ಅಲ್ಯೂಮಿನಿಯಂ ದೋಟಿ; ಇರಲಿ ಮುನ್ನೆಚ್ಚರಿಕೆ

ಕೃಷಿ ಭೂಮಿ ಅಂಚಿನಲ್ಲಿ ವಿದ್ಯುತ್‌ ತಂತಿ

Team Udayavani, Jan 2, 2021, 9:13 AM IST

ಅಲ್ಯೂಮಿನಿಯಂ ದೋಟಿ; ಇರಲಿ ಮುನ್ನೆಚ್ಚರಿಕೆ

ಬೆಳ್ತಂಗಡಿ: ಕೃಷಿ ಜಮೀನಿನ ಮೇಲ್ಭಾಗ ಹಾದು ಹೋಗುವ ವಿದ್ಯುತ್‌ ತಂತಿ ಕೃಷಿಕರ ಪಾಲಿಗೆ ಜವರಾಯನಾಗ ತೊಡಗಿದೆ. ಪುತ್ತೂರು ಅಜ್ಜಿಕಲ್ಲು ಸಮೀಪ ಡಿ. 25ರಂದು ವ್ಯಕ್ತಿಯೊಬ್ಬರು ಅಲ್ಯೂಮಿನಿಯಂ ದೋಟಿಯಲ್ಲಿ ಅಡಿಕೆ ಕೊಯ್ಯುವ ಸಂದರ್ಭ ಸಂಭವಿಸಿದ ದುರ್ಘ‌ಟನೆಯು ಅಲ್ಯುಮಿನಿಯಂ ದೋಟಿ ಬಳಕೆಯ ಬಗ್ಗೆ ಮತ್ತೆ ಆಲೋಚಿಸುವಂತೆ ಮಾಡಿದೆ.

ಈ ಹಿಂದೆ ಅಡಿಕೆ, ತೆಂಗಿನಕಾಯಿ ಕೊಯ್ಲಿನ ಸಂದರ್ಭ ಸಾಂಪ್ರದಾಯಿಕ ಬಿದಿರಿನ ದೋಟಿ ಬಳಸಲಾಗುತ್ತಿತ್ತು. ಕಾಲಕ್ರಮೇಣ ಸುಧಾರಿತ ಅಲ್ಯೂಮಿನಿಯಂ ದೋಟಿ, ಏಣಿ (ಲ್ಯಾಡರ್‌) ಬಂದಿತು. ಇದು ಒಂದೆಡೆ ಪ್ರಯೋಜನಕಾರಿ ಯಾದರೆ ಮುನ್ನೆಚ್ಚರಿಕೆ ಕೊರತೆಯಿಂದಾಗಿ ಅಪಾಯ ಎದುರಾಗುತ್ತಿದೆ. ಮೂರು ವರ್ಷ ಹಿಂದೆ ಬೆಳ್ತಂಗಡಿ ತಾಲೂಕಿನ ಲಾೖಲ ಗ್ರಾಮದಲ್ಲೂ ಅಲ್ಯುಮಿನಿಯಂ ದೋಟಿ ವಿದ್ಯುತ್‌ ತಂತಿಗೆ ತಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದನ್ನು ಸ್ಮರಿಸಬಹುದು.

ಮುನ್ನೆಚ್ಚರಿಕೆ ಕಷ್ಟವೇನಲ್ಲ
ವಿದ್ಯುತ್‌ ತಂತಿಗಳು ಬೇಸಗೆ ಹಾಗೂ ಚಳಿಗಾಲದಲ್ಲಿ ವಿಕಸನ- ಸಂಕುಚನದಿಂದಾಗಿ ಮರಮಟ್ಟುಗಳಿಗೆ ತಾಗಿ ವಿದ್ಯುತ್‌ ಅರ್ಥಿಂಗ್‌ ಆಗುವ ಸಾಧ್ಯತೆ ಇರುತ್ತದೆ. ಸ್ಥಳದ ಮಾಲಕರು ತಮ್ಮ ಜಮೀನಿನಲ್ಲಿ ವಿದ್ಯುತ್‌ ತಂತಿ ಎಳೆಯುವಾಗಲೇ ಎಚ್ಚರಿಕೆ ವಹಿಸಿ ತಂತಿಗೆ ರಬ್ಬರ್‌ ಹೊದಿಕೆಯನ್ನು ಅಳವಡಿಸಿದರೆ ಅನುಕೂಲ. ಏಕೆಂದರೆ ಮೆಸ್ಕಾಂ ಇಲಾಖೆ ಪೈಪ್‌ ಅಳವಡಿಸಿ ಕೊಡುವುದಿಲ್ಲ. ಅದೇನಿದ್ದರೂ ಕೃಷಿಕರ ಹೊರೆ ಎಂಬ ವಾದವೂ ಕೇಳಬರುತ್ತಿದೆ. ಒಂದುವೇಳೆ ಕೃಷಿಕರು ಅಥವಾ ವಿದ್ಯುತ್‌ ಬಳಕೆದಾರರು ನಿಗದಿತ ಮೊತ್ತ ನೀಡಿದಲ್ಲಿ ಇಲಾಖೆ ಸಹಕರಿಸುತ್ತದೆ. ಹಾಗಾಗಿ ಅಡಿಕೆ, ತೆಂಗಿನ ಮರ ಅಥವಾ ಇತರ ಮರಮಟ್ಟುಗಳಿಗೆ ತಂತಿ ತಾಗಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿಗಳು ಮೃತಪಟ್ಟಲ್ಲಿ ಮೆಸ್ಕಾಂ ಹೊಣೆ ಹೊರುವುದಿಲ್ಲ, ಕೆಲವೊಮ್ಮೆ ಮಾನವೀಯ ನೆಲೆಯಲ್ಲಿ ಪರಿಹಾರ ಒದಗಿಸುತ್ತದೆ ಎನ್ನುವುದು ಆಧಿಕಾರಿಗಳ ಅಭಿಪ್ರಾಯ.

