ತದೆ.

*ವೃಕ್ಷಾಸನವನ್ನು ಗರ್ಭಿಣಿಯರು ಮಾಡಬಹುದು. ಇದರಿಂದ ಕಿಬ್ಬೊಟ್ಟೆಯ ಅಂಗಗಳಿಗೆ ಮಸಾಜ್‌ ದೊರೆತು ಬೆನ್ನು, ಕಾಲು, ಕುತ್ತಿಗೆ ಮೇಲಿನ ಒತ್ತಡ ನಿವಾರಣೆಯಾಗುವುದು.

*ಉತ್ಕಟಾಸನ ಮಾಡುವುದರಿಂದ ಗರ್ಭಿಣಿಯರ ಸ್ನಾಯುಗಳು ಬಲಗೊಳ್ಳುತ್ತವೆ. ಇದು ಸಹಜ ಹೆರಿಗೆಗೆ ಸಹಕಾರಿಯಾಗುತ್ತದೆ.

*ಸಾಮಾನ್ಯವಾಗಿ ಗರ್ಭಿಣಿಯರು ಹೆಚ್ಚು ತಿನ್ನುವ ಪರಿಪಾಠವಿದೆ. ಇದರ ಅಗತ್ಯವಿಲ್ಲದಿದ್ದರೂ ಪದೇಪದೇ ಕಾಡುವ ಸುಸ್ತು, ಹಸಿವಿನಿಂದಾಗಿ ಏನಾದರೂ
ತಿನ್ನುವ ಬಯಕೆಯಾಗುವುದು ಸಹಜ. ಇದರಿಂದ ದೇಹದಲ್ಲಿ ಹೆಚ್ಚಿನ ಕೊಬ್ಬು ಶೇಖರಣೆಯಾಗುವುದು. ಕೋನಾಸನವು ಸೊಂಟ ಮತ್ತು ದೇಹದ ಕೊಬ್ಬನ್ನು ನಿಯಂತ್ರಣದಲ್ಲಿರಿಸುತ್ತದೆ.

* ಪ್ರಾಯಾಂಕಾಸನ, ಹಸ್ತ ಪಾದಾಂಗುಷ್ಟಾಸನ ಕಿಬ್ಬೊಟ್ಟೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

*ದೇಹದೊಳಗಿನ ಅಂಗಾಂಗಗಳಿಗೆ ಬಲ ಒದಗಿಸುವ ಭದ್ರಾಸನವು ಸಹಜ ಹೆರಿಗೆಗೆ ಸಹಕಾರಿಯಾಗುತ್ತದೆ.

*ಪರ್ವತಾಸನವು ದೇಹಕ್ಕೆ ಶಕ್ತಿ ತುಂಬುತ್ತದೆ ಮತ್ತು ಬೆನ್ನು ನೋವು ನಿವಾರಣೆಗೆ ಸಹಕಾರಿ.

*ಯಷ್ಠಿಕಾಸಾನವು ದೇಹದ ಭಂಗಿಯನ್ನು ಸರಿಪಡಿಸಿ ದೇಹ ಹಿಗ್ಗಲು, ಒತ್ತಡವನ್ನೂ ನಿವಾರಿಸಲು ಸಹಕಾರಿ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.