ಶ್ರೀನಗರ್: ವಾಸಸ್ಥಳದ ಹಕ್ಕುಪತ್ರ ಪಡೆದ ಚಿನ್ನದ ವ್ಯಾಪಾರಿಗೆ ಗುಂಡಿಟ್ಟು ಹತ್ಯೆಗೈದ ಉಗ್ರರು!

ಇತರ ರಾಜ್ಯದವರು ಜಾಗ ಖರೀದಿಸಲು ಅನುಮತಿ ನೀಡಿತ್ತು.

Team Udayavani, Jan 2, 2021, 10:55 AM IST

ಶ್ರೀನಗರ್: ವಾಸಸ್ಥಳದ ಹಕ್ಕುಪತ್ರ ಪಡೆದ ಚಿನ್ನದ ವ್ಯಾಪಾರಿಗೆ ಗುಂಡಿಟ್ಟು ಹತ್ಯೆಗೈದ ಉಗ್ರರು

ಶ್ರೀನಗರ್: ಕಳೆದ ತಿಂಗಳಷ್ಟೇ ವಾಸಸ್ಥಳದ ಹಕ್ಕುಪತ್ರ ಪಡೆದಿದ್ದ ಚಿನ್ನದ ವ್ಯಾಪಾರಿಯನ್ನು ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿಯೇ ಉಗ್ರರು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಶ್ರೀನಗರದಲ್ಲಿ ನಡೆದಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

65 ವರ್ಷದ ಚಿನ್ನದ ವ್ಯಾಪಾರಿ ಸತ್ಪಾಲ್ ನಿಶ್ಚಲ್ ಕಳೆದ 50 ವರ್ಷಗಳಿಂದ ಜಮ್ಮು-ಕಾಶ್ಮೀರದಲ್ಲಿ ವಾಸವಾಗಿದ್ದರು. ಕಳೆದ ತಿಂಗಳು ಸತ್ಪಾಲ್ ಅವರು ಕೇಂದ್ರದ ಕಾಯ್ದೆಯನ್ವಯ ಕಾಯಂ ವಾಸಸ್ಥಳದ ಹಕ್ಕುಪತ್ರ ಪಡೆದಿದ್ದರು. ಇದರಿಂದ ಆಕ್ರೋಶಗೊಂಡ ಉಗ್ರರು ಚಿನ್ನದ ಮಳಿಗೆಯಲ್ಲಿಯೇ ಗುಂಡಿಟ್ಟು ಹತ್ಯೆಗೈದಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಚಿನ್ನದ ವ್ಯಾಪಾರಿಯನ್ನು ಹತ್ಯೆಗೈದ ಹೊಣೆಯನ್ನು ಹೊತ್ತುಕೊಂಡಿರುವ ಉಗ್ರಗಾಮಿ ಸಂಘಟನೆ ಪ್ರಕಟಣೆ ನೀಡಿದ್ದು, ಆಭರಣ ವ್ಯಾಪಾರಿ ವಸಾಹತಿನ ಭಾಗವಾಗಿದ್ದು, ಇನ್ಮುಂದೆ ಯಾರೇ ಆಗಲಿ ಜಮ್ಮು-ಕಾಶ್ಮೀರದಲ್ಲಿ ವಾಸಸ್ಥಾನದ ಹಕ್ಕುಪತ್ರ ಪಡೆದಲ್ಲಿ ಅವರನ್ನು ಆಕ್ರಮಣಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ದೇಶದ ಯಾವುದೇ ರಾಜ್ಯದವರು ಕೂಡಾ ಜಾಗ ಖರೀದಿಸುವ ಕುರಿತು ಕೇಂದ್ರ ಸರ್ಕಾರ ನೂತನ ಕಾಯ್ದೆ ಜಾರಿಗೆ ತಂದಿತ್ತು. 2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ನಂತರ ಇತರ ರಾಜ್ಯದವರು ಜಾಗ ಖರೀದಿಸಲು ಅನುಮತಿ ನೀಡಿತ್ತು.

ಇದನ್ನೂ ಓದಿ:ಶ್ವಾನದ ಹೆಸರಿಗೆ ಆಸ್ತಿ ಬರೆದ ಮಧ್ಯಪ್ರದೇಶ ರೈತ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

ಈವರೆಗೆ ಕಾಶ್ಮೀರ ಕಣಿವೆಯಲ್ಲಿ 10 ಲಕ್ಷ ಸ್ಥಳೀಯ ನಿವಾಸಿಗಳಿಗೆ ವಾಸಸ್ಥಳದ ಹಕ್ಕುಪತ್ರಗಳನ್ನು ನೀಡಲಾಗಿದೆ. ಆದರೆ ಕಾಶ್ಮೀರದಲ್ಲಿ ಎಷ್ಟು ಮಂದಿ ಸ್ಥಳೀಯರಲ್ಲದವರಿಗೆ ಹಕ್ಕು ಪತ್ರ ನೀಡಲಾಗಿದೆ ಎಂಬ ಅಂಕಿಅಂಶವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ವರದಿ ತಿಳಿಸಿದೆ.

ಸತ್ಪಾಲ್ ಕುಟುಂಬ ಮೂಲತಃ ಪಂಜಾಬ್ ನ ಗುರುದಾಸ್ ಪುರದವರು. ಆದರೆ ಕಳೆದ ಹಲವಾರು ದಶಕಗಳಿಂದ ಶ್ರೀನಗರದಲ್ಲಿ ವಾಸವಾಗಿದ್ದರು. ಕುಟುಂಬದ ಹಲವು ಸದಸ್ಯರು ಇಲ್ಲಿ ಚಿನ್ನದ ವ್ಯಾಪಾರ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರನ್ನು ಗುರಿಯಾಗಿರಿಸಿಕೊಂಡು ಉಗ್ರರು ಅಟ್ಟಹಾಸ ನಡೆಸುತ್ತಿದ್ದ ಸಂದರ್ಭದಲ್ಲಿಯೂ ಈ ಕುಟುಂಬ ಶ್ರೀನಗರದಲ್ಲಿಯೇ ವಾಸ್ತವ್ಯ ಮುಂದುವರಿಸಿದ್ದರು ಎಂದು ವರದಿ ಹೇಳಿದೆ.

“ನಾವು ಅವರನ್ನು ಯಾವತ್ತೂ ಹೊರಗಿನವರು ಎಂದು ಪರಿಗಣಿಸಿಯೇ ಇಲ್ಲ. ಅವರು ಕೂಡಾ ಕಾಶ್ಮೀರಿಯೇ ಆಗಿದ್ದರು. ಅವರ ಅಕಾಲಿಕ ಸಾವಿಗೆ ನಾವು ಪ್ರತಿಯೊಬ್ಬರು ಸಂತಾಪ ಸೂಚಿಸುತ್ತಿದ್ದೇವೆ” ಎಂದು ಸ್ಥಳೀಯ ನಿವಾಸಿ ಶಬೀರ್ ಅಹ್ಮದ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.