ಹೆಬ್ರಿ : ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ
Team Udayavani, Jan 1, 2021, 5:09 PM IST
ಸಾಂದರ್ಭಿಕ ಚಿತ್ರ
ಹೆಬ್ರಿ : ಖಾಸಗಿ ಕಾಲೇಜಿನ ಉಪನ್ಯಾಸಕರಾಗಿ ಹೆಬ್ರಿ ಬಡ ಗುಡ್ಡೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವೆಂಕಟೇಶ್ ಎಂಬುವರು ಶುಕ್ರವಾರ ಬೆಳಿಗ್ಗೆ ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವೆಂಕಟೇಶ್ ಮೂಲತಃ ರೋಣದ ನಿವಾಸಿ. ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ 5 ವರ್ಷದ ಹಿಂದೆ ವಿವಾಹವಾಗಿದ್ದು, ಈ ವಿಷಯ ಯುವತಿ ಮನೆಗೆ ಗೊತ್ತಿಲ್ಲ ಎಂದು ತಿಳಿದು ಬಂದಿದೆ.
ಮೃತ ವೆಂಕಟೇಶ್ ಪತ್ನಿ ಹೆಬ್ರಿಯ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದು, ಶುಕ್ರವಾರ ಕಾಲೇಜಿಗೆ ಹಾಜರಾಗಿದ್ದ ವೆಂಕಟೇಶ್ ಬೆಳಿಗ್ಗೆ ಈಗ ಬರುತ್ತೇನೆ ಎಂದು ಮನೆಗೆ ಹೋಗಿ ಹೆಂಡತಿಗೆ ಕೂಡಲೆ ಬರುವಂತೆ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ತರಗತಿಯಲ್ಲಿ ಇದ್ದ ಹೆಂಡತಿ ತಡವಾಗಿ ಮೊಬೈಲ್ ನೋಡಿ ಕೂಡಲೇ ಮನೆಗೆ ಹೋಗಿ ನೋಡುವಾಗ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಆತಿಥ್ಯ ಬಡಿಸಿ ನಶಿಸುತ್ತಿರುವ ನಂಜನಗೂಡು ರಸಬಾಳೆ ಉಳಿದೀತೇ?
ವೆಂಕಟೇಶ್ ಈ ಹಿಂದೆ ಮೂಡಬಿದಿರೆಯಲ್ಲಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದರು. ಆದರೆ ಲಾಕ್ ಡೌನ್ ಸಮಯದಲ್ಲಿ ಕಳೆದ ಮಾಚ್೯ ನಿಂದ ಕೆಲಸವಿಲ್ಲದೆ ಹೆಬ್ರಿಯ ಬಾಡಿಗೆ ಮನೆಯಲ್ಲಿದ್ದರು .ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಸ್ಥಳಕ್ಕೆ ಹೆಬ್ರಿ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ .ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