ಮಕ್ಕಳನ್ನು ಖುದ್ದಾಗಿ ಶಾಲೆಗೆ ಕರೆ ತಂದ ಪೋಷಕರು


Team Udayavani, Jan 2, 2021, 5:18 PM IST

ಮಕ್ಕಳನ್ನು ಖುದ್ದಾಗಿ ಶಾಲೆಗೆ ಕರೆ ತಂದ ಪೋಷಕರು

ಗುಂಡ್ಲುಪೇಟೆ: ಕಳೆದ ಒಂಬತ್ತು ತಿಂಗಳಿಂದ ಬಾಗಿಲು ಮುಚ್ಚಿದ್ದ ಶಾಲಾ ತರಗತಿಗಳು ತೆರೆದಿದ್ದು ಮೊದಲನೇ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಾಲೆಗೆಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹೂ ನೀಡುವ ಮೂಲಕ ಸ್ವಾಗತಿಸಿದರು.

ಶಾಲೆಯನ್ನು ಆರಂಭಿಸುವ ಸಲುವಾಗಿ ಸಕಲ ಸಿದ್ಧತೆ ಕೈಗೊಂಡಿದ್ದು, ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಿಸಿ ಪ್ರವೇಶದ ಬಳಿ ಗೇಟಿಗೆ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಈ ಹಿಂದೆ ಸರ್ಕಾರ ಶಾಲೆಗಳನ್ನು ಆರಂಭಿಸಲು ಮುಂದಾಗುತ್ತಿದ್ದಂತೆ ಅತಂಕಕ್ಕೆ ಒಳಗಾಗುತ್ತಿದ್ದ ಪೋಷ ಕರು ಈ ಬಾರಿ ತಾವೇ ಖುದ್ದಾಗಿ ಮಕ್ಕಳನ್ನು ಶಾಲೆಗಳಿಗೆ ಕರೆತಂದರು. ಇದರಿಂದ ಮೊದಲನೆ ದಿನವೇ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿತ್ತು.  ಶಿಕ್ಷಕರೊಂದಿಗೆ ಶಾಲಾಭಿವೃದ್ಧಿ ಸಮಿತಿಯ ಸದಸ್ಯರೂ ಸೇರಿ ಮಕ್ಕಳನ್ನು ಸ್ವಾಗತಿಸಿದರು.  ಪರಸ್ಪರ ಹೊಸವರ್ಷದಶುಭಾಶಯ ವಿನಿಮಯ ಮಾಡಿಕೊಂಡರು. ಪಾಲಕರ ಅನುಮತಿ ಪತ್ರದೊಂದಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಪ್ರವೇಶದಲ್ಲಿಯೇ ತಾಪಮಾನ ಪರೀಕ್ಷೆಗೊಳಪಡಿಸಿ ಕೈಗಳಿಗೂ ಸ್ಯಾನಿಟೈಸರ್‌ ಸಿಂಪಡಿಸಿ, ತರಗತಿಗಳಲ್ಲಿ ನಿಗದಿತ ಅಂತರದಲ್ಲಿ ಕುಳ್ಳರಿಸಲಾಗಿತ್ತು.  ಸರಸ್ವತಿ ಪೂಜೆ ನೆರ ವೇರಿಸಿ ತರಗತಿಗಳನ್ನು ಆರಂಭಿಸಿದರು. ಕಳೆದ ಒಂಭತ್ತು ತಿಂಗಳಿಂದ ಶಾಲೆಯ ಮುಖನೋಡದ ಮಕ್ಕಳು ತಮ್ಮ ಸಹಪಾಠಿಗಳನ್ನು ಕಂಡು ಖುಷಿಪಟ್ಟರು.

