ಹೊಳಲ್ಕೆರೆ ಪಪಂ ಇನ್ಮುಂದೆ ಪುರಸಭೆ

ಹೊಸ ವರ್ಷದ ಮೊದಲ ದಿನವೇ ಪಟ್ಟಣದ ಜನರಿಗೆ ಸಿಹಿ ಸುದ್ದಿ,ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನಿರೀಕ್ಷೆ

Team Udayavani, Jan 3, 2021, 7:21 PM IST

ಹೊಳಲ್ಕೆರೆ ಪಪಂ ಇನ್ಮುಂದೆ ಪುರಸಭೆ

ಹೊಳಲ್ಕೆರೆ: ಹೊಳಲ್ಕೆರೆ ಪಟ್ಟಣ ಪಂಚಾಯತ್‌ 2021ರ ಜನವರಿ 1 ರಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು, ಪಟ್ಟಣದ ಬಹು ಕಾಲದ ಕನಸು ನನಸಾಗಿದೆ. ಶಾಸಕ ಎಂ. ಚಂದ್ರಪ್ಪ ಪುರಸಭೆಯನ್ನಾಗಿಸುವಲ್ಲಿ ಅಹರ್ನಿಶಿ ಶ್ರಮಿಸಿ ಯಶಸ್ವಿಯಾಗಿದ್ದಾರೆ.

ಹಲವಾರು ದಶಕಗಳಿಂದ ಪಟ್ಟಣದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎನ್ನುವ ಕೊರಗು ಜನರಲ್ಲಿತ್ತು.ಒಂದಿಷ್ಟು ಸರಕಾರಿ ಕಟ್ಟಡಗಳು ಬೃಹದಾಕಾರವಾಗಿ ತಲೆ ಎತ್ತಿದ್ದನ್ನು ಬಿಟ್ಟರೆ ಜನರ ನಿರೀಕ್ಷೆಯಂತೆಪ್ರಗತಿ ಸಾಧಿಸುವಲ್ಲಿ ಪಟ್ಟಣ ಪಂಚಾಯತ್‌ ವಿಫಲವಾಗಿತ್ತು. ರಸ್ತೆ, ಚರಂಡಿ ಬೆಳಕಿನ ಸೌಲಭ್ಯ, ಕುಡಿಯವ ನೀರಿಗಾಗಿ ಜನರು ಪರದಾಡುವ ಸ್ಥಿತಿ ಇತ್ತು. ಪಪಂಗೆ ಸರಕಾರದಿಂದನಿರೀಕ್ಷಿತ ಅನುದಾನ ದೊರೆಯದೆ ಅಭಿವೃದ್ಧಿ ಪ್ರಸಕ್ತ ವರ್ಷ ಜ. 1ರಿಂದ ಪುರಸಭೆಯಾಗಿದ್ದು, 14.437 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ. ಈಗ ಪುರಸಭೆಯ ವ್ಯಾಪ್ತಿಗೆ 9 ಹಳ್ಳಿಗಳು ಸೇರಿಕೊಂಡಿವೆ.

ತಾಲೂಕಿನ 2011ನೇ ಸಾಲಿನ ಜನಗಣತಿ ಪ್ರಕಾರ ಪಟ್ಟಣದ ಈಗಿನ ಜನಸಂಖ್ಯೆ 15,783 ಇದೆ. ಪುರಸಭೆಆಗಲು ಬೇಕಾದ ಜನಸಂಖ್ಯೆ 20,000. ಹಾಗಾಗಿ ಪಟ್ಟಣದ ಸಮಿಪದ ಗ್ರಾಮಗಳಾದ ಹಳ್ಳೇಹಳ್ಳಿ ಲಂಬಾಣಿಹಟ್ಟಿ, ಕುಡಿನೀರುಕಟ್ಟೆ, ಕುಡಿನೀರುಕಟ್ಟೆ ಲಂಬಾಣಿ ಹಟ್ಟಿ, ಜೈಪುರ, ಜಯಂತಿ ನಗರ, ಗುಂಡೇರಿ ಕಾವಲ್‌, ಹೊಳಲ್ಕೆರೆ ಲಂಬಾಣಿಹಟ್ಟಿ, ಚೀರನಹಳ್ಳಿ, ಕಂಬದೇವರಹಟ್ಟಿ ಗಳನ್ನು ಪುರಸಭೆಗೆ ಸೇರ್ಪಡೆ ಮಾಡಿ ಕೊಳ್ಳಲಾಗಿದೆ. ಇದರಿಂದಾಗಿ ಪುರಸಭೆಯಾಗಿಪರಿವರ್ತನೆಯಾಗಲು ಬೇಕಾದ 21,746 ಜನಸಂಖ್ಯೆಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತಲಿನ ಕಂದಾಯ ಗ್ರಾಮಗಳ ಜಮೀನು ಸೇರಿದಂತೆ ವಿವಿಧ ಸ್ವತ್ತುಗಳನ್ನು ಪುರಸಭೆಯ ವ್ಯಾಪ್ತಿಗೆ ಸೇರಿಸುವ ಮೂಲಕ ನಿರ್ಣಯ ಅಂಗೀಕರಿಸಲಾಗಿದೆ. 10 ಕೋಟಿ ರೂ. ಅನುದಾನದಲ್ಲಿ ಪುರಸಭೆ ಕಟ್ಟಡ ನಿರ್ಮಾಣಗೊಳ್ಳಲಿದ್ದು, ನೀಲನಕಾಶೆ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಲಿದೆ.

