ಕರಾವಳಿಗೆ ನೀಲಿ ಆರ್ಥಿಕತೆ: ಮೋದಿ

ಕೊಚ್ಚಿ-ಮಂಗಳೂರು ಸಿಎನ್‌ಜಿ ಕೊಳವೆ ಮಾರ್ಗ ಲೋಕಾರ್ಪಣೆ

Team Udayavani, Jan 6, 2021, 12:37 AM IST

ಕರಾವಳಿಗೆ ನೀಲಿ ಆರ್ಥಿಕತೆ: ಮೋದಿ

ಪ್ರಧಾನಿ ಮೋದಿ ಸಿಎನ್‌ಜಿ ಪೈಪ್‌ಲೈನ್‌ ಉದ್ಘಾಟಿಸಿದರು.

ಮಂಗಳೂರು/ ಹೊಸದಿಲ್ಲಿ: ಕರಾವಳಿ ನಗರಗಳಲ್ಲಿ ನೀಲಿ ಆರ್ಥಿಕತೆ (ಬ್ಲೂ ಎಕಾನಮಿ) ಬೆಳೆಸುವ ಸಂಕಲ್ಪವಿದ್ದು, ಈ ನಿಟ್ಟಿನಲ್ಲಿ ಸಮಗ್ರ ಯೋಜನೆಗಳನ್ನು “ಆತ್ಮನಿರ್ಭರ ಭಾರತ’ ಯೋಜನೆಯಡಿ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಂಗಳೂರು-ಕೊಚ್ಚಿ ಮಧ್ಯೆ 450 ಕಿ.ಮೀ. ನೈಸರ್ಗಿಕ ಅನಿಲ (ಸಿಎನ್‌ಜಿ) ಸರಬರಾಜು ಕೊಳವೆ ಮಾರ್ಗವನ್ನು ಮಂಗಳವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಬಹುವಿಧ ಸಂಪರ್ಕ, ಕರಾವಳಿ ರಸ್ತೆ ನಿರ್ಮಾಣ ಇತ್ಯಾದಿಗೆ ಒತ್ತು ನೀಡಲಾಗುವುದು ಎಂದರು.

ಕರಾವಳಿ ಪರಿಸರವನ್ನು ಸಂರಕ್ಷಿಸುವುದಕ್ಕೆ ಸರಕಾರ ಬದ್ಧವಾಗಿದೆ. ಆಳ ಸಮುದ್ರ ಮೀನುಗಾರಿಕೆಗೆ ಸಹಕಾರ, ಸುಲಭ ಮತ್ತು ಅಗ್ಗದ ಸಾಲವನ್ನು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ನೀಡುವ ಉದ್ದೇಶ ವಿದೆ. ಕರಾವಳಿಯನ್ನು ನೆಮ್ಮದಿ ಬದುಕು- ನೆಮ್ಮದಿಯ ವ್ಯಾಪಾರಗಳಿಗೆ ಮಾದರಿಯಾಗಿ ಪರಿಗಣಿಸಲಾಗುವುದು ಎಂದರು.

ಒಂದು ರಾಷ್ಟ್ರ- ಒಂದು ಗ್ಯಾಸ್‌ ಗ್ರಿಡ್‌
ದೇಶಕ್ಕೆ ಒಂದು ಗ್ಯಾಸ್‌ ಗ್ರಿಡ್‌ ರೂಪಿಸುವ ನಿಟ್ಟಿನಲ್ಲಿ ಹಲವಾರು ನೀತಿಗಳನ್ನು ಸರಕಾರ ರೂಪಿಸುತ್ತಿದೆ. ಒಟ್ಟು ಇಂಧನದ ಪೈಕಿ ನೈಸರ್ಗಿಕ ಅನಿಲದ ಪಾಲನ್ನು ಶೇ. 6ರಿಂದ ಶೇ. 15ಕ್ಕೆ ಏರಿಸುವ ಗುರಿ ಇದೆ. ಇದರ ಭಾಗವಾಗಿ ಕೊಚ್ಚಿನ್‌ – ಮಂಗಳೂರು ಪೈಪ್‌ಲೈನ್‌ ಸಾಕಾರಗೊಂಡಿದೆ ಎಂದರು.

ಮಾಲಿನ್ಯ ಪ್ರಮಾಣ ಕುಗ್ಗುವ ವಿಶ್ವಾಸ
ನೈಸರ್ಗಿಕ ಅನಿಲ ಸಂಪರ್ಕದಿಂದ ಎರಡೂ ರಾಜ್ಯಗಳ ಜನರ ಬದುಕಿನ ನೆಮ್ಮದಿ ಹೆಚ್ಚಲಿದ್ದು, ಬಡವರು, ಮಧ್ಯಮ ವರ್ಗ ಮತ್ತು ಉದ್ದಿಮೆದಾರರಿಗೆ ಇಂಧನ ವೆಚ್ಚ ಕಡಿಮೆಯಾಗಲಿದೆ. ಇದು ಎಂಆರ್‌ಪಿಎಲ್‌ಗೆ ಶುದ್ಧ ಇಂಧನ ಪೂರೈಸಲಿದೆ. ರಸಗೊಬ್ಬರ, ಪೆಟ್ರೋಕೆಮಿಕಲ್ಸ್‌ ಮತ್ತು ಇಂಧನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ವಿಸ್ತರಣೆಗೊಳ್ಳಲಿದೆ. ಇದರಿಂದ ಪ್ರವಾಸೋದ್ಯಮ ಹೊಸ ಬದಲಾವಣೆಗೆ ತೆರೆದುಕೊಳ್ಳಲಿದೆ ಎಂದರು.

ಕರ್ನಾಟಕ ರಾಜ್ಯಪಾಲ ವಿ.ಆರ್‌. ವಾಲಾ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌, ಕರ್ನಾಟಕ ಸಿಎಂ ಬಿಎಸ್‌ವೈ, ಕೇರಳ ಸಿಎಂ ಪಿಣರಾಯಿ ವಿಜಯನ್‌, ಸಚಿವರಾದ ಸಚಿವ ಧರ್ಮೇಂದ್ರ ಪ್ರಧಾನ್‌, ಪ್ರಹ್ಲಾದ್‌ ಜೋಶಿ ಉಪಸ್ಥಿತರಿದ್ದರು.

ಯಾವ್ಯಾವ ಜಿಲ್ಲೆಗಳ ಮೂಲಕ ಪೈಪ್‌ಲೈನ್‌: ಎರ್ನಾಕುಲಂ, ತೃಶ್ಶೂರು, ಪಾಲಕ್ಕಾಡ್‌, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು, ಕಾಸರಗೋಡು, ದಕ್ಷಿಣ ಕನ್ನಡ

ಅನಿಲ ಸಾಗಣೆ ಸಾಮರ್ಥ್ಯ ದಿನಕ್ಕೆ 12 ಮಿಲಿಯ ಕ್ಯುಬಿಕ್‌ ಮೀ. ನಿರ್ಮಾಣ ವೆಚ್ಚ 3,000 ಕೋ.ರೂ.

450 ಕಿ.ಮೀ ಪೈಪ್‌ಲೈನ್‌ ಉದ್ದ
10 ಜಿಲ್ಲೆಗಳಿಗೆ ಅನಿಲ

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.