ಅತ್ಯಂತ ಕಡಿಮೆ ತೂಕ ಎನ್ನುವುದೇ ಅಲ್ಯೂಮಿನಿಯಂ ದೋಟಿಯ ಹೆಗ್ಗಳಿಕೆ. 40 ಅಡಿ ಉದ್ದದ ಬೇರೆ ದೋಟಿಗಳು 20 ಕೆ.ಜಿ. ತೂಕವಿದ್ದರೆ ಅಲ್ಯೂಮಿನಿಯಂ ದೋಟಿ 60 ಅಡಿ ಉದ್ದವಿದ್ದರೂ 4 ಕೆ.ಜಿ. ತೂಕವಷ್ಟೇ ಇದೆ. ಕೃಷಿಕನೇ ಸುಲಭವಾಗಿ ಬಳಸಬಹುದಾದ್ದರಿಂದ ಕಾರ್ಮಿಕರ ಕೊರತೆಯನ್ನು ಇದು ನೀಗಿಸುತ್ತದೆ. ಆದರೆ ಬಳಕೆಯಲ್ಲಿ ಪರಿಣತಿ ಅಗತ್ಯ. ಕೆಲವು ಕಂಪೆನಿಗಳು ದೋಟಿ ವಿನ್ಯಾಸಗೊಳಿಸುವಾಗಲೇ ರಬ್ಬರ್‌ ಹ್ಯಾಂಡಲ್‌ ನೀಡುತ್ತವೆ. ಹೆಚ್ಚಿನವು ರಬ್ಬರ್‌ ಹ್ಯಾಂಡಲ್‌ ಹೊರತಾಗಿ ಮಾರುಕಟ್ಟೆಗೆ ಬರುತ್ತವೆ. ಮುನ್ನೆಚ್ಚರಿಕೆ ತೀರಾ ಆನಿವಾರ್ಯ.

ಪರ್ಯಾಯ ಅನ್ವೇಷಣೆ ಅಗತ್ಯ
ಸದ್ಯ ಕಾರ್ಬನ್‌ ಫೈಬರ್‌ಯುಕ್ತ ದೋಟಿಯೂ ಲಭ್ಯವಿದೆ. ಅದು ಅಲ್ಯೂಮಿನಿಯಂ ದೋಟಿಗಿಂತ ಹಗುರವಾಗಿದ್ದರೂ ಅದರಲ್ಲೂ ವಿದ್ಯುತ್‌ ಪ್ರವಹಿಸುತ್ತದೆ. ನೆಲ್ಯಾಡಿಯ ತಯಾರಕರೊಬ್ಬರು ಫೈಬರ್‌ದೋಟಿಯನ್ನು ಅನ್ವೇಷಿಸಿದ್ದು, 20, 30 ಅಡಿಗಿಂತ ಹೆಚ್ಚು ಉದ್ದವಿದ್ದರೆ ಬಾಗುವ ಕಾರಣ ದೊಡ್ಡ ಮರಗಳಿಂದ ಕೊಯ್ಲು ಕಷ್ಟ. ಈ ಹಿನ್ನೆಲಯೆಲ್ಲಿ ಪರ್ಯಾಯ ಅನ್ವೇಷಣೆ ಅಗತ್ಯ ಎಂಬುದು ಕೃಷಿಕರ ಅಭಿಪ್ರಾಯ.

01 ಬಿದಿರು ದೋಟಿಯಲ್ಲೂ ಸಮಸ್ಯೆ ಇಲ್ಲದಿಲ್ಲ ; ತೇವಾಂಶ ವಿದ್ದ ದೋಟಿ ವಿದ್ಯುತ್‌ ತಂತಿಗೆ ತಾಗಿದರೆ ಸಮಸ್ಯೆ.
02 ಕಾಲಿಗೆ ಫೈಬರ್‌ ಆಥವಾ ಪ್ಲಾಸ್ಟಿಕ್‌ ಮಾದರಿ, ಶೂ,ಚಪ್ಪಲಿ ಹಾಗೂ ಕೈಗೆ ಗ್ಲೌಸ್‌ ಕಡ್ಡಾಯವಾಗಿ ಬಳಸಬೇಕು.
03 ದೋಟಿಗೆ ಪರ್ಯಾಯವಾಗಿ ಇತರೆ ವಿಧಾನಗಳ ಸಂಶೋಧನೆ ನಡೆಯಬೇಕು.

ಅಲ್ಯೂಮಿನಿಯಂ ದೋಟಿ ಬಳಕೆಗೆ ಮುನ್ನ ತೋಟದಲ್ಲಿರುವ ವಿದ್ಯುತ್‌ ತಂತಿಗಳಿಗೆ ಡ್ರಿಪ್‌ ಪೈಪ್‌ ಅಳವಡಿಸುವುದೇ ಸೂಕ್ತ. ಎಲ್ಲ ರೀತಿಯ ಸಮಸ್ಯೆಗಳಿಗೂ ಇದು ಸುಲಭ ಪರಿಹಾರ. ಹೆಚ್ಚೇನು ಖರ್ಚು ಬರುವುದಿಲ್ಲ.
– ಧನಂಜಯ ಭಿಡೆ, ಕೃಷಿಕರು, ಉಜಿರೆ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.