ಒಟ್ಟಿನಲ್ಲಿ ಪಟ್ಟಣ ಪಂಚಾಯತ್‌ದಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು ಪಟ್ಟಣದ ನಾಗರಿಕರಲ್ಲಿ ಸಂತಸ ಮೂಡಿಸಿದೆ. ಇನ್ನಾದರೂಅಭಿವೃದ್ಧಿ ಕಾರ್ಯಗಳಿಗೆ ವೇಗವಾಗಿ ಚಾಲನೆ ದೊರೆಯಲಿ ಎಂಬುದು ಎಲ್ಲರ ಅಪೇಕ್ಷೆ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಪಟ್ಟಣ ಪಂಚಾಚಾಯತ್‌ಗೆ ಬರುತ್ತಿರಲಿಲ್ಲ.ಇದರಿಂದ ಪಟ್ಟಣದ ಅಭಿವೃದ್ಧಿ ಸಾಧ್ಯವೇ ಇಲ್ಲ ಎನ್ನುವಂತಹ ಸ್ಥಿತಿ ಇತ್ತು. ಶಾಸಕರು ಪುರಸಭೆ ಮಾಡುವ ಮೂಲಕ ಇಲ್ಲಿನ ಜನರಿಗೆ ಹೊಸ ಭರವಸೆ ನೀಡಿದ್ದಾರೆ. ಹೊಳಲ್ಕೆರೆಯಲ್ಲಿ ಅಭಿವೃದ್ಧಿ ಪರ್ವ ಆರಂಭಕ್ಕೆ ಅಡಿಗಲ್ಲು ಹಾಕಿದಂತಾಗಿದೆ. -ಆರ್‌.ಎ. ಅಶೋಕ್‌, ಪುರಸಭೆ ಅಧ್ಯಕ್ಷರು

 

ಹೊಳಲ್ಕೆರೆ ಪಟ್ಟಣವನ್ನು ಪುರಸಭೆಯನ್ನಾಗಿ ಮಾಡಲು ಸಾಕಷ್ಟು ಸಮಯ ಬೇಕು. ಅದಕ್ಕೆ ಪೂರಕ ದಾಖಲೆಯನ್ನು ಸಿದ್ಧಪಡಿಸಿಸಲ್ಲಿಸಿದ ಒಂದೇ ವಾರದಲ್ಲಿ ಸರಕಾರದಿಂದಆದೇಶ ಹೊರಡಿಸಲು ಶಾಸಕ ಎಂ. ಚಂದ್ರಪ್ಪ ಸಾಕಷ್ಟು ಶ್ರಮಿಸಿದ್ದಾರೆ. ಅವರು ಹಗಲು ರಾತ್ರಿಎನ್ನದೆ ವಿಧಾನಸೌಧ ಪಡಸಾಲೆಯಲ್ಲಿ ಕೆಲಸ ಮಾಡಿದ ಪರಿಣಾಮ ಇಂದು ಪುರಸಭೆಯಾಗಿದೆ. -ಎ. ವಾಸಿಂ, ಪುರಸಭೆ ಮುಖ್ಯಾಧಿಕಾರಿ

 

-ಎಸ್‌. ವೇದಮೂರ್ತಿ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.