ಮರಾಠ ಪ್ರಾಧಿಕಾರ ವಿರೋಧಿಸಿ 9ರಂದು ರೈಲ್‌ ರೋಕೋ


Team Udayavani, Jan 5, 2021, 3:26 PM IST

ಮರಾಠ ಪ್ರಾಧಿಕಾರ ವಿರೋಧಿಸಿ 9ರಂದು ರೈಲ್‌ ರೋಕೋ

ರಾಮನಗರ: ಚುನಾವಣೆ ಹಿನ್ನೆಲೆಯಲ್ಲಿ ಭಾರಿ ಸಂಚು, ಪಿತೂರಿ ಮಾಡಿ ಸ್ಥಾಪಿಸಿರುವ ಮರಾಠಿ ಪ್ರಾಧಿಕಾರವನ್ನು ವಿರೋಧಿಸಿ ಮತ್ತು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಜ.9ರಂದು ರೈಲ್‌ ರೋಕೋ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಕನ್ನಡ ಚಳವಳಿ ಪಕ್ಷದ ವಾಟಾಳ್‌ ನಾಗರಾಜ್‌ ಹೇಳಿದರು.

ನಗರದ ಐಜೂರು ವೃತ್ತದಲ್ಲಿ ಮರಾಠ ಪ್ರಾಧಿಕಾರ ವಿರೋಧಿಸಿ ಹಾಗೂ ಸಿಎಂ ಬಿ.ಎಸ್‌.ಯಡಿಯೂರಪ್ಪರ ರಾಜೀನಾಮೆಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.ಚುನಾವಣೆಗಳಲ್ಲಿ ತಮ್ಮವರನ್ನು ಗೆಲ್ಲಿಸಿಕೊಳ್ಳಲುಮರಾಠ ಪ್ರಾಧಿಕಾರ ಸ್ಥಾಪನೆಯ ಸಂಚುರೂಪಿಸಿದ್ದಾರೆ. ಪ್ರಾಧಿಕಾರವನ್ನು ವಿರೋಧಿಸಿ ಈಗಾಗಲೆ ರಾಜ್ಯ ಬಂದ್‌ ಮಾಡಿ ಹೋರಾಟ ಮಾಡಲಾಗಿದೆ. ಇದೀಗ ರೈಲ್‌ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಬೇಕು ಎಂಬ ಚಿಂತನೆ ಯಾವ ಸರ್ಕಾರಕ್ಕೂ ಇರಲಿಲ್ಲ. ಈಸರ್ಕಾರಕ್ಕೆ ಬಂದಿದೆ. ಬಸವಕಲ್ಯಾಣ ಕ್ಷೇತ್ರವನ್ನು ಇಲ್ಲಿಯವರೆಗೂ ಮರೆತಿದ್ದ ಮುಖ್ಯಮಂತ್ರಿಗಳಿಗೆ ಅಲ್ಲಿ ಚುನಾವಣೆ ಎದುರಾಗುತ್ತಿದ್ದಂತೆ ನೆನೆಪಾಗಿ ಬಿಟ್ಟಿದೆ. ಅಲ್ಲಿ ಜ.6ರಂದು ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೆವೇರಿಸುತ್ತಾರಂತೆ. ಮುಖ್ಯಮಂತ್ರಿಗಳು ಶಂಕುಸ್ಥಾಪನೆ ಮಾಡುತ್ತಿರುವುದು ಅಲ್ಲಮ ಪ್ರಭುಗಳ ಅನುಭವ ಮಂಟಪ ಅಲ್ಲ, ಯಡಿಯೂರಪ್ಪನವರ ಅನುಭವ ಮಂಟಪ ಎಂದು ಟೀಕಾ ಪ್ರಹಾರ ನಡೆಸಿದರು.

