ಬಿಆರ್‌ಟಿ, ಮಹದೇಶ್ವರ ವನ್ಯಧಾಮ ; ಕಪ್ಪು ಚಿರತೆಗಳ ಆವಾಸ ಸ್ಥಾನ


Team Udayavani, Jan 6, 2021, 5:35 AM IST

ಬಿಆರ್‌ಟಿ, ಮಹದೇಶ್ವರ ವನ್ಯಧಾಮ ; ಕಪ್ಪು ಚಿರತೆಗಳ ಆವಾಸ ಸ್ಥಾನ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕೆಮರಾ ಟ್ರ್ಯಾಪ್‌ ಮೂಲಕ ಕಂಡು ಬಂದಿರುವ ಕಪ್ಪು ಚಿರತೆ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ. ಈಗ ಕಪ್ಪು ಬಣ್ಣದ ಚಿರತೆಗಳ ಆವಾಸ ಸ್ಥಾನದ ಪಟ್ಟಿಗೆ ಮಹದೇಶ್ವರ ವನ್ಯಧಾಮವೂ ಸೇರಿದಂತಾಗಿದೆ.

ಕಳೆದ ಆಗಸ್ಟ್‌ನಲ್ಲಿ ಬಿಳಿಗಿರಿರಂಗ ನಾಥಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೌಳಿಕಟ್ಟೆ ಡ್ಯಾಂ ಬಳಿ ಅರಣ್ಯ ಇಲಾಖೆ ಅಳವಡಿಸಿರುವ ಕೆಮರಾ ಟ್ರ್ಯಾಪ್‌ನಲ್ಲಿ ಕಪ್ಪು ಚಿರತೆಯ ಛಾಯಾಚಿತ್ರ ಮೂಡಿಬಂದಿತ್ತು. ಇದಾದ ಬಳಿಕ, ಮಲೆ ಮಹದೇಶ್ವರ ವನ್ಯಧಾಮದ ಲೊಕ್ಕನಹಳ್ಳಿ ಬೀಟ್‌ನಲ್ಲಿ ಅಳವಡಿಸಿರುವ ಕೆಮರಾ ಟ್ರ್ಯಾಪ್‌ನಲ್ಲಿ, ಡಿಸೆಂಬರ್‌ನಲ್ಲಿ ಕಪ್ಪು ಚಿರತೆ ಸೆರೆಯಾಗಿದೆ. ಬಿಆರ್‌ಟಿಯ ಬೈಲೂರು ವನ್ಯಜೀವಿ ವಲಯ , ಮಲೆ ಮಹದೇಶ್ವರ ಪಿ.ಜಿ. ಪಾಳ್ಯ ವನ್ಯಜೀವಿ ವಲಯಗಳು ಸಮೀಪ ದಲ್ಲೇ ಇದ್ದು, ಎರಡೂ ಕಡೆ ಕಂಡಿದ್ದು ಒಂದೇ ಕಪ್ಪು ಚಿರತೆಯೇ ಎಂಬುದು ಸ್ಪಷ್ಟವಾಗಿಲ್ಲ.

ಪ್ರಪಂಚದ ಚಿರತೆಗಳಲ್ಲಿ ಶೇ. 11ರಷ್ಟು ಕಪ್ಪು ಚಿರತೆಗಳಿವೆ. ಮಲೇಷ್ಯಾ, ಥೈಲ್ಯಾಂಡ್‌, ಜಾವಾ ದ್ವೀಪಗಳಲ್ಲಿ ಇವು ಹೆಚ್ಚಿವೆ. ಅಲ್ಲದೇ ಭಾರತ, ಶ್ರೀಲಂಕಾ, ನೇಪಾಲದಲ್ಲೂ ಕಂಡು ಬರುತ್ತವೆ. ಭಾರತದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಒಡಿಶಾ, ಛತ್ತೀಸ್‌ಗಢ, ಪ. ಬಂಗಾಲ, ಅಸ್ಸಾಂನಲ್ಲಿ ಕಂಡು ಬರುತ್ತವೆ. ಕರ್ನಾಟಕದಲ್ಲಿ ನಾಗರಹೊಳೆ, ಬಂಡೀಪುರ, ಭದ್ರಾ, ಕಾಳಿ, ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶಗಳಲ್ಲಿ ಕಂಡು ಬಂದಿವೆ. ಈಗ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲೂ ಕಪ್ಪು ಚಿರತೆ ಪತ್ತೆಯಾಗಿದೆ. ಆದರೆ, ಕಬಿನಿ ಅರಣ್ಯ ಪ್ರದೇಶದಲ್ಲಿ ಕಪ್ಪು ಚಿರತೆಗಳು ವನ್ಯಜೀವಿ ಛಾಯಾಗ್ರಾಹಕರಿಗೆ ಹೆಚ್ಚು ಸೆರೆಸಿಕ್ಕಿ ಪ್ರಸಿದ್ಧಿಯಾಗಿವೆ!

ದಪ್ಪ ಚುಕ್ಕೆಗಳ ಚಿರತೆಗಳು ಬೇರೆ ಪ್ರಭೇದವಲ್ಲ ಅಥವಾ ಉಪಪ್ರಭೇದವೂ ಅಲ್ಲ! ಮಾಮೂಲಿ ಚಿರತೆಗಳ ವಂಶ ವಾಹಿನಿಯಿಂದ, ಚರ್ಮ ಮತ್ತು ಕೂದಲಿನಲ್ಲಿ ಮೆಲನಿನ್‌ ಅಂಶ ಜಾಸ್ತಿ ಯಾಗಿ ಅವುಗಳ ಚರ್ಮದ ಬಣ್ಣ ಕಪ್ಪಾಗಿರುತ್ತದೆ. ಇದನ್ನು ಮೆಲನಿಸಂ ಎಂದು ಕರೆಯುತ್ತಾರೆ.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.