ಕಸ ಗುಡಿಸುವ ಮಹಿಳೆಗೆ ಅಧ್ಯಕ್ಷ ಹುದ್ದೆ

ಕೊಲ್ಲಂ ಪಥನಪುರಂ ಬ್ಲಾಕ್‌ ಪಂಚಾಯಿತಿಗೆ ಮಹಿಳಾ ಶಕ್ತಿ

Team Udayavani, Jan 2, 2021, 7:57 AM IST

Kollalam

ಕೊಲ್ಲಂ: ಪ್ರಜಾಪ್ರಭುತ್ವದ ಶಕ್ತಿಯೇ ಅಂಥದ್ದು. ಎಂಥಾ ಸಾಮಾನ್ಯ ವ್ಯಕ್ತಿಯೂ ಕೂಡ ಅತ್ಯುನ್ನತ ಹುದ್ದೆಗೆ ಏರಲು ಸಾಧ್ಯವಿದೆ. ಅದಕ್ಕೊಂದು ನಿದರ್ಶನ ಎಂಬಂತೆ ಕೊಲ್ಲಂ ಜಿಲ್ಲೆಯ ಪಥನಪುರಂ ಬ್ಲಾಕ್‌ ಪಂಚಾಯತ್‌ಗೆ ಅಧ್ಯಕ್ಷರಾಗಿ ಕೆ.ಆನಂದವಲ್ಲಿ (46)ಆಯ್ಕೆಯಾಗಿದ್ದಾರೆ. ಜತೆಗೆ ಅಧ್ಯಕ್ಷ ಹುದ್ದೆ ಮಹಿಳೆಗೆ ಮೀಸಲಾಗಿದ್ದದ್ದೂ ಅನುಕೂಲವಾಯಿತು.

2011ರಲ್ಲಿ ಅವರು ಪಂಚಾಯತ್‌ನಲ್ಲಿ ಕಸ ಗುಡಿಸುವ ಅರೆಕಾಲಿಕ ಹುದ್ದೆಗೆ ನೇಮಕಗೊಂಡಿದ್ದರು. ಇತ್ತೀಚೆಗೆ ಮುಕ್ತಾಯವಾದ ಚುನಾವಣೆಯಲ್ಲಿ ಆನಂದವಲ್ಲಿ ಜಯಸಾಧಿಸಿದ್ದರು. 13 ಮಂದಿ ಸದಸ್ಯರಿರುವ ಪಂಚಾಯತಿಯಲ್ಲಿ ಎಲ್‌ಡಿಎಫ್ 7, ಕಾಂಗ್ರೆಸ್‌ ನೇತೃತ್ವದ ಯುಡಿಎಫ್ 6 ಸ್ಥಾನಗಳನ್ನು ಗೆದ್ದಿದೆ.

“ಪಂಚಾಯಿತಿ ಅಧ್ಯಕ್ಷ ಹುದ್ದೆಗೆ ಏರುತ್ತೇನೆ ಎಂಬ ವಿಶ್ವಾಸವೇ ಇರಲಿಲ್ಲ. ಕಸ ಗುಡಿಸುವ ಅರೆಕಾಲಿಕ ಕೆಲಸ ಮಾಡುವ ಅವಧಿಯಲ್ಲಿ ಮಾತ್ರ ಕಚೇರಿಯಲ್ಲಿ ಇರುತ್ತಿದೆ’ ಎಂದು ಅವರು ಹೇಳಿದ್ದಾರೆ. ಅವರು ಸಿಪಿಎಂ ಸದಸ್ಯರಾಗಿದ್ದಾರೆ. ಆನಂದವಲ್ಲಿ ಅವರ ಪತಿ ಮೋಹನನ್‌ ಕೂಡ ಪತ್ನಿಗೆ ಒಲಿದು ಬಂದ ಅದೃಷ್ಟದ ಬಗ್ಗೆ ಮೂಕ ವಿಸ್ಮಿತರಾಗಿದ್ದಾರೆ.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಆನಂದವಲ್ಲಿ ಆಡಳಿತ ವ್ಯವಸ್ಥೆ ಹೇಗೆ ನಡೆಯುತ್ತದೆ ಎಂಬುದನ್ನು ಕಲಿತುಕೊಳ್ಳಲು ಮುಂದಾಗಿದ್ದಾರೆ. ಕಸಗುಡಿಸುವ ವೃತ್ತಿಯಲ್ಲಿದ್ದರೂ, ಚಹಾ, ನೀರು ಪೂರೈಕೆ ಮತ್ತು ಇತರ ಕಚೇರಿ ಕೆಲಸಗಳನ್ನು ಮಾಡುತ್ತಿದ್ದರು. ಸಭೆ ನಡೆಸುವ ವೇಳೆ ಕೊಠಡಿ ಪ್ರವೇಶ ಮಾಡುತ್ತಿದ್ದಾಗ ಹಲವು ವಿಚಾರಗಳು ಕೇಳುತ್ತಿದ್ದವು. ಅದರ ನೆನಪು ಮತ್ತು ಆಡಳಿತದ ಬಗ್ಗೆ ಕಲಿತುಕೊಂಡು ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

ಪಿಯುಸಿ ವರೆಗೆ ಕಲಿತಿರುವ ಅವರು ಹುದ್ದೆ ನ್ಯಾಯ ಒದಗಿಸಬಲ್ಲರು ಎಂಬ ನಂಬುಗೆ ಸ್ಥಳೀಯರದ್ದು. 2011ರಲ್ಲಿ ಕೆಲಸಕ್ಕೆ ಸೇರಿದ್ದ ಅವರು 2017ರ ವರೆಗೆ ಪ್ರತಿ ತಿಂಗಳಿಗೆ 2 ಸಾವಿರ ರೂ. ಪಡೆಯುತ್ತಿದ್ದರು. ನಂತರ ಆ ಮೊತ್ತವನ್ನು 6 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಯಿತು.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.