ಗುರು-ಶಿಷ್ಯರ ಸಮಾಗಮ

¬ಕೋವಿಡ್ ಹಿಮ್ಮೆಟ್ಟಿಸಿ ಶಾಲೆಯತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು

Team Udayavani, Jan 2, 2021, 1:55 PM IST

ಗುರು-ಶಿಷ್ಯರ ಸಮಾಗಮ

ಬೆಳಗಾವಿ: 10 ತಿಂಗಳಿಂದ ಗುರು-ಶಿಷ್ಯರನ್ನು ದೂರು ಮಾಡಿದ್ದ ಕೋವಿಡ್ ಎಂಬ ಮಹಾಮಾರಿಗೆ ಸಡ್ಡು ಹೊಡೆದು ಮುಖಾಮುಖೀಯಾಗಿ ಯೋಗ ಕ್ಷೇಮ ವಿಚಾರಿಸಿಕೊಳ್ಳುವ ಮೂಲಕ ಋಣಾನುಬಂಧ ಗಟ್ಟಿಗೊಳಿಸಿಕೊಂಡ ಪ್ರಸಂಗ ಹೊಸ ವರುಷದಂದು ಪ್ರತಿಯೊಂದು ಶಾಲೆಗಳಲ್ಲಿ ಕಂಡು ಬಂತು.

ಕೋವಿಡ್ ಮಹಾಮಾರಿಗೆ ಭಯಭೀತರಾಗಿ ಮನೆ ಹಿಡಿದು ಕುಳಿತುಕೊಂಡಿದ್ದ ಮಕ್ಕಳು ಶಾಲೆಗಳಲ್ಲಿ ಹಾಜರಾದರು. ಶುಕ್ರವಾರ ಹೊಸ ವರ್ಷದಿಂದ ಆರಂಭಗೊಂಡ ಶಾಲೆಗಳಲ್ಲಿ ಆತಂಕದಿಂದಲೇ ಶಾಲೆಗಳತ್ತ ಹೆಜ್ಜೆ ಹಾಕಿದ್ದರೂ ಮಕ್ಕಳಲ್ಲಿ ಉತ್ಸಾಹಮಾತ್ರ ಕಡಿಮೆ ಆಗಿರಲಿಲ್ಲ. 10 ತಿಂಗಳ ಒಂದಾದೆವು ಎಂಬ ಸಾರ್ಥಕ ಭಾವ ಎಲ್ಲರಲ್ಲೂ ಕಂಡು ಬಂತು. ಕೋವಿಡ್ ಹಾವಳಿ ಇಳಿಮುಖವಾಗುತ್ತಿದ್ದಂತೆ ಸರ್ಕಾರ ಶಾಲೆ ಆರಂಭಕ್ಕೆ ಹಸಿರು ನಿಶಾನೆ ತೋರಿದ್ದು, ಹೀಗಾಗಿ ಕೋವಿಡ್‌ ನಿಯಮವಾಳಿಗಳಂತೆ ಶಾಲೆಗಳಲ್ಲೂ ಆರಂಭಿಸಲಾಗಿತ್ತು. ಬೆಳಗಾವಿ ಹಾಗೂಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಬಂದಿದ್ದರು.

ಮೊದಲ ದಿನವೇ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಮಾಗಮಗೊಂಡರು. ಪರಸ್ಪರ ಯೋಗ ಕ್ಷೇಮ ವಿಚಾರಿಸಿಕೊಂಡರು. ಪ್ರತಿಯೊಂದು ಶಾಲೆಗಳಲ್ಲಿ ತಳಿರು ತೋರಣಗಳಿಂದ, ರಂಗೋಲಿ ಹಾಕಿ ಸಿಂಗರಿಸಿವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಎಲ್ಲ ಶಾಲೆಗಳಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಎಲ್ಲ ರೀತಿಯ ಸುರಕ್ಷಾ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲ ತರಗತಿಗಳಲ್ಲಿಯೂ ಶಾಲಾ ಸಿಬ್ಬಂದಿ ಸ್ಯಾನಿಟೈಸ್‌ ವ್ಯವಸ್ಥೆ ಮಾಡಲಾಗಿತ್ತು.

ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ತರಗತಿಗೆ ಕಳುಹಿಸಿದರು. ಶಾಲಾ ಮೈದಾನಗಳಲ್ಲಿ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಯಿತು. ಸಾಮಾಜಿಕಅಂತರ ಕಾಯ್ದುಕೊಳ್ಳಲು ಒಂದು ತರಗತಿಯಲ್ಲಿ 15-20 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 2381, ಚಿಕ್ಕೋಡಿಶೈಕ್ಷಣಿಕ ಜಿಲ್ಲೆಯಲ್ಲಿ 3166 ಶಾಲೆಗಳು ಪುನರ್‌ ಆರಂಭಗೊಂಡಿದ್ದವು. ಎರಡೂ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 8 ಲಕ್ಷ 93 ಸಾವಿರ 653 ವಿದ್ಯಾರ್ಥಿಗಳಿದ್ದರು, ಶೇ. 50ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.

ಶಾಲೆಗೆ ಆಗಮಿಸುವ ಶಿಕ್ಷಕರಿಗೂ ಕಡ್ಡಾಯ ಕೋವಿಡ್‌ ಟೆಸ್ಟ್‌ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆಯಾದ್ಯಂತ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೊಸ ವರ್ಷದ ಮೊದಲ ದಿನವೇ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿ ವಿದ್ಯಾರ್ಥಿಗಳ ಪ್ರತಿಕ್ರಿಯೆ ಕಂಡು ಶಿಕ್ಷಣ ಇಲಾಖೆ ಸಿಬ್ಬಂದಿ ಖುಷಿಪಟ್ಟರು.

ಸಿಹಿ ತಿನ್ನಿಸಿ ಮಕ್ಕಳಿಗೆ ಸ್ವಾಗತ :

ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಸಿಹಿ ಪದಾರ್ಥ ನೀಡಿ ಸ್ವಾಗತಿಸಲಾಯಿತು. ಮಕ್ಕಳು ಒಳ ಬರುತ್ತಿದ್ದಂತೆ ಶಿಕ್ಷಕರು ಸಿಹಿ ತಿನಿಸು ನೀಡಿದರು. ಶಾಲೆಗಳಲ್ಲಿ ಬಲೂನ್‌ಗಳನ್ನು ಕಟ್ಟಿ, ತಳೀರು ತೋರಣಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನ ಪಾಠಕ್ಕಿಂತ ಮಕ್ಕಳ ಸಂತಸ-ಉತ್ಸಾಹದಲ್ಲಿಯೇ ದಿನ ಕಳೆಯಿತು. ನಿರೀಕ್ಷೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿದ್ದರು. ಸಮವಸ್ತ್ರ ಧರಿಸಿ ಶಾಲೆಗೆ ಆಗಮಿಸಿದ್ದರು.

ವಿದ್ಯಾರ್ಥಿಗಳು ಮೊದಲ ದಿನ ಬಹಳ ಉತ್ಸಾಹದಿಂದ ಶಾಲೆಗೆ ಬಂದಿದ್ದರು. 10 ತಿಂಗಳ ನಂತರ ಶಾಲೆಗೆ ಬಂದಾಗ ಅವರನ್ನು ನೋಡುವ ಸೌಭಾಗ್ಯ ನಮ್ಮೆಲ್ಲರಲ್ಲಿಯೂ ಇತ್ತು. ಕೋವಿಡ್ ಎಂಬ ಮಹಾಮಾರಿಯ ಆತಂಕವಿಲ್ಲದೇ, ಭಯಭೀತರಾಗದೇ ಭಾಗವಹಿಸಿದ್ದರು. ಸಿಹಿ ತಿನಿಸು ನೀಡಿ ಮಕ್ಕಳನ್ನು ಸ್ವಾಗತಿಸಿಕೊಂಡಿದ್ದು ವಿಶೇಷವಾಗಿತ್ತು. ಪ್ರವೀಣಕುಮಾರ ಅಂಗಡಿ, ಶಿಕ್ಷಕರು, ಪ್ರೌಢಶಾಲೆ ಮಾಸ್ತಮರ್ಡಿ.

 

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.