ಬಿಎಸ್‌ವೈ ನಿರ್ಮಿಸಲು ಹೊರಟಿರುವ ಅನುಭವ ಮಂಟಪಬಸವಣ್ಣನಿಗೆ, ಅಲ್ಲಮ ಪ್ರಭುಗಳಿಗೆ ಮಾಡುತ್ತಿರುವ ಅಪಚಾರ ಹೀಗಾಗಿ ಈ ಅಪಚಾರವನ್ನು ವಿರೋಧಿಸಿ ಜ.6ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಬಸವಣ್ಣನವರ ಪ್ರತಿಮೆಯ ಮುಂಭಾಗ ಮಲಗಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು. ಅನುಭವನ ಮಂಟಪದಲ್ಲಿ ಅಲ್ಲಮಪ್ರಭುಗಳು, ಅಕ್ಕಮಹಾದೇವಿಯವರು, ಬಸವಣ್ಣನವರು ಎಲ್ಲಿ ಕುಳಿತುಕೊಳ್ಳುತ್ತಿದ್ದರು ಎಂಬುದು ಗೊತ್ತೆ ಎಂದು ಯಡಿಯೂರಪ್ಪರನ್ನು ಪ್ರಶ್ನಿಸಿದರು.

ಬಸವಣ್ಣನವರ ಬಗ್ಗೆ ಯಡಿಯೂರಪ್ಪರಿಗೆ ಏನೂ ಗೊತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ. ರಾಜ್ಯಕ್ಕೆ ಅಪಚಾರಮಾಡುವ ಈ ನಾಟಕ ನಿಲ್ಲಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಗ್ರಾಪಂಗಳು ಪ್ರಜಾಪ್ರಭುತ್ವದ ಬೇರುಗಳು.ಆದರೆ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ವೇತನ ನಾಚಿಕೆಯಾಗುವಂತಹದ್ದು, ಅಧ್ಯಕ್ಷರಿಗೆ ಮಾಸಿಕ 3 ಸಾವಿರ, ಉಪಾಧ್ಯಕ್ಷರಿಗೆ 2 ಮತ್ತು ಸದಸ್ಯರಿಗೆ 1 ಸಾವಿರ ವೇತನ. ಸದಸ್ಯರಿಗೆ ಸಿಗುವ ವೇತನ ದಿನಕ್ಕೆ ಕೇವಲ 33 ರೂಪಾಯಿ. ಈ ದುಡ್ಡಿನಲ್ಲಿ ಸದಸ್ಯರು ತಮ್ಮ ಕುಟುಂಬಕ್ಕೆ ಕಡುಬು ಕೊಳ್ಳಲು ಸಹ ಆಗೋಲ್ಲ ಎಂದರು.

ಪೌರಕಾರ್ಮಿಕರ ವೇತನಕ್ಕೆ ಹೋಲಿಸಿದರೆ ಇದು ನಾಚಿಕೆಯಾಗುತ್ತೆ ಹರಿಹಾಯ್ದರು. ಗ್ರಾಪಂ ಅಧ್ಯಕ್ಷರಿಗೆ ಮಾಸಿಕ ಕನಿಷ್ಠ 20 ಸಾವಿರ ಕೊಡಬೇಕು. ಅದರಂತೆ ಉಪಾಧ್ಯಕ್ಷರಿಗೂ, ಸದಸ್ಯರಿಗೂ ವೇತನ ದೊರೆಯಬೇಕು ಎಂದರು.ಪ್ರತಿಭಟನೆಯಲ್ಲಿ ಸ್ಥಳೀಯ ಪ್ರಮುಖರಾದ ಜಗದೀಶ್‌, ಜಯಕುಮಾರ್‌,ಸುರೇಶ್‌ಜಯರಾಂ, ತ್ಯಾಗರಾಜ್‌, ಚಂದ್ರಶೇಖರ್‌, ಭಾಸ್ಕರ್‌, ಪಾರ್ಥಸಾರಥಿ ಇದ್ದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.