ಬಿಇಒ ಪ್ರತಿಕ್ರಿಯೆ: ತಾಲೂಕಿನಲ್ಲಿ 255 ಪ್ರಾಥಮಿಕ ಶಾಲೆಗಳಿದ್ದು, ಎಲ್ಲವನ್ನೂ ಆರಂಭಿಸಲಾಗಿದೆ. ಊಟ ತಿಂಡಿ ಹಾಗೂ ಕುಡಿಯುವ ನೀರನ್ನು ಮಕ್ಕಳೇ ತಮ್ಮ ಮನೆಗಳಿಂದ ತರಬೇಕಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮಾತ್ರ ತರಗತಿಗಳನ್ನು ನಡೆಸುವುದರಿಂದನೀರು ತರದ ಮಕ್ಕಳಿಗೆ ಕುಡಿಯಲು ಬಿಸಿನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ. ಮೊದಲ ದಿನವೇಮಕ್ಕಳಹಾಜರಾತಿ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಇದುಇನ್ನೂ ಹೆಚ್ಚಿಗೆ ಆಗಲಿದೆ. ಶೇ.50ಕ್ಕೂ ಹೆಚ್ಚು ಪ್ರೌಢಶಾಲಾವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಶಿಕ್ಷಣಾಧಿಕಾರಿ ಎಸ್‌.ಸಿ. ಶಿವಮೂರ್ತಿ ತಿಳಿಸಿದರು.

ಮೊದಲ ದಿನ ಕೋವಿಡ್ ಪ್ರಬಂಧ ಬರೆದ ಮಕ್ಕಳು :

ಕೊಳ್ಳೆಗಾಲ: ಕೋವಿಡ್  ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಕ್ರಮ ಅನುಸರಿಸಿ ಶಾಲಾ ಕಾಲೇಜು ಆರಂಭಿಸಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಸಹಕರಿಸಬೇಕು ಎಂದು ಶಾಸಕ ಎನ್‌.ಮಹೇಶ್‌ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಎಸ್‌ವಿಕೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೊಸ ವರ್ಷದ ಶುಭಾಶಯವನ್ನು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಮೊದಲ ದಿನವೇ ಶಾಲೆಯಲ್ಲಿ ಕೊರೊನಾದ ಬಗ್ಗೆ ಪ್ರಬಂಧ ಬರೆಯಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದ ಶಿಕ್ಷಕರ ಪ್ರಯತ್ನಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿ ದ್ವಿತೀಯ ಪಿಯುಸಿ ಕಾಲೇಜುಗಳಲ್ಲೂ ಕೋವಿಡ್ ಕುರಿತು ಪ್ರಬಂಧ ಬರೆಯಿಸುವುದರಿಂದ ಎಲ್ಲ ವಿದ್ಯಾರ್ಥಿಗಳಲ್ಲಿ ಕೊರೊನಾ ಭಯ ಹೋಗಲಾಡಿಸಬಹುದು. ವಿದ್ಯಾರ್ಥಿಗಳನ್ನು ಪೋಷಕರು ಪ್ರೋತ್ಸಾಹಿಸಬೇಕು. ಕೋವಿಡ್ ಎಂದು ಹೆದರಬಾರದು ಎಂದು ಸಲಹೆ ನೀಡಿದರು.

2ನೇ ಹಂತದ ಕೋವಿಡ್ ಹರಡುತ್ತಿದೆ ಎಂದು ಪ್ರಚಾರವಾಗಿದ್ದು, ಇದಕ್ಕೆ ಹೆದರಬಾರದು. ಇದರಿಂದ ಯಾರಿಗೂ ಯಾವುದೇ ಅಪಾಯ ಆಗುವುದಿಲ್ಲ. ಧೈರ್ಯವಾಗಿ ಇರಬೇಕು ಎಂದು ಶಾಸಕರು, ಸರ್ಕಾರ ನೀಡಿರುವ ಎಲ್ಲಾ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಶಿಕ್ಷಕ ವೃಂದಕ್ಕೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಕವಿತಾ, ನಗರಸಭಾ ಸದಸ್ಯ ನಾಸೀರ್‌ ಷರೀಫ್, ಬಿಇಒ ಚಂದ್ರಪಾಟೀಲ್‌, ಬಿಆರ್‌ಸಿ ಮಂಜುಳಾ, ಉಪ ಪ್ರಾಂಶುಪಾಲ ಮಹದೇವ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.