ಗ್ರಾಮೀಣದಲ್ಲಿ ಬಿಜೆಪಿ ಬೇರು ಬಲವರ್ಧನೆ

ನಾಯಕರ ಚಿಂತನೆಗೆ ಶಕ್ತಿ ತುಂಬಿದ ಫಲಿತಾಂಶ | ನಿಪ್ಪಾಣಿ ತಾಲೂಕಿನಲ್ಲಿ ಕಮಲ ಪಡೆಗೆ ಆಘಾತ

Team Udayavani, Jan 1, 2021, 7:28 PM IST

ಗ್ರಾಮೀಣದಲ್ಲಿ ಬಿಜೆಪಿ ಬೇರು ಬಲವರ್ಧನೆ

ಬೆಳಗಾವಿ: ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಸ್ಥಾನಗಳಲ್ಲಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 350ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಚುನಾವಣೆ ನಡೆದ ಒಟ್ಟು 477 ಗ್ರಾಪಂಗಳ ಪೈಕಿ ಸುಮಾರು 350 ಗ್ರಾಪಂಗಳಲ್ಲಿ13 ಶಾಸಕರನ್ನು ಹೊಂದಿರುವ ಬಿಜೆಪಿ ಮೇಲುಗೈಸಾಧಿಸಿದೆ. ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ 120ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ತನ್ನ ಬೆಂಬಲಿತಸದಸ್ಯರ ಮೂಲಕ ಅಧಿಕಾರ ಹಿಡಿಯಲಿದೆ.ಗ್ರಾಮಮಟ್ಟದಲ್ಲಿ ಬಿಜೆಪಿ ಬೇರನ್ನು ಇನ್ನಷ್ಟುಗಟ್ಟಿಗೊಳಿಸಬೇಕು. ಈ ಬೇರು ಎಲ್ಲ ಕಡೆವಿಸ್ತಾರಗೊಳ್ಳಬೇಕು ಎಂಬ ಪಕ್ಷದ ನಾಯಕರಚಿಂತನೆಗೆ ಗ್ರಾಪಂ ಚುನಾವಣೆ ಫಲಿತಾಂಶ ಇನ್ನಷ್ಟು ಶಕ್ತಿ ನೀಡಿದೆ.

ಅಥಣಿ ಹಾಗೂ ಕಾಗವಾಡದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಕಾಗವಾಡದಲ್ಲಿ ಎಲ್ಲ 23 ಪಂಚಾಯತ್‌ ಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿವೆ. ಅದೇ ರೀತಿ ಕುಡಚಿ ಮತ್ತು ರಾಯಬಾಗ ವಿಧಾನಸಭಾ ಕ್ಷೇತ್ರಗಳಲ್ಲಿ ಸಹ ಬಿಜೆಪಿ ಬೆಂಬಲಿತರುಅಧಿಕ ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. ಹುಕ್ಕೇರಿವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಎಲ್ಲಕಡೆ ವಿಜಯ ಸಾಧಿಸಿ ಕತ್ತಿ ಸಹೋದರರಿಗೆ ಮತ್ತಷ್ಟು ಬಲ ತುಂಬಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹ ಬಿಜೆಪಿ ಬೆಂಬಲಿತರು ಹೆಚ್ಚು ಗ್ರಾಪಂಗಳನ್ನುವಶಪಡಿಸಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರ ಹಿಡಿತದಲ್ಲಿರುವ ಮೂಡಲಗಿ ಹಾಗೂ ಗೋಕಾಕತಾಲೂಕಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಬಿಜೆಪಿ ಶಾಸಕರಿರುವ ರಾಮದುರ್ಗಹಾಗೂ ಸವದತ್ತಿಯಲ್ಲಿ ಸಹ ಈ ಪಕ್ಷದ ಬೆಂಬಲಿತಅಭ್ಯರ್ಥಿಗಳು ವಿಜಯದ ಮಾಲೆ ಧರಿಸಿದ್ದಾರೆ. ಆದರೆ ಬೈಲಹೊಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಕ್ಕಿಲ್ಲ. ಬಿಜೆಪಿ ಇಬ್ಬರು ಮಾಜಿ ಶಾಸಕರು ತಮ್ಮ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಬರುವಂತೆ ನೋಡಿಕೊಂಡಿದ್ದಾರೆ.

ಕಾಂಗ್ರೆಸ್‌ ಹಾಗೂ ಬಿಜೆಪಿ ಹೊರತುಪಡಿಸಿ ಜೆಡಿಎಸ್‌ ಬೆಂಬಲಿತ ಸುಮಾರು 110 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನು ಖಾನಾಪುರ ತಾಲೂಕಿನಲ್ಲಿ ಸಹ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗಿದೆ. ಇಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ

ಒಟ್ಟಾರೆ ಸ್ಥಾನ ಗಳಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತರುಇಲ್ಲಿ ಅತ್ಯಧಿಕ ಸ್ಥಾನಗಳನ್ನುಗೆದ್ದಿದ್ದು 20ಕ್ಕೂ ಹೆಚ್ಚು ಗ್ರಾಪಂಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಎರಡನೇಸ್ಥಾನದಲ್ಲಿರುವ ಬಿಜೆಪಿ ಬೆಂಬಲಿತರು 18ಕ್ಕೂ ಹೆಚ್ಚು ಪಂಚಾಯತ್‌ಗಳಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್‌ ಬೆಂಬಲಿತರು 8 ರಿಂದ 10 ಪಂಚಾಯತ್‌ಗಳಲ್ಲಿ ಹಿಡಿತ ಸಾಧಿಸಲಿದ್ದಾರೆ.

