ಅಮಿತ್ ಶಾ ಮತ್ತು ಹಿಂದೂ ದೇವತೆಗಳ ಅಪಹಾಸ್ಯ ಮಾಡಿದ ಕಾಮಿಡಿಯನ್ ಮುನಾವರ್ ಫಾರೂಕಿ ಬಂಧನ
Team Udayavani, Jan 3, 2021, 9:30 PM IST
ಮುಂಬೈ: ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕುರಿತಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಹಿನ್ನಲೆಯಲ್ಲಿ ಗುಜರಾತ್ ಮೂಲದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಲಕ್ಷ್ಮಣ್ ಸಿಂಗ್ ಗೌರ್ ಅವರ ಪುತ್ರ ಏಕಲವ್ಯ ಸಿಂಗ್ ಗೌರ್ ದೂರು ದಾಖಲಿಸಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ:ಕೇವಲ ಅಧಿಕಾರಕ್ಕಾಗಿ ಆಡಳಿತ ನಡೆಸುವ ಪಕ್ಷ ಎಂದರೇ ಅದು ಬಿಜೆಪಿ: ರಾಮಲಿಂಗಾರೆಡ್ಡಿ
ಇಂಧೋರ್ ನ ಡೂಕನ್ ಎಂಬಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆಫೆಯೊಂದರಲ್ಲಿ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಅವಹೇಳನಕಾರಿಯಾದ ಮಾತುಗಳಿಂದ ಹಿಂದೂ ದೇವರುಗಳನ್ನು ಹಾಗೂ ಕೆಂದ್ರ ಗೃಹ ಸಚಿವರನ್ನು ನಿಂದಿಸಿದ್ದು ಈ ವಿಚಾರವಾಗಿ ಪ್ರತಿಭಟಿಸಿದ್ದ ಏಕಲವ್ಯ ಅವರು ಸಂಘಟಕರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಈ ಕುರಿತಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಏಕಲವ್ಯ, ಆಯೋಜಕರಿಗೆ ದೂರು ನೀಡಿದರೂ ಯಾವುದೇ ಪ್ರತಿಕ್ರಿಯೆ ತೋರದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕಾಯಿತು ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ; ಯಡಿಯೂರಪ್ಪ ಅವರೇ ಸುಪ್ರೀಂ: ಅರುಣ್ ಸಿಂಗ್
ಸದ್ಯ ಕಾಮಿಡಿಯನ್ ಮುನಾವರ್ ಫಾರೂಕಿ ಅವರನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
UV Fusion: ವರ್ಚುವಲ್ ಪ್ರಪಂಚದಲ್ಲಿ ಅನಾಥರು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