ಬಿಜೆಪಿಗೆ ಆಘಾತ :

ನಿಪ್ಪಾಣಿ ತಾಲೂಕಿನ ಫಲಿತಾಂಶ ಬಿಜೆಪಿಗೆ ಆಘಾತ ಉಂಟುಮಾಡಿದೆ. ಕ್ಷೇತ್ರದಲ್ಲಿ ಬಲವಾದ ಹಿಡಿತ ಹೊಂದಿರುವ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಈ ಫಲಿತಾಂಶ ಆಲೋಚನೆ ಮಾಡುವಂತೆ ಮಾಡಿದೆ. ಬಿಜೆಪಿ ಬೆಂಬಲಿತರು 13 ಪಂಚಾಯತ್‌ಗಳಲ್ಲಿ ಅಧಿಕ ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್‌ ಬೆಂಬಲಿತ ಸದಸ್ಯರೂ 13

ಪಂಚಾಯತ್‌ಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಹಾಗೂ ಮಾಜಿ ವಿಧಾನಪರಿಷತ್‌ ಸದಸ್ಯ ವೀರಕುಮಾರ ಪಾಟೀಲ ಅವರ ಪ್ರಭಾವ ಕೆಲಸ ಮಾಡಿದೆ.ಇನ್ನೂ, ಕಾಂಗ್ರೆಸ್‌ ಶಾಸಕ ಗಣೇಶ ಹುಕ್ಕೇರಿ ಹಿಡಿತದಲ್ಲಿರುವ ಚಿಕ್ಕೋಡಿ ತಾಲೂಕಿನಲ್ಲಿ ಬಿಜೆಪಿಬಲವಾದ ಪೈಪೋಟಿ ನೀಡಿದೆ. ಇಲ್ಲಿ ಕಾಂಗ್ರೆಸ್‌ ಶೇ. 60ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌ ಬೆಂಬಲಿತರು ಒಟ್ಟು 25 ಗ್ರಾಪಂಗಳ ಪೈಕಿ 18ರಲ್ಲಿ ಅಧಿಕಾರ ಹಿಡಿಯಲಿದ್ದಾರೆ.

ಗೆಲುವಿನ ಲೆಕ್ಕಾಚಾರ :

ಜಿಲ್ಲೆಯ ಒಟ್ಟು 499 ಗ್ರಾಪಂಗಳ ಪೈಕಿ 477ಕ್ಕೆ ಚುನಾವಣೆ ನಡೆದಿತ್ತು. ಒಟ್ಟು 8195 ಸ್ಥಾನಗಳ ಪೈಕಿ 769 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿತ್ತು. 31 ಸ್ಥಾನಗಳಿಗೆ ಯಾವುದೇನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಲಭ್ಯ ಮಾಹಿತಿಯಂತೆ 31ಸ್ಥಾನಗಳನ್ನು ಹೊರತುಪಡಿಸಿ ಒಟ್ಟು 8164 ಗ್ರಾಪಂ ಸ್ಥಾನಗಳಲ್ಲಿಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 4850 ಸ್ಥಾನಗಳಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಬೆಂಬಲಿತ 2935 ಅಭ್ಯರ್ಥಿಗಳುಆಯ್ಕೆಯಾಗಿದ್ದರೆ. ಜೆಡಿಎಸ್‌ ಕೇವಲ 110 ಸ್ಥಾನಕ್ಕೆ ತೃಪ್ತಿಪಟ್ಟಿದೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಸೇರಿದಂತೆ ಇತರ ಅಭ್ಯರ್ಥಿಗಳು 269 ಕಡೆ ಜಯ ಗಳಿಸಿದ್ದಾರೆ.

ಜನರ ಒಲವು ಬಿಜೆಪಿ ಕಡೆಗೆ ಇದೆ ಎಂಬುದನ್ನು ಗ್ರಾಪಂ ಚುನಾವಣೆತೋರಿಸಿಕೊಟ್ಟಿದೆ. ಗ್ರಾಮೀಣ ಭಾಗದಲ್ಲೂ ಈಗ ಬಿಜೆಪಿ ಬೇರು ಬಹಳ ಗಟ್ಟಿಯಾಗುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರಕಾರ್ಯಕ್ರಮ ಮತ್ತು ಯೋಜನೆ ಸಾಕಷ್ಟು ನೆರವಾಗಿವೆ. ರಾಜೇಶ ನೇರ್ಲಿ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ

ಜಿಲ್ಲೆಯಲ್ಲಿ ಶೇ. 60ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಕಾಂಗ್ರೆಸ್‌ ಮೇಲುಗೈಸಾಧಿಸಿದೆ. ಬಿಜೆಪಿ ಆಡಳಿತವನ್ನುಗ್ರಾಮಮಟ್ಟದಲ್ಲಿ ತಿರಸ್ಕರಿಸಲಾಗಿದೆ. ಕೇಂದ್ರಹಾಗೂ ರಾಜ್ಯ ಸರಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗೆ ಜನರು ಪಾಠ ಕಲಿಸಿದ್ದಾರೆ ಲಕ್ಷ್ಮಣರಾವ್‌ ಚಿಂಗಳೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ

 

ಕೇಶವ ಆದಿ

ಟಾಪ್ ನ್ಯೂಸ್